'ಎಲ್ಲರನ್ನೂ ಒಳಗೊಂಡ ಭಾರತ"ದ ಪ್ರತಿನಿಧಿ' ಎಂದ ಸಂಸದೆ ನುಸ್ರತ್ ಜಹಾನ್
ಕೊಲ್ಕತ್ತಾ, ಜೂ 30: ತೃಣಮೂಲ ಕಾಂಗ್ರೆಸ್ಸಿನ ಸಂಸದೆ ನುಸ್ರತ್ ಜಹಾನ್ ಅವರು ಸಂಸತ್ತಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ವೇಳೆ ಹಣೆಗೆ ಸಿಂಧೂರ ಇಟ್ಟಿದ್ದಕ್ಕೆ ಮುಸ್ಲಿಂ ಧರ್ಮಗುರುಗಳು ಆಕ್ಷೇಪ ವ್ಯಕ್ತಪಡಿಸಿ, ಫತ್ವಾ ಹೊರಡಿಸಿದ್ದರು. ಧರ್ಮ ಕಟ್ಟಳೆ ಹೇರಿಕೆ ವಿರುದ್ಧ ತಿರುಗಿ ಬಿದ್ದಿರುವ ನುಸ್ರತ್, ಸಿಂಧೂರ ಮತ್ತು ಬಳೆ ಧರಿಸಿ ಸಂಸತ್ ಅಧಿವೇಶನದಲ್ಲಿ ಕಾಣಿಸಿಕೊಂಡು ಪ್ರಮಾಣ ವಚನ ಸ್ವೀಕರಿಸಿದ್ದನ್ನು ಸಮರ್ಥಿಸಿಕೊಂಡಿದ್ದಾರೆ.
"ಎಲ್ಲರನ್ನೂ ಒಳಗೊಂಡ ಭಾರತ"ದ ಪ್ರತಿನಿಧಿ ಎಂದು ಪ್ರತಿಕ್ರಿಯಿಸಿ, "ಜಾತಿ, ವರ್ಣ, ಧರ್ಮದ ತಡೆಗಳನ್ನು ಮೀರಿ ಎಲ್ಲರನ್ನೂ ಒಳಗೊಂಡ ಭಾರತವನ್ನು ಪ್ರತಿನಿಧಿಸುತ್ತೇನೆ" ಎಂಬ ಹೇಳಿಕೆಯನ್ನು ಮೊದಲ ಬಾರಿಗೆ ಲೋಕಸಭೆಗೆ ಆಯ್ಕೆಯಾದ ನುಸ್ರತ್ ಟ್ವೀಟ್ ಮಾಡಿದ್ದಾರೆ. 'ನಾನು ಎಲ್ಲ ಧರ್ಮಗಳನ್ನು ಗೌರವಿಸುತ್ತೇನೆ; ಆದರೆ ಮುಸ್ಲಿಂ ಆಗಿಯೇ ಉಳಿಯುತ್ತೇನೆ' ಎಂದು ಸ್ಪಷ್ಟಪಡಿಸಿದ್ದಾರೆ.

'ನನ್ನ ಉಡುಪಿನ ಬಗ್ಗೆ ಯಾರೂ ಟೀಕಿಸಬಾರದು. ನಂಬಿಕೆ ಎನ್ನುವುದು ಉಡುಗೆಯನ್ನು ಮೀರಿದ್ದು ಹಾಗೂ ಇದು ಎಲ್ಲ ಧರ್ಮಗಳ ಅಮೂಲ್ಯ ಸಿದ್ಧಾಂತಗಳ ಬಗೆಗಿನ ನಂಬಿಕೆ ಮತ್ತು ಆಚರಣೆಗೆ ಸಂಬಂಧಿಸಿದ್ದು" ಎಂದು ಹೇಳಿದ್ದಾರೆ. ನುಸ್ರತ್ ಟ್ವೀಟ್ ಗೆ ಗೆಳತಿ, ಸಂಸದೆ ಮಿಮಿ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ.
Paying heed or reacting to comments made by hardliners of any religion only breeds hatred and violence, and history bears testimony to that.. #NJforInclusiveIndia #Youthquake #secularIndia pic.twitter.com/mHmINQiYzj
— Nusrat (@nusratchirps) June 29, 2019
ನುಸ್ರತ್ ಅವರ ಮದುವೆ ಟರ್ಕಿಯಲ್ಲಿ ನಡೆದಿತ್ತು. ಹೀಗಾಗಿ ಜೂನ್ 17 ಮತ್ತು 18ರಂದು ನಡೆದಿದ್ದ ಸಂಸತ್ ಕಲಾಪ, ಪ್ರಮಾಣ ವಚನ ಸ್ವೀಕಾರಕ್ಕೆ ನುಸ್ರತ್ ಮತ್ತು ಮಿಮಿ ಇಬ್ಬರೂ ಗೈರಾಗಿದ್ದರು. ಈ ಕಾರಣದಿಂದ ಇಬ್ಬರೂ ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದರು. ಟರ್ಕಿಯ ಬೋಡ್ರಮ್ ಪಟ್ಟಣದಲ್ಲಿ ಮದುವೆ ನಡೆದಿತ್ತು. ಕುಟುಂಬ ವರ್ಗ ಮತ್ತು ಅವರ ಆಪ್ತ ಸ್ನೇಹಿತರು ಹಾಗೂ ಬಂಧುಗಳು ಭಾಗವಹಿಸಿದ್ದರು.
We r indian and thats our only identification
— Mimssi (@mimichakraborty) June 29, 2019
👍🏻 proud indian nd will be
Love u @nusratchirps https://t.co/qTTP0nbzTI
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications