ಸೊಹ್ರಾಬುದ್ದೀನ್ ಎನ್ ಕೌಂಟರ್: ಅನುಮಾನ ಮೂಡಿಸಿದ ಇನ್ಸ್ಪೆಕ್ಟರ್ ಹೇಳಿಕೆ
ನವದೆಹಲಿ, ನವೆಂಬರ್ 29: ಸೊಹ್ರಾಬುದ್ದೀನ್ ಎನ್ಕೌಂಟರ್ ನಕಲಿಯಲ್ಲ ಎಂದು ಹೇಳುವಂತೆ ಹಲವು ಜನರಿಂದ ತಮ್ಮ ಮೇಲೆ ಒತ್ತಡ ಬಂದಿರುವುದಾಗಿ ರಾಜಸ್ತಾನ ಪೊಲೀಸರ ತಂಡದ ಇನ್ಸ್ಪೆಕ್ಟರ್ ಒಬ್ಬರು ಹೇಳಿದ್ದಾರೆ.
ಸೊಹ್ರಾಬುದ್ದೀನ್ ಶೇಖ್ ಮತ್ತು ತುಳಸಿರಾಮ್ ಪ್ರಜಾಪತಿ ನಕಲಿ ಎನ್ ಕೌಂಟರ್ ಪ್ರಕರಣದಲ್ಲಿ ಆರೋಪಿಯಾಗಿರುವ ಇನ್ಸ್ಪೆಕ್ಟರ್ ಅಬ್ದುಲ್ ರೆಹಮಾನ್ ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಈ ಹೇಳಿಕೆ ನೀಡಿದ್ದಾರೆ.
ಎಫ್ಐಆರ್ ನೈಜವಾಗಿದ್ದು, ಅದನ್ನು ನಾನೇ ದಾಖಲಿಸಿದ್ದೇನೆ ಎಂದು ಹೇಳುವಂತೆ ಯಾವಾಗಲೂ ಅನೇಕರಿಂದ ಒತ್ತಡಗಳು ಬರುತ್ತಿದ್ದವು.

ಆದರೆ ಎಫ್ಐಆರ್ ದಾಖಲಿಸಿದ್ದು ನಾನು ಅಲ್ಲ ಎಂದು ಸಿಐಡಿ ಮತ್ತು ಸಿಬಿಐ ಎರಡಕ್ಕೂ ತಿಳಿಸಿದ್ದೆ. ಆದರೆ, ಆ ನಿಟ್ಟಿನಲ್ಲಿ ಎರಡೂ ಸಂಸ್ಥೆಗಳು ತನಿಖೆ ನಡೆಸಲಿಲ್ಲ. ಎಫ್ಐಆರ್ನಲ್ಲಿ ನನ್ನ ಸಹಿ ಇರಲಿಲ್ಲ. ಇದನ್ನೂ ತನಿಖಾ ಸಂಸ್ಥೆಗಳಿಗೆ ಹೇಳಿದ್ದೆ ಎಂದು ತಿಳಿಸಿದ್ದಾರೆ.
2005ರಲ್ಲಿ ಸೊಹ್ರಾಬುದ್ದೀನ್ ಎನ್ಕೌಂಟರ್ ಬಳಿಕ, ಆತ ಗುಜರಾತ್ನಲ್ಲಿ ಕೋಮು ಸೌಹಾರ್ದ ಕದಡಲು ಸಂಚು ರೂಪಿಸಿದ್ದ ಲಷ್ಕರ್ ಎ ತಯಬಾದ ಉಗ್ರನಾಗಿದ್ದ ಎಂದು ಎಫ್ಐಆರ್ ದಾಖಲಿಸಲಾಗಿತ್ತು.
ಸುಪ್ರೀಂಕೋರ್ಟ್ ನಿರ್ದೇಶನದಂತೆ ಪ್ರಕರಣವನ್ನು ಕೈಗೆತ್ತಿಕೊಂಡಿದ್ದ ಸಿಬಿಐ, 2005ರ ನವೆಂಬರ್ 23ರಂದು ಎನ್ ಕೌಂಟರ್ ಆಗುವ ಮೂರು ದಿನಗಳ ಮುನ್ನ ಸೊಹ್ರಾಬುದ್ದೀನ್ ಮತ್ತು ಆತನ ಪತ್ನಿ ಕೌಸರ್ ಬಿ ಅವರನ್ನು ಅಪಹರಿಸಲಾಗಿತ್ತು ಎಂದು ತಿಳಿಸಿತ್ತು.
ಈ ಪ್ರಕರಣದಲ್ಲಿ 38 ಮಂದಿಯನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿದೆ. ತಾವು ನಿರಪರಾಧಿಗಳು ಎಂದು ಪ್ರತಿಪಾದಿಸಿರುವ ಎಲ್ಲ ಹಿರಿಯ ಅಧಿಕಾರಿಗಳು ಮತ್ತು ರಾಜಕಾರಣಿಗಳು ಎನ್ಕೌಂಟರ್ ನೈಜವಾದದ್ದು ಎಂದೇ ಹೇಳಿದ್ದಾರೆ.
ಆದರೆ, ಈಗ ರೆಹಮಾನ್ ನೀಡಿರುವ ಹೇಳಿಕೆ ಪ್ರಕರಣದ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications