ಎಚ್ಎಎಲ್ ಯುದ್ಧವಿಮಾನ ಪತನ: ಸದನದಲ್ಲಿ ರಾಜೀವ್ ಚಂದ್ರಶೇಖರ್ ಪ್ರಶ್ನೆ
ನವದೆಹಲಿ, ಫೆಬ್ರವರಿ 06: ಎಚ್ಎಎಲ್ನಲ್ಲಿ ಫೆಬ್ರವರಿ 1 ರಂದು ಮಿರಾಜ್ ಯುದ್ಧವಿಮಾನ ಪತನಗೊಂಡು ಇಬ್ಬರು ಪೈಲಟ್ಗಳು ಸಾವನ್ನಪ್ಪಿರುವ ಪ್ರಕರಣದ ಬಗ್ಗೆ ಬಿಜೆಪಿ ರಾಜ್ಯಸಭಾ ಸಂಸದ ರಾಜೀವ್ ಚಂದ್ರಶೇಖರ್ ಅವರು ಸಂಸತ್ನ ಗಮನಸೆಳೆಯುವ ಯತ್ನ ಮಾಡಿದರು ಆದರೆ ಇತರ ಸಂಸದರ ಗದ್ದಲದಿಂದಾಗಿ ಸಾಧ್ಯವಾಗಲಿಲ್ಲ.
ಸಿಬಿಐ ವರ್ಸಸ್ ಮಮತಾ ಬ್ಯಾನರ್ಜಿ ಗಲಾಟೆಯೇ ಇಂದು ಉಭಯ ಸದನದ ಕಾಲಾವಕಾಶವನ್ನು ವ್ಯಯ ಮಾಡಿದ ಕಾರಣ ಟಿಎಂಸಿ ಸಂಸದರ ಗಲಾಟೆ ನಡುವೆ ರಾಜೀವ್ ಚಂದ್ರಶೇಖರ್ ಅವರು ತಮ್ಮ ಪ್ರಶ್ನೆಯನ್ನು ಕೇಳಲಾಗಲಿಲ್ಲ.

ಶೂನ್ಯವೇಳೆಯಲ್ಲಿಯೇ ಎಚ್ಎಎಲ್ ದುರ್ಘಟನೆ ಬಗ್ಗೆ ಚರ್ಚೆ ಮಾಡಲು ರಾಜೀವ್ ಚಂದ್ರಶೇಖರ್ ಅವರು ಅವಕಾಶ ಪಡೆದಿದ್ದರು ಆದರೆ ಟಿಎಂಸಿ ಸಂಸದರ ಗಲಾಟೆಯಿಂದಾಗಿ ಘಟನೆ ಬಗ್ಗೆ ಸದನದ ಗಮನ ಸೆಳೆಯಲು ಸಾಧ್ಯವಾಗಿಲ್ಲ.
ಆದರೆ ಫೆಬ್ರವರಿ 06ರಂದು ಶೂನ್ಯವೇಳೆಯಲ್ಲಿಯೇ ಇದೇ ವಿಷಯವನ್ನು ರಾಜೀವ್ ಚಂದ್ರಶೇಖರ್ ಅವರು ಚರ್ಚಿಸಲಿದ್ದು, ಮಿರಾಜ್ ಯುದ್ಧ ವಿಮಾನದ ಪತನದ ಬಗ್ಗೆ ವಿಸ್ತೃತ ತನಿಖೆಗೆ ಅವರು ಒತ್ತಾಯಿಸಲಿದ್ದಾರೆ.
ವಿಮಾನದಲ್ಲಿ ಪತನಗೊಂಡು ಅಸುನೀಗಿದ ಪೈಲೆಟ್ಗಳು ಸಾಮಾನ್ಯರಾಗಿರಲಿಲ್ಲ, ಅವರು ತರಬೇತಿ ಹೊಂದಿದ ಅನುಭವಿ ಪೈಲೆಟ್ಗಳಾಗಿದ್ದರು, ಹಾಗಾಗಿ ಈ ಪ್ರಕರಣದ ವಿಸ್ತೃತ ತನಿಖೆ ಅತ್ಯಂತ ಅವಶ್ಯಕ ಎಂದು ಅವರು ಮಾಧ್ಯಮಗಳಿಗೆ ಹೇಳಿದ್ದಾರೆ.
ಪರೀಕ್ಷಾರ್ಥ ಉಡಾವಣೆ ವೇಳೆ ವಿಮಾನಗಳು ಅಪಘಾತಕ್ಕೆ ಈಡಾಗುತ್ತಿರುವುದು ಮೊದಲಲ್ಲ, ಹಾಗಾಗಿ ಎಚ್ಎಎಲ್ ಮತ್ತು ಇತರೆ ಸಂಸ್ಥೆಗಳು ತಾಂತ್ರಿಕವಾಗಿ ಇನ್ನಷ್ಟು ಆಧುನಿಕ ಆಗುವ ಹಾಗೂ ಪರೀಕ್ಷಾರ್ಥ ಉಡಾವಣೆ ವೇಳೆ ಅಸುನೀಗಿದ ಪೈಲೆಟ್ಗಳ ಕುಟುಂಬಕ್ಕೆ ಶಕ್ತಿ ನೀಡುವ ಯೋಜನೆಯನ್ನು ಮಾಡಲು ಸಹ ಆಗ್ರಹಿಸಲಾಗುವುದು ಎಂದು ಅವರು ಹೇಳಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications