ಮತ್ತೊಂದು ಕಾರ್ಗಿಲ್ ಯುದ್ಧಕ್ಕೆ ಸಿದ್ಧ ಎಂದ ವಾಯುಸೇನೆ ಮುಖ್ಯಸ್ಥ
ನವದೆಹಲಿ, ಜುಲೈ 16: "ಮತ್ತೊಂದು ಕಾರ್ಗಿಲ್ ಯುದ್ಧ ಮಾಡುವುದಕ್ಕೂ ನಾವು ಸಿದ್ಧರಾಗಿದ್ದೇವೆ. ಸೇನೆ ಕಾರ್ಗಿಲ್ ನಂಥ ಮತ್ತೊಂದು ಯುದ್ಧವನ್ನು ಎದುರಿಸಲೂ ಸನ್ನದ್ಧವಾಗಿದೆ ಎಂದು ಭಾರತೀಯ ವಾಯುಸೇನೆ ಮುಖ್ಯಸ್ಥ, ಏರ್ ಚೀಫ್ ಮಾರ್ಶಲ್ ಬಿ ಎಸ್ ಧಾನೂವಾ ಹೇಳಿದ್ದಾರೆ.
ಕಾರ್ಗಿಲ್ ವಿಜಯ ದಿವಸದ 20 ನೇ ವರ್ಷಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಅವರು, ಈ ವಿಷಯ ತಿಳಿಸಿದರು.
"ನಾವು ಮೋಡಗವಿರುವಾಗ, ಪ್ರತಿಕೂಲ ಹವಾಮಾನದಲ್ಲೂ ಬಾಂಬ್ ಎಸೆಯುವ ಶಕ್ತಿ ಪಡೆದಿದ್ದೇವೆ, ಅದು ಕರಾರುವಾಕ್ಕಾಗಿ ಗುರಿ ತಲುಪುವ ಸಾಮರ್ಥ್ಯ ಪಡೆದಿದೆ. ಅದಕ್ಕೆ ಸಾಕ್ಷಿ ಎಂಬಂತೆ ಫೆಬ್ರವರಿ 26 ರದು ನಾವು ಬಾಲಕೋಟ್ ನಲ್ಲಿ ಏರ್ ಸ್ಟ್ರೈಕ್ ನಡೆಸಿದ್ದೆವು. ಎಷ್ಟೋ ಮೇಲಿನಿಂದ ಕರಾರುವಾಕ್ಕಾಗಿ ಗುರಿಯಾಗಿಸಿ ಬಾಂಬ್ ಎಸೆಯಬಹುದು ಎಂಬುದಕ್ಕೆ ಇದೇ ಸಾಕ್ಷಿ" ಎಂದು ಅವರು ಹೇಳಿದರು.

1999 ರ ಮೇ ತಿಂಗಳಿನಿಂದ ಜುಲೈ ವರೆಗೆ ಭಾರತ ಮತ್ತು ಪಾಕಿಸ್ತಾನದ ನಡುವೆ ಕಾರ್ಗಿಲ್ ನಲ್ಲಿ ನಡೆದ ಯುದ್ಧಕ್ಕೆ ಇದೀಗ ಇಪ್ಪತ್ತು ವರ್ಷಗಳು ಸಂದಿದ್ದು, ಈ ಯುದ್ಧದಲ್ಲಿ ಗಡಿ ನಿಯಂತ್ರಣ ರೇಖೆ ಬಳಿಯ ಕೆಲವು ಪ್ರದೇಶಗಳನ್ನು ವಶಪಡಿಸಿಕೊಂಡಿದ್ದ ಪಾಕಿಸ್ತಾನವನ್ನು ಯಶಸ್ವಿಯಾಗಿ ಭಾರತ ಹಿಮ್ಮೆಟ್ಟಿಸಿತ್ತು. ಆದ್ದರಿಂದ ಭಾರತ ಕಾರ್ಗಲ್ ಯುದ್ಧ ಜಯವನ್ನು ಆಪರೇಶನ್ ವಿಜಯ ಎಂದೂ ಕರೆಯುತ್ತದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications