Get Updates
Get notified of breaking news, exclusive insights, and must-see stories!

"ವಂದೇ ಮಾತರಂ ಅನ್ನು ಗೌರವಿಸದೆ, ಅಫ್ಜಲ್ ಗುರುವನ್ನು ಗೌರವಿಸುತ್ತೀರಾ?"

ನವದೆಹಲಿ, ಡಿಸೆಂಬರ್ 08: "ವಂದೇ ಮಾತರಂ ಗೆ ಗೌರವ ನೀಡದೆ, ಇನ್ನೇನು ಅಫ್ಜಲ್ ಗುರುವಿಗೆ ಗೌರವ ನೀಡುತ್ತೀರಾ?" ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಖಾರವಾಗಿ ಪ್ರಶ್ನಿಸಿದ್ದಾರೆ.

ಉತ್ತರ ಪ್ರದೇಶದ ಬಿಎಸ್ ಪಿಯ ಮೇಯರ್ ಒಬ್ಬರು, ತಮ್ಮ ಕಚೇರಿಯಲ್ಲಿ ವಂದೇ ಮಾತರಂ ಹಾಡುವ ನಿಯಮವನ್ನು ಮೂಲೆಗೆ ತಳ್ಳಿದ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, 'ಕೆಲವರಿಗೆ ತಮ್ಮ ತಾಯಿಗೆ ಗೌರವ ನೀಡುವುದಕ್ಕೆ ಯಾಕೆ ಇಷ್ಟವಿಲ್ಲವೋ ಕಾಣೆ. ಅಮ್ಮನಿಗೆ ಗೌರವ ನೀಡದೆ ಅಫ್ಜಲ್ ಗುರುವಿಗೆ ಗೌರವ ನೀಡಬೇಕೇನು ಎಂದು ಪ್ರಶ್ನಿಸಿದರು.

If not mother, will you salute Afzal Guru? Venkaiah Naidu

ಹಿಂದುತ್ವ ಎಂಬುದು ನಮ್ಮ ಸಂಸ್ಕೃತಿ ಮತ್ತು ಪರಂಪರೆ. ಕೆಲವು ಜನರು ಅದಕ್ಕೆ ಸಂಕುಚಿತ ಅರ್ಥ ನೀಡುತ್ತಿದ್ದಾರೆ ಎಂದ ಅವರು, ಭಾರತಕ್ಕೆ ಗೌರವ ನೀಡಬೇಕಾಗಿರುವುದು ಕೇಲವ ಒಬ್ಬರ ಕೆಲಸವಲ್ಲ, 130 ಕೋಟಿ ಭಾರತೀಯರೂ ಯಾವ ಜಾತಿ, ಮತಗಳ ಹಂಗಿಲ್ಲದೆ ಭಾರತವನ್ನು ಗೌರವಿಸಬೇಕಿದೆ ಎಂದರು.

ಉತ್ತರ ಪ್ರದೇಶದ ಸ್ಥಳೀಯ ಸಂಸ್ಥೆಯ ಚುನಾವಣೆಯ ನಂಗತರ ಮೇಯರ್ ಆಗಿ ಆಯ್ಕೆಯಾದ ಬಿಎಸ್ ಪಿಯ ಸುನಿತಾ ವರ್ಮಾ ಎಂಬುವವರು ಮೀರತ್ ಮುನ್ಸಿಪಲ್ ಕಾರ್ಪೋರೇಶನ್ ನಲ್ಲಿ ವಂದೇ ಮಾತರಂ ಹಾಡದೆ, 'ಜನಗಣಮನ ಮಾತ್ರವೇ ನಮ್ಮ ರಾಷ್ಟ್ರಗೀತೆ, ಆದನ್ನಷ್ಟೇ ಹಾಡುತ್ತೇವೆ' ಎಂದಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ನಾಯ್ಡು ವಂದೇ ಮಾತರಂ ಅನ್ನು ಪ್ರತಿ ಭಾರತೀಯರೂ ಗೌರವಿಸಬೇಕು ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+