ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇಲಿನಿಂದ ಆದೇಶ ಬಂದಿದ್ದರೆ ಪೊಲೀಸರು ಏನು ಮಾಡಲು ಸಾಧ್ಯ?: ಕೇಜ್ರಿವಾಲ್

|
Google Oneindia Kannada News

ನವದೆಹಲಿ, ಜನವರಿ 9: ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ (ಜೆಎನ್‌ಯು) ಜ.5ರಂದು ನಡೆದ ಹಿಂಸಾಚಾರ ಪ್ರಕರಣದಲ್ಲಿ ಕ್ರಮ ತೆಗೆದುಕೊಳ್ಳದ ಕಾರಣಕ್ಕಾಗಿ ತೀವ್ರ ಟೀಕೆಗೆ ಗುರಿಯಾಗಿರುವ ದೆಹಲಿ ಪೊಲೀಸರನ್ನು ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಎನ್‌ಯುದಲ್ಲಿನ ಹಿಂಸಾಚಾರವನ್ನು ತಡೆಯುವಂತೆ ದೆಹಲಿ ಪೊಲೀಸರಿಗೆ 'ಮೇಲಿನಿಂದ' ಆದೇಶ ಬಂದಿರಲಿಲ್ಲ ಎಂದು ಹೇಳಿದರು.

ಜೆಎನ್‌ಯು ಗಲಭೆ; ಅರವಿಂದ್ ಕೇಜ್ರಿವಾಲ್ ಹೇಳುವುದೇನು?ಜೆಎನ್‌ಯು ಗಲಭೆ; ಅರವಿಂದ್ ಕೇಜ್ರಿವಾಲ್ ಹೇಳುವುದೇನು?

'ದೆಹಲಿ ಪೊಲೀಸರು ಏನು ಮಾಡಲು ಸಾಧ್ಯ? ಹಿಂಸಾಚಾರ ತಡೆಯದಂತೆ ಅಥವಾ ಕಾನೂನು ಸುವ್ಯವಸ್ಥೆ ಕಾಪಾಡದಂತೆ ಅವರಿಗೆ ಆದೇಶ ಬಂದಿದ್ದರೆ ಪಾಪ, ದೆಹಲಿ ಪೊಲೀಸರು ಏನು ಮಾಡಲು ಸಾಧ್ಯ? ಅವರು ಈ ಆದೇಶಗಳನ್ನು ಪಾಲಿಸದೆ ಇದ್ದರೆ ಅವರನ್ನು ಅಮಾನತು ಮಾಡುತ್ತಾರೆ' ಎಂದರು.

If They Get Orders From The Top What Can They Do? Kejriwal On Delhi Police

ದೀಪಿಕಾ ವಿರುದ್ಧ ರಾಘವೇಂದ್ರ ಔರಾದ್ಕರ್ ಟ್ವೀಟ್‌ ಪ್ರಕರಣಕ್ಕೆ ಟ್ವಿಸ್ಟ್ ದೀಪಿಕಾ ವಿರುದ್ಧ ರಾಘವೇಂದ್ರ ಔರಾದ್ಕರ್ ಟ್ವೀಟ್‌ ಪ್ರಕರಣಕ್ಕೆ ಟ್ವಿಸ್ಟ್

'ನಾವು ಅಧಿಕಾರಕ್ಕೆ ಬಂದಾಗ ಆಗಿನ ಆಸ್ಪತ್ರೆಗಳು ಮತ್ತು ಶಾಲೆಗಳು ತೀರಾ ಶೋಚನೀಯ ಸ್ಥಿತಿಯಲ್ಲಿದ್ದವು. ನಾವು ವೈದ್ಯರು ಅಥವಾ ಶಿಕ್ಷಕರನ್ನು ಬದಲಿಸಲಿಲ್ಲ. ಏಕೆಂದರೆ ಅವರು ಬಹಳ ಸಮರ್ಥರಿದ್ದರು. ಅದಕ್ಕೆ ರಾಜಕೀಯ ಇಚ್ಛಾಶಕ್ತಿ ಬೇಕಿತ್ತು. ಯಾವಾಗ ಹಿಂಸಾಚಾರಗಳನ್ನು ತಡೆಯಬಾರದು ಎಂದು ಮೇಲಿನಿಂದ ಆದೇಶ ಬರುತ್ತದೆಯೋ ಆಗ ನೀವು ಅವರ ಆದೇಶಕ್ಕೆ ತಲೆಬಾಗಲೇಬೇಕಾಗುತ್ತದೆ' ಎಂದು ವ್ಯಂಗ್ಯವಾಗಿ ಹೇಳಿದರು.

English summary
Delhi CM Arvind Kejriwal defended police on JNU issue and said, what can the police do? if they got order from the top no to stop violence, what can they do?
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X