'ಧರ್ಮರಾಯ'ನಿಗೆ ಬೆಂಬಲ, ಐಐಟಿಗೆ ಆರೆಸ್ಸೆಸ್ ಗುದ್ದು
ನವದೆಹಲಿ, ಜುಲೈ 20: ಪುಣೆಯ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆ (ಎಫ್ಟಿಐಐ) ಯ ಅಧ್ಯಕ್ಷರಾಗಿ ಗಜೇಂದ್ರ ಚೌಹಾಣ್ ಅವರನ್ನು ತಾತ್ಕಾಲಿಕವಾಗಿ ಕೆಳಗಿಳಿಸಿ ಪ್ರಶಾಂತ್ ಪತ್ರಾಬೆ ಅವರನ್ನು ಸರ್ಕಾರ ನೇಮಿಸಿದ್ದು ನೆನಪಿರಬಹುದು.
ಅದರೆ, ಬೂದಿ ಮುಚ್ಚಿದ ಕೆಂಡದಂತಿರುವ ಈ ಪ್ರಕರಣವನ್ನು ರಾಷ್ಟ್ರೀಯ ಸ್ವಯಂ ಸೇವಕರ ಸಂಘ (ಆರೆಸ್ಸೆಸ್) ಮತ್ತೆ ಕೆಣಕಿದೆ. ಗಜೇಂದ್ರ ಪರ ತನ್ನ ಮುಖವಾಣಿಯಲ್ಲಿ ಬರೆದುಕೊಂಡಿರುವ ಆರೆಸ್ಸೆಸ್, ಐಐಟಿಯನ್ನೂ ಜರೆದಿದೆ. [ಸಲ್ಮಾನ್ ಬೆಂಬಲದ ನಂತರ 'ಧರ್ಮರಾಯ'ನಿಂದ ಮುಕ್ತಿ]
ಮಹಾಭಾರತ ಧಾರಾವಾಹಿಯಲ್ಲಿ 'ಧರ್ಮರಾಯ'ನ ಪಾತ್ರ ಮಾಡಿದ್ದ ಗಜೇಂದ್ರ ಅವರ ವಿರುದ್ಧದ ಪ್ರತಿಭಟನೆಗಳನ್ನು ಆರೆಸ್ಸೆಸ್ 'ಹಿಂದೂ ವಿರೋಧಿ' ಎಂದು ಕರೆದಿದೆ. ಜೊತೆಗೆ ಐಐಟಿಗಳಂಥ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳನ್ನು 'ಭಾರತ ವಿರೋಧಿ ಮತ್ತು ಹಿಂದೂ ವಿರೋಧಿ'ಚಟುವಟಿಕೆಗಳ ತಾಣಗಳನ್ನಾಗಿ ಪರಿವರ್ತಿಸಲಾಗುತ್ತಿದೆ ಎಂದು ಆರೋಪಿಸಿದೆ.

ಎಡರಂಗ ಮತ್ತು ಕಾಂಗ್ರೆಸ್, ಈ ಪ್ರತಿಷ್ಠಿತ ಸಂಸ್ಥೆಗಳನ್ನು ನಿಯಂತ್ರಿಸುತ್ತಿವೆ ಮತ್ತು ಇವೆರಡೂ ಪಕ್ಷಗಳು ಆಡಳಿತ ಮಂಡಳಿಗಳ ಮೂಲಕ ಸಂಸ್ಥೆಯನ್ನು ಮೋದಿ ಸರ್ಕಾರದ ವಿರುದ್ಧ ದಾಳವಾಗಿ ಬಳಸುತ್ತಿವೆ. [ಮೋದಿ ವಿರುದ್ಧ ದನಿ ಎತ್ತಿದ್ದಕ್ಕೆ ವಿದ್ಯಾರ್ಥಿಗಳಿಗೆ ನಿಷೇಧ?]
ಐಐಟಿ-ಬಾಂಬೆಯ ಆಡಳಿತ ಮಂಡಳಿಯ ಮಾಜಿ ಅಧ್ಯಕ್ಷ ಹಾಗೂ ಖ್ಯಾತ ಪರಮಾಣು ವಿಜ್ಞಾನಿ ಅನಿಲ್ ಕಾಕೋಡ್ಕರ್ ಮತ್ತು ಐಐಎಂ-ಅಹ್ಮದಾಬಾದ್ನ ಅಧ್ಯಕ್ಷ ಎ.ಎಂ.ನಾಯ್ಕಾ ಅವರ ವಿರುದ್ಧವೂ ಅದು ದಾಳಿ ನಡೆಸಿದೆ.
ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವೆ ಸ್ಮತಿ ಇರಾನಿಯವರು ನಿರ್ದೇಶಕರ ನೇಮಕಗಳನ್ನು ಲಘುವಾಗಿ ಪರಿಗಣಿಸಿದ್ದಾರೆ ಎಂದು ಆರೋಪಿಸಿರುವ ಕಾಕೋಡ್ಕರ್ ಅವರು ಐಐಟಿ ಬಾಂಬೆಯ ಬೋಧಕರು ಮತ್ತು ವಿದ್ಯಾರ್ಥಿಗಳ 'ಕಿಸ್ ಆಫ್ ಲವ್' ಆಚರಣೆಯ ಬಗ್ಗೆ ತುಟಿಪಿಟಕ್ಕೆಂದಿಲ್ಲ ಏಕೆ ಎಂದು ಪ್ರಶ್ನಿಸಿದೆ.
ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಮತ್ತು ಹಿಂದೂ ವಿರೋಧಿ ಚಟುವಟಿಕೆಗಳಿಗಾಗಿ ಆಡಳಿತ ಮಂಡಳಿಗಳನ್ನೂ ಹೊಣೆಗಾರರನ್ನಾಗಿಸಬೇಕು ಎಂದು ಆರೆಸ್ಸೆಸ್ ಬರೆದುಕೊಂಡಿದೆ. (ಪಿಟಿಐ)
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications