ಅಭಿಮಾನದ ರಾಯಭಾರಿಯಾಗಿ ಪಾಕಿಸ್ತಾನಕ್ಕೆ: ನವಜೋತ್ ಸಿಂಗ್ ಸಿಧು
ನವದೆಹಲಿ, ಆಗಸ್ಟ್ 17: ಇಮ್ರಾನ್ ಖಾನ್ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್ ನಾಯಕ, ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಇಸ್ಲಾಮಾಬಾದ್ಗೆ ತೆರಳಿದ್ದಾರೆ.
ಗಡಿಯ ಆಚೆಗಿನ ಅಭಿಮಾನದ ರಾಯಭಾರಿಯಾಗಿ ಹೋಗುತ್ತಿರುವುದಾಗಿ ಸಿಧು ಹೇಳಿದ್ದಾರೆ.
'ಪಾಕಿಸ್ತಾನದಲ್ಲಿನ ಪ್ರಜಾಸತ್ತಾತ್ಮಕ ಬದಲಾವಣೆಗಳು ಮಹತ್ವದ್ದಾಗಿವೆ. ನನ್ನ ಉತ್ತಮ ಸ್ನೇಹಿತನಾದ ಇಮ್ರಾನ್ ಖಾನ್ ಆಹ್ವಾನ ನೀಡಿರುವುದಕ್ಕೆ ನಾನು ಅದೃಷ್ಟವಂತ ಎನಿಸುತ್ತಿದೆ. ಇದು ನನಗೆ ದೊರೆತ ಗೌರವ.

ನಾನು ಪಾಕಿಸ್ತಾನಕ್ಕೆ ಅಭಿಮಾನದ ರಾಯಭಾರಿಯಾಗಿ ಹೋಗುತ್ತಿದ್ದೇನೆ. ಎರಡು ದೇಶಗಳ ನಡುವಣ ಸಂಬಂಧ ಸುಧಾರಿಸಲಿದೆ ಎಂಬ ಆಶಯ ನನಗಿದೆ' ಎಂದು ಸಿಧು ತಿಳಿಸಿದ್ದಾರೆ.
ಇಮ್ರಾನ್ ಖಾನ್ ಪ್ರಮಾಣವಚನ
ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಇಮ್ರಾನ್ ಖಾನ್ ಶನಿವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಶುಕ್ರವಾರ ರಾಷ್ಟ್ರೀಯ ಅಸೆಂಬ್ಲಿಯ ನೂತನ ಸದಸ್ಯರು ಇಮ್ರಾನ್ ಖಾನ್ ಅವರನ್ನು ದೇಶದ 22ನೇ ಪ್ರಧಾನಿಯನ್ನಾಗಿ ಆಯ್ಕೆ ಮಾಡಿದರು.

ಇಮ್ರಾನ್ ಖಾನ್ ಹಾಗೂ ಅವರ ಮಿತ್ರಪಕ್ಷಗಳು 176 ಸೀಟುಗಳನ್ನು ಪಡೆದುಕೊಂಡರೆ, ವಿರೋಧ ಪಕ್ಷವಾದ ಪಾಕಿಸ್ತಾನ್ ಮುಸ್ಲಿಂ ಲೀಗ್- ನವಾಜ್ ಷೆಹಬಾಜ್ ಷರೀಫ್ ಪಕ್ಷವು 96 ಸೀಟಿಗಳನ್ನು ಗೆದ್ದುಕೊಂಡಿತು.
ನವಾಜ್ ಷರೀಫ್ ಅವರ ಪಕ್ಷದ ಸದಸ್ಯರ ವಿರೋಧದ ನಡುವೆಯೇ ಇಮ್ರಾನ್ ಅವರನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡಿರುವುದಾಗಿ ಸ್ಪೀಕರ್ ಅಸದ್ ಖೈಸರ್ ಪ್ರಕಟಿಸಿದರು.
ಬಳಿಕ ಮಾತನಾಡಿದ ಇಮ್ರಾನ್ ಖಾನ್, ದೇಶವು 70 ವರ್ಷಗಳಿಂದ ಕಾಯುತ್ತಿರುವ ಬದಲಾವಣೆಯನ್ನು ತರುವುದಾಗಿ ಪ್ರತಿಜ್ಞೆ ಮಾಡಿದರು.
ದೇಶದ ಹಣವನ್ನು ಕದ್ದು ಹೊರದೇಶಗಳಲ್ಲಿ ಬಚ್ಚಿಟ್ಟವರನ್ನು ಎಲ್ಲದಕ್ಕೂ ಹೊಣೆಗಾರರನ್ನಾಗಿ ಮಾಡುತ್ತೇನೆ. ಇನ್ನೊಂದು ದೇಶದ ಮೇಲೆ ಅವಲಂಬಿತವಾಗದಂತೆ ನಮ್ಮದೇ ಆದಾಯವನ್ನು ಹೇಗೆ ಸೃಷ್ಟಿಸುವುದು ಎಂಬ ಬಗ್ಗೆ ಒಟ್ಟಾಗಿ ಕುಳಿತು ಚರ್ಚಿಸುತ್ತೇವೆ ಎಂದು ಹೇಳಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications