ಮಾಯವಾಗಿದ್ದ ಮಾಯಾ ಎಂಪಿಯಲ್ಲಿ ಕಾಂಗ್ರೆಸ್ಸನ್ನು ಬೆಂಬಲಿಸ್ತಾರಂತೆ
Recommended Video

ನವದೆಹಲಿ, ಡಿಸೆಂಬರ್ 12 : ಮಧ್ಯ ಪ್ರದೇಶದಲ್ಲಿ ಚುನಾವಣೆ ಫಲಿತಾಂಶ ಅಂತಿಮ ಘಟ್ಟ ತಲುಪುತ್ತಿದ್ದಂತೆ ಡೋಲಾಯಮಾನ ಸ್ಥಿತಿ ಇದ್ದಾಗ, ಯಾರ ಸಂಪರ್ಕಕ್ಕೂ ಸಿಗದೆ ತಲೆಮರೆಸಿಕೊಂಡಿದ್ದ ಬಿಎಸ್ಪಿ ನಾಯಕಿ ಮಾಯಾವತಿ ಅವರು ಈಗ ಗೆದ್ದಿರುವ ಕಾಂಗ್ರೆಸ್ಸಿಗೆ ಬೆಂಬಲ ನೀಡುವ ಮಾತಾಡಿದ್ದಾರೆ.
"ನಾನು ಕಾಂಗ್ರೆಸ್ಸಿನ ಕೆಲ ಸಿದ್ಧಾಂತಗಳನ್ನು ವಿರೋಧಿಸುತ್ತೇನೆ. ಆದರೂ ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ಸಿಗೆ ಬೆಂಬಲ ನೀಡಲು ಸಿದ್ಧಳಿದ್ದೇನೆ. ಅವಶ್ಯಕತೆ ಬಿದ್ದರೆ ರಾಜಸ್ಥಾನದಲ್ಲಿಯೂ ಕಾಂಗ್ರೆಸ್ಸಿಗೆ ಪಕ್ಷದ ಬೆಂಬಲವಿದೆ" ಎಂದು ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಮಧ್ಯ ಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ ಗಢದಲ್ಲಿನ ಫಲಿತಾಂಶ ಏನು ತೋರಿಸುತ್ತದೆಂದರೆ, ಮೂರು ರಾಜ್ಯಗಳಲ್ಲಿ ಮತದಾರರು ಬಿಜೆಪಿಯ ವಿರುದ್ಧವಿದ್ದಾರೆ. ಬಿಜೆಪಿಯ ಜನವಿರೋಧಿ ನೀತಿಗಳಿಂದ ಬೇಸತ್ತ ಜನರು, ಬೇರೆ ದಾರಿ ಇಲ್ಲದೆ ಕಾಂಗ್ರೆಸ್ಸನ್ನು ಗೆಲ್ಲಿಸಿದ್ದಾರೆ ಎಂದು ಮಾಯಾವತಿ ಪ್ರತಿಕ್ರಿಯಿಸಿದ್ದಾರೆ.

ಭಾರತೀಯ ಜನತಾ ಪಕ್ಷವನ್ನು ಅಧಿಕಾರದಿಂದ ಹೊರಗಿಡುವ ಉದ್ದೇಶದಿಂದ ನಾನು ಕಾಂಗ್ರೆಸ್ಸಿಗೆ ಬೆಂಬಲ ನೀಡುತ್ತಿದ್ದೇನೆ ಎಂದಿರುವ ಅವರು, ಚುನಾವಣೆಗೂ ಮುನ್ನ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸಹಾಯಹಸ್ತ ಚಾಚಿದ್ದಾಗ, ಸೀಟು ಹಂಚಿಕೆಯಲ್ಲಿ ಹೆಚ್ಚಿನ ಕ್ಷೇತ್ರ ಸಿಗದಿದ್ದರಿಂದ ಕಾಂಗ್ರೆಸ್ಸಿಗೆ ಕೈಕೊಟ್ಟಿದ್ದರು.
ಮಧ್ಯ ಪ್ರದೇಶದಲ್ಲಿ ಸದ್ಯದ ಪರಿಸ್ಥಿತಿ ಹೇಗಿದೆಯೆಂದರೆ, ಕಾಂಗ್ರೆಸ್ಸಿಗೆ ಬಹುಜನ ಸಮಾಜ ಪಕ್ಷದ ಬೆಂಬಲದ ಅವಶ್ಯಕತೆ ಇಲ್ಲವೇ ಇಲ್ಲ. ಈಗಾಗಲೆ 1 ಸ್ಥಾನ ಗೆದ್ದಿರುವ ಸಮಾಜವಾದಿ ಪಕ್ಷ ಬೆಂಬಲ ಸೂಚಿಸುವುದಾಗಿ ಹೇಳಿದೆ ಮತ್ತು 4 ಕ್ಷೇತ್ರಗಳಲ್ಲಿ ಗೆದ್ದಿರುವ ಸ್ವತಂತ್ರ ಅಭ್ಯರ್ಥಿಗಳು ಕೂಡ ಬೆಂಬಲ ಸೂಚಿಸಿದ್ದಾರೆ.
ಕಾಂಗ್ರೆಸ್ಸಿನ ಬಳಿ ಈಗ 114 ಸ್ಥಾನಗಳಿವೆ. ಬಹುಮತ ಸಾಬೀತುಪಡಿಸಲು ಬೇಕಿರುವುದು 116 ಸ್ಥಾನಗಳು. ಕೇವಲ ಎರಡೇ ಎರಡು ಬೇಕಿರುವುದರಿಂದ ಕಾಂಗ್ರೆಸ್ಸಿಗೆ ಬಹುಮತ ಸಾಬೀತುಪಡಿಸಲು ಯಾವುದೇ ತೊಂದರೆ ಆಗಲಿಕ್ಕಿಲ್ಲ. ಈ ಚುನಾವಣೆಯಲ್ಲಿ 15 ವರ್ಷ ಆಡಳಿತ ನಡೆಸಿದ್ದ ಬಿಜೆಪಿ 109 ಕ್ಷೇತ್ರಗಳಲ್ಲಿ ಮಾತ್ರ ಗೆದ್ದಿದೆ.
ಮುಖ್ಯಮಂತ್ರಿಯಾಗಲು ಸಿದ್ಧರಾಗಿರುವ ಹಿರಿಯ ನಾಯಕ 72 ವರ್ಷದ ಕಮಲ್ ನಾಥ್ ಅವರು ಈಗಾಗಲೆ ಬೆಂಬಲ ಪತ್ರವನ್ನು ಹಿಡಿದುಕೊಂಡು ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅವರನ್ನು ಸಂಪರ್ಕಿಸಿದ್ದು, ಸರಕಾರ ರಚಿಸಲು ಅವಕಾಶ ಕೋರಿ ಪತ್ರ ಬರೆದಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications