ಆದಾಯ ತೆರಿಗೆ ಪಾವತಿಗೆ ಇ-ಫೈಲಿಂಗ್ ವ್ಯವಸ್ಥೆ ಮೇ 4ರಿಂದಲೇ ಶುರು
ನವದೆಹಲಿ, ಮೇ 5: ಆದಾಯ ತೆರಿಗೆ ಇಲಾಖೆಯು ಮೇ 4ರಿಂದ ಎಲ್ಲ ರೀತಿಯ ಆದಾಯ ತೆರಿಗೆ ಪಾವತಿಗೆ ಇ-ಫೈಲಿಂಗ್ ವ್ಯವಸ್ಥೆ ಮಾಡಿದೆ. 2017-18ನೇ ಸಾಲಿನ ಆದಾಯ ತೆರಿಗೆ ಪಾವತಿಗೆ ಇದು ಅನ್ವಯ ಆಗುತ್ತದೆ. ಹೊಸದಾದ ಆದಾಯ ತೆರಿಗೆ ಪಾವತಿ ಅರ್ಜಿ ಸಲ್ಲಿಕೆಗೆ https://incometaxindiaefiling. gov.in ತೆರಿಗೆ ಇಲಾಖೆಯ ಇ ಪೋರ್ಟಲ್ ನಲ್ಲಿ ಆನ್ ಲೈನ್ ವ್ಯವಸ್ಥೆ ಇದೆ.
ಎಲ್ಲ ರೀತಿಯ ಆದಾಯ ತೆರಿಗೆಗೆ ಇ ಫೈಲಿಂಗ್ ಅನ್ನು ಇಲಾಖೆಯ ವೆಬ್ ಸೈಟ್ ನಲ್ಲಿ ಮಾಡಬಹುದು ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಕಳೆದ ವರ್ಷ ತೆರಿಗೆ ಪಾವತಿಸಿದ ಮಾಹಿತಿಯ ಪ್ರತಿ, ಬ್ಯಾಂಕ್ ಸ್ಟೇಟ್ ಮೆಂಟ್, ಟಿಡಿಎಸ್ ಮಾಹಿತಿ, ಉಳಿತಾಯಕ್ಕೆ ಸಂಬಂಧಿಸಿದ ಪ್ರಮಾಣ ಪತ್ರಗಳು, ಫಾರ್ಮ್ -60 ಇತರ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಂಡು ಇ ಫೈಲಿಂಗ್ ಮಾಡಬಹುದು ಎಂದು ಅಧಿಕಾರಿ ಹೇಳಿದ್ದಾರೆ.[ಮುಂಬೈಯಲ್ಲಿ ಆದಾಯ ತೆರಿಗೆ ಅಧಿಕಾರಿ ಸಿಬಿಐ ಬಲೆಗೆ: 1.5 ಕೋಟಿ ರೂ.ವಶ]

ಆಧಾರ್ ಸಂಖ್ಯೆಯ ಸಹಾಯದಿಂದ ಇ-ವೆರಿಫಿಕೇಷನ್ ಮಾಡಬಹುದು. ಐಟಿಆರ್ ನ ಪಾವತಿಯ ದಾಖಲೆಯನ್ನು ಬೆಂಗಳೂರಿನ ಸಿಪಿಸಿಗೆ ಅಂಚೆ ಮೂಲಕ ಕಳಿಸುವ ಅಗತ್ಯ ಇಲ್ಲ. ಆಧಾರ್ ಮೂಲಕ ಈವರೆಗೆ 2,59,831 ಐಟಿಆರ್ ನ ಇ ವೆರಿಫೈ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.[ಮದುವೆ ದಿಬ್ಬಣದವರಂತೆ ಬಂದು ದಾಳಿ ನಡೆಸಿದ ಐಟಿ ಅಧಿಕಾರಿಗಳು]
2017ರ ಆರ್ಥಿಕ ಕಾಯ್ದೆ ಪ್ರಕಾರ ಆದಾಯ ತೆರಿಗೆ ಪಾವತಿಗೆ ಆಧಾರ್ ಕಡ್ಡಾಯ ಮಾಡಲಾಗಿದೆ. ಅಷ್ಟೇ ಅಲ್ಲ, ಪ್ಯಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದಕ್ಕೂ ಜುಲೈ 1, 2017ರಿಂದ ಆಧಾರ್ ಕಡ್ಡಾಯ ಮಾಡಲಾಗಿದೆ. ಕೇಂದ್ರ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಮಾರ್ಚ್ 31ರಂದು ಏಳು ಐಟಿಆರ್ ಗಳನ್ನು ಪರಿಚಯಿಸಿದೆ.
ಅದರಲ್ಲಿ ಒಂದು ಪುಟದ ಸರಳ ಅರ್ಜಿ ವೇತನ ಪಡೆಯುವ ವರ್ಗಕ್ಕೆ ಹಾಗೂ ಮನೆ ಬಾಡಿಗೆ ಹಾಗೂ ಬಡ್ಡಿ ಮೂಲಕ ಐವತ್ತು ಲಕ್ಷದವರೆಗೆ ಆದಾಯ ಪಡೆಯುವವರಿಗಾಗಿ ಇದೆ. ಜುಲೈ 31ರವರೆಗೆ ಆದಾಯ ತೆರಿಗೆ ಪಾವತಿಯ ಅರ್ಜಿ ಸಲ್ಲಿಕೆಗೆ ಅವಕಾಶ ಇದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications