ಬೇನಾಮಿ ಆಸ್ತಿ ಪ್ರಕರಣ: ರಾಬರ್ಟ್ ವಾದ್ರಾ ಹೇಳಿಕೆ ದಾಖಲಿಸಿಕೊಂಡ ಐಟಿ ಅಧಿಕಾರಿಗಳು
ನವದೆಹಲಿ, ಜನವರಿ 4: ಬೇನಾಮಿ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸೋಮವಾರ ರಾಬರ್ಟ್ ವಾದ್ರಾ ಅವರಿಂದ ಹೇಳಿಕೆ ದಾಖಲಿಸಿಕೊಳ್ಳುವ ಪ್ರಕ್ರಿಯೆ ಆರಂಭಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರಿಗೆ ಈ ಹಿಂದೆಯೇ ಆದಾಯ ತೆರಿಗೆ ಇಲಾಖೆ ಸಮನ್ಸ್ ನೀಡಿತ್ತು. ಆದರೆ ಕೊರೊನಾ ವೈರಸ್ ಸಾಂಕ್ರಾಮಿಕದ ಕಾರಣ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ.
ಬಿಕಾನೇರ್ ಮತ್ತು ಫರೀದಾಬಾದ್ ಭೂ ಹಗರಣಗಳು ಸೇರಿದಂತೆ ವಾದ್ರಾ ಅವರು ಎರಡು ಬೇನಾಮಿ ಆಸ್ತಿಗಳ ಪ್ರಕರಣದಲ್ಲಿ ಸಂಬಂಧ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಐಟಿ ಅಧಿಕಾರಿಗಳು ಹೇಳಿಕೆ ದಾಖಲಿಸಿಕೊಳ್ಳಲು ಪೂರ್ವ ದೆಹಲಿಯ ಸುಖದೇವ್ ವಿಹಾರದಲ್ಲಿನ ವಾದ್ರಾ ಕಚೇರಿಗೆ ತೆರಳಿದರು. ಲಂಡನ್ನಲ್ಲಿ ಸುಮಾರು 12 ಮಿಲಿಯನ್ ಪೌಂಡ್ ಮೌಲ್ಯದ ಆಸ್ತಿಗಳನ್ನು ಹೊಂದಿರುವ ಆರೋಪ ಪ್ರಕರಣದಲ್ಲಿ ಈಗಾಗಲೇ ರಾಬರ್ಟ್ ವಾದ್ರಾ ತನಿಖೆ ಎದುರಿಸುತ್ತಿದ್ದಾರೆ.

ರಾಜಸ್ಥಾನದ ಬಿಕಾನೇರ್ನಲ್ಲಿ ವಾದ್ರಾ ಅವರ ಸ್ಕೈಲೈಟ್ ಹಾಸ್ಪಿಟಾಲಿಟಿ ಸಂಸ್ಥೆಯು ಭೂ ಹಗರಣದಲ್ಲಿ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಬಡ ಗ್ರಾಮಸ್ಥರ ಮರುವಸತಿಗಾಗಿ ಮೀಸಲಿಟ್ಟಿದ್ದ 69.55 ಹೆಕ್ಟೇರ್ ಭೂಮಿಯನ್ನು ಕೇವಲ 72 ಲಕ್ಷ ರೂ ಬೆಲೆಗೆ ಖರೀದಿ ಮಾಡುವ ಮೂಲಕ ಅಕ್ರಮವಾಗಿ ಅತಿಕ್ರಮಿಸಿದ್ದ ವಾದ್ರಾ ಸಂಸ್ಥೆ, ಅದನ್ನು ಅಕ್ರಮ ಹಣ ವರ್ಗಾವಣೆ ಮೂಲಕ ಅಲೆಗೆನ್ಸಿ ಫಿನ್ಲೀಸ್ ಎಂಬ ಸಂಸ್ಥೆಗೆ 5.15 ಕೋಟಿಗೆ ಮಾರಾಟ ಮಾಡಿತ್ತು ಎಂದು ಆರೋಪಿಸಲಾಗಿದೆ. ಈ ಪ್ರದೇಶದಲ್ಲಿ ಭೂಮಿ ಹಂಚಿಕೆಯಲ್ಲಿ ನಕಲಿ ದಾಖಲೆ ಸೃಷ್ಟಿಸಲಾಗಿದೆ ಎಂದು ರಾಜಸ್ಥಾನ ಪೊಲೀಸರು ಪ್ರಕರಣ ದಾಖಲಿಸಿದ್ದರು.
2018ರ ಸೆಪ್ಟೆಂಬರ್ನಲ್ಲಿ ಗುರುಗಾಂವ್ನಲ್ಲಿ ಭೂ ಹಂಚಿಕೆಗಳಲ್ಲಿ ಅಕ್ರಮ ನಡೆದಿದೆ ಎಂದು ಹರ್ಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಆರೋಪಿಸಿದ್ದರು. ಸ್ಕೈಲೈಟ್ ಹಾಸ್ಪಿಟಾಲಿಟಿ ಸಂಸ್ಥೆಯು ಶಿಕೋಪುರ ಗ್ರಾಮದಲ್ಲಿ 2008ರಲ್ಲಿ 3.5 ಎಕರೆ ಭೂಮಿಯನ್ನು ಅದರ ಮೂಲ ಬೆಲೆಗಿಂತಲೂ ಅಧಿಕ ಬೆಲೆಗೆ ಡಿಎಲ್ಎಫ್ಗೆ ಮಾರಾಟ ಮಾಡಿತ್ತು ಎಂದು ಆರೋಪ ಮಾಡಿದ್ದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications