ಕೋವಿಡ್ನಿಂದ ಟಿಬಿ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತದೆಯೇ?
ನವದೆಹಲಿ, ಜು.18: ಕೋವಿಡ್ ಸೋಂಕಿನಿಂದಾಗಿ ಕ್ಷಯರೋಗ (ಟಿಬಿ) ಪ್ರಕರಣಗಳಲ್ಲಿ ಹೆಚ್ಚಳವಿದೆ ಎಂದು ಸೂಚಿಸಲು ಸಾಕಷ್ಟು ಪುರಾವೆಗಳಿಲ್ಲ ಎಂದು ಆರೋಗ್ಯ ಸಚಿವಾಲಯ ಶನಿವಾರ ಸ್ಪಷ್ಟನೆ ನೀಡಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು, "ಇತ್ತೀಚೆಗೆ ಕೋವಿಡ್ ಸೋಂಕಿತ ರೋಗಿಗಳಲ್ಲಿ ಕ್ಷಯರೋಗದ ಪ್ರಕರಣಗಳು ಹಠಾತ್ ಏರಿಕೆ ಕಂಡುಬಂದಿದೆ ಎಂದು ಆರೋಪಿಸಿ ಕೆಲವು ಮಾಧ್ಯಮ ವರದಿಗಳು ಬಂದಿವೆ," ಎಂದು ಹೇಳಿದೆ.
"ಆದರೆ ಕೋವಿಡ್ ಕಾರಣದಿಂದಾಗಿ ಟಿಬಿ ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿದೆ ಎಂದು ಸೂಚಿಸಲು ಪ್ರಸ್ತುತ ಸಾಕಷ್ಟು ಪುರಾವೆಗಳಿಲ್ಲ," ಎಂದು ಹೇಳಿದೆ.ಎಲ್ಲಾ ಕೋವಿಡ್ ಸಕಾರಾತ್ಮಕ ರೋಗಿಗಳಿಗೆ ಟಿಬಿ ತಪಾಸಣೆ ಹಾಗೂ ಟಿಬಿ ರೋಗಿಗಳಿಗೆ ಕೋವಿಡ್ ತಪಾಸಣೆಯನ್ನು ಶಿಫಾರಸು ಮಾಡಿದೆ ಎಂದು ಸಚಿವಾಲಯ ತಿಳಿಸಿದೆ.

ಇದಲ್ಲದೆ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು (ಯುಟಿಗಳು) ಆಗಸ್ಟ್ 2020 ರ ಹಿಂದೆಯೇ ಟಿಬಿ ಮತ್ತು ಕೋವಿಡ್ ಪ್ರಕರಣಗಳ ಬಗ್ಗೆ ಹೆಚ್ಚಿನ ನಿಗಾ ವಹಿಸುವಂತೆ ಹೇಳಲಾಗಿದೆ ಎಂದಿದೆ.
"ಇದಲ್ಲದೆ, ಟಿಬಿ-ಕೋವಿಡ್ ಮತ್ತು ಟಿಬಿ-ಐಎಲ್ಐ / ಸಾರಿಗಳ ತಪಾಸಣೆಯ ಅಗತ್ಯವನ್ನು ಪುನರುಚ್ಚರಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಅನೇಕ ಸಲಹೆಗಳು ಮತ್ತು ಮಾರ್ಗದರ್ಶನಗಳನ್ನು ಸಹ ನೀಡಿದೆ. "ರಾಜ್ಯಗಳು / ಯುಟಿಗಳು ಇದನ್ನು ಕಾರ್ಯಗತಗೊಳಿಸುತ್ತಿವೆ," ಎಂದು ಅದು ಹೇಳಿದೆ.
ಬದಲಾಗಿ ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ 2020 ರಲ್ಲಿ ಟಿಬಿ ಪ್ರಕರಣಗಳು ಶೇಕಡ 25 ರಷ್ಟು ಕಡಿಮೆಯಾಗಲು ಕಾರಣವಾಯಿತು ಎಂದು ಸಚಿವಾಲಯ ಒಪ್ಪಿಕೊಂಡಿದೆ. "ಟಿಬಿ ಮತ್ತು ಕೋವಿಡ್ ಎರಡೂ ರೋಗಗಳು ಸಾಂಕ್ರಾಮಿಕವೆಂದು ತಿಳಿದುಬಂದಿದೆ. ಇವೆರಡು ಪ್ರಾಥಮಿಕವಾಗಿ ಶ್ವಾಸಕೋಶದ ಮೇಲೆ ಆಕ್ರಮಣ ಮಾಡುತ್ತವೆ. ಕೆಮ್ಮು, ಜ್ವರ ಮತ್ತು ಉಸಿರಾಟದ ತೊಂದರೆಗಳಂತಹ ರೋಗಲಕ್ಷಣಗಳು ಕಂಡು ಬರುತ್ತದೆ. ಆದರೂ ಟಿಬಿಯು ದೀರ್ಘ ಕಾಲ ಮಾನವ ದೇಹದಲ್ಲಿದ್ದು ನಿಧಾನವಾಗಿ ಆಕ್ರಮಣ ಮಾಡುತ್ತದೆ," ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
"ಕೋವಿಡ್ ನಂತರದಲ್ಲಿ ವೈರಸ್ನಿಂದಾಗಿ ಅಥವಾ ಚಿಕಿತ್ಸೆಯ ಕಾರಣದಿಂದಾಗಿ ರೋಗನಿರೋಧಕ ಶಕ್ತಿ ಕಡಿಮೆಯಾಗಬಹುದು. ವಿಶೇಷವಾಗಿ ಸ್ಟೀರಾಯ್ಡ್ಗಳಂತಹ ರೋಗನಿರೋಧಕಗಳು ಟಿಬಿ ಕಾಯಿಲೆ ಕಾಣಿಸಿಕೊಳ್ಳಬಹುದು. ಟಿಬಿ ಕಪ್ಪು ಶಿಲೀಂಧ್ರದಂತಹ ಅವಕಾಶವಾದಿ ಸೋಂಕು," ಎಂದು ಸಚಿವಾಲಯ ಹೇಳಿದೆ.
(ಒನ್ಇಂಡಿಯಾ ಸುದ್ದಿ)
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications