ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಪಾಕ್ ರಾಜತಾಂತ್ರಿಕರಿಗೆ ಆಹ್ವಾನ
ನವದೆಹಲಿ, ಫೆಬ್ರವರಿ.03: ಪಾಕಿಸ್ತಾನದ ರಾಜತಾಂತ್ರಿಕ ಅಧಿಕಾರಿಗಳಿಗೆ ಕೊರೊನಾವೈರಸ್ ಲಸಿಕೆ ಪಡೆಯುವಂತೆ ಭಾರತವು ಆಹ್ವಾನ ನೀಡಿದೆ. ದೇಶದಲ್ಲಿ ಎಲ್ಲ ರಾಷ್ಟ್ರಗಳ ರಾಯಭಾರಿ ಮತ್ತು ರಾಜತಾಂತ್ರಿಕ ಸಿಬ್ಬಂದಿಗೆ ಕೊವಿಡ್-19 ಲಸಿಕೆ ನೀಡಲಾಗುತ್ತಿದೆ.
ಭಾರತದಲ್ಲಿ ನಡೆಯುತ್ತಿರುವ ಕೊರೊನಾವೈರಸ್ ಲಸಿಕೆ ಅಭಿಯಾನದಲ್ಲಿ ಪಾಕಿಸ್ತಾನದ ರಾಜತಾಂತ್ರಿಕರು ಭಾಗವಹಿಸಬೇಕೇ, ಬೇಡವೇ ಎನ್ನುವುದು ಇನ್ನೂ ನಿರ್ಧಾರವಾಗಿಲ್ಲ. ಒಂದು ವೇಳೆ ಭಾಗವಹಿಸಿದ್ದಲ್ಲಿ ಪಾಕ್ ರಾಜತಾಂತ್ರಿಕ ಅಧಿಕಾರಿಗಳಿಗೂ ಕೊವಿಡ್-19 ಲಸಿಕೆಯನ್ನು ನೀಡಲಾಗುತ್ತದೆ.
ಕೊರೊನಾವೈರಸ್ ಬಿಕ್ಕಟ್ಟು ಮತ್ತು ಲಸಿಕೆ ಕುರಿತಾಗಿ ಈ ಹಿಂದೆ ಭಾರತವು ತನ್ನ ರಾಜತಾಂತ್ರಿಕರನ್ನು ಸಂಪರ್ಕಿಸಿತ್ತು. ಕಳೆದ ಡಿಸೆಂಬರ್ ನಲ್ಲಿ 50 ಮಂದಿ ವಿದೇಶಿ ರಾಯಭಾರಿಗಳನ್ನು ಹೈದ್ರಾಬಾದ್ ನಲ್ಲಿರುವ ಭಾರತ್ ಬಯೋಟೆಕ್ ಮತ್ತು ಬಯೋಲಾಜಿಕಲ್-ಇ ಕಂಪನಿಗಳಿಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿ ಕೊರೊನಾವೈರಸ್ ಲಸಿಕೆ ಕುರಿತು ನಡೆಯುತ್ತಿರುವ ಸಂಶೋಧನೆ, ವೈದ್ಯಕೀಯ ಪ್ರಯೋಗ ಮತ್ತು ಲಸಿಕೆ ಉತ್ಪಾದನೆ ಕುರಿತು ಮಾಹಿತಿ ನೀಡಲಾಗಿತ್ತು.

ಕೊವಿಡ್-19 ಬಿಕ್ಕಟ್ಟು ಎದುರಿಸುವ ಬಗ್ಗೆ ಚರ್ಚೆ:
ಕಳೆದ ನವೆಂಬರ್ ತಿಂಗಳಿನಲ್ಲಿ ದೆಹಲಿಯ ವಿಜ್ಞಾನ ಭವನದಲ್ಲಿ ಕೊರೊನಾವೈರಸ್ ಬಿಕ್ಕಟ್ಟು ನಿವಾರಣೆ ಬಗ್ಗೆ ಚರ್ಚೆ ನಡೆಸಲಾಗಿತ್ತು. 190 ರಾಜತಾಂತ್ರಿಕ ಸಿಬ್ಬಂದಿಯ ಜೊತೆಗೆ ಕೊವಿಡ್-19 ಲಸಿಕೆಯ ಕಾರ್ಯಾಚರಣೆ ಬಗ್ಗೆ ಭಾರತದ ವಿದೇಶಾಂಗ ಕಾರ್ಯದರ್ಶಿ ಹರ್ಷಾ ಶಿಗ್ಲಾ ಮಾತುಕತೆ ನಡೆಸಿದ್ದರು.
ಕಳೆದ ಜನವರಿ.16ರಂದು ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೊವಿಡ್-19 ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಿದ್ದರು. ಅಂದಿನಿಂದ ಇಂದಿನವರೆಗೂ 41,20,741 ವೈದ್ಯಕೀಯ ಸಿಬ್ಬಂದಿ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ನೀಡಲಾಗಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications