ಅನ್ಸಾರಿಯಿಂದ ಅಸಹಿಷ್ಣುತೆಯ ಭಜನೆ: ತರಾಟೆಗೆ ತೆಗೆದುಕೊಂಡ ಟ್ವಿಟ್ಟಿಗರು
ನವದೆಹಲಿ, ಆಗಸ್ಟ್ 10: ಖಾಸಗಿ ಚಾನೆಲ್ ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡುತ್ತಿದ್ದ ಉಪರಾಷ್ಟ್ರಪತಿ ಹಮಿದ್ ಅನ್ಸಾರಿ ಭಾರತದಲ್ಲಿ ಇಂಟಾಲರೆನ್ಸ್ ಇದೆ ಎನ್ನುವ ಮೂಲಕ ಬೆಂಕಿ ಮುಚ್ಚಿದ ಕೆಂಡದಂತಿದ್ದ 'ಇಂಟಾಲರೆನ್ಸ್ ವಿವಾದ'ವನ್ನು ಮತ್ತೆ ಕೆದಕಿದ್ದಾರೆ.
ಕಳೆದ ವರ್ಷ ಇದೇ ಇಂಟಾಲರೆನ್ಸ್ ಎಂಬ ವಿಷಯವನ್ನಿಟ್ಟುಕೊಂಡು ಹಲವರು ಪ್ರತಿಭಟನೆ ನಡೆಸಿದ್ದರು, ತಮಗೆ ಸಿಕ್ಕ ಪ್ರಶಸ್ತಿಗಳನ್ನು ಹಿಂದಿರುಗಿಸಿದ್ದರು, ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು. ಕ್ರಮೇಣ ಈ ವಿಷಯ ತಣ್ಣಗಾಗಿತ್ತು.
ಆದರೆ ಇಂದು(ಆಗಸ್ಟ್ 10) ತಮ್ಮ ಹುದ್ದೆಯಿಂದ ನಿರ್ಗಮಿಸುತ್ತಿರುವ ಅನ್ಸಾರಿ ಅವರು ಇಂಥ ಹೇಳಿಕೆ ನೀಡಿದ್ದು ಸರಿಯೇ ಎಂಬ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. #hamidansari ಎಂಬ ಹ್ಯಾಶ್ ಟ್ಯಾಗ್ ನಲ್ಲಿ ಹಲವಾರು ಟ್ವಿಟ್ಟರ್ ಗಳು ಹರಿದಾಡುತ್ತಿವೆ.
ರಾಷ್ಟ್ರಗೀತೆಗೆ ಗೌರವ ಸೂಚಿಸುವುದು ಹೇಗೆಂಬುದೇ ಗೊತ್ತಲ್ಲದವರು ಅಸಹಿಷ್ಣುತೆ ಬಗ್ಗೆ ಮಾತನಾಡುತ್ತಾರೆ ಎಂದು ಕೆಲವರು ಹಮಿದ್ ಅನ್ಸಾರಿಯವರ ಬಗ್ಗೆ ಕುಹಕವಾಡಿದ್ದಾರೆ. ಅಮೆರಿಕ ಗಣರಾಜ್ಯೋತ್ಸವದ ಸಮಯದಲ್ಲಿ ಭಾರತಕ್ಕೆ ಅಂದಿನ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಆಗಮಿಸಿದ್ದಾಗ, ಸಭೆಯೊಂದರಲ್ಲಿ ರಾಷ್ಟ್ರಗೀತೆ ಹಾಡುತ್ತಿದ್ದರೂ ಹಮಿದ್ ಅನ್ಸಾರಿ ರಾಷ್ಟ್ರಗೀತೆಗೆ ಗೌರವ ನೀಡದಿದ್ದುದು ವಿವಾದವಾಗಿತ್ತು.
|
ಅತ್ಯಂತ ಕೆಟ್ಟ ಉಪರಾಷ್ಟ್ರಪತಿ
ಈ ದೇಶ ಅವರಿಗೆ ಒಂದು ಉನ್ನತ ಹುದ್ದೆ ನೀಡಿದ್ದರೂ, ರಾಷ್ಟ್ರಗೀತೆಗೆ ಗೌರವಿಸುವುದನ್ನು ಕಲಿಯದ ಹಮಿದ್ ಅನ್ಸಾರಿ, ಈ ದೇಶಕಂಡ ಅತ್ಯಂತ ಕೆಟ್ಟ ರಾಜಕಾರಣಿ ಎಂದು ಚಿರಾಗ್ ಎಂಬುವವರು ಟ್ವೀಟ್ ಮಾಡಿದ್ದಾರೆ.
|
ಜಿಹಾದಿ ಬಣ್ಣ
ಭಾರತ ಅಸಹಿಷ್ಣು ಎನ್ನುವ ಮೂಲಕ ಅವರು ತಮ್ಮ ನಿಜವಾದ ಜಿಹಾದಿ ಬಣ್ಣವನ್ನು ತೋರಿಸಿದ್ದಾರೆ. ಅದು ಅವರ ಡಿಎನ್ ಎ ಯಲ್ಲಿಯೇ ಇದೆ ಎಂದು ಆಶಾ ಬಿಶ್ತ್ ಎನ್ನುವವರು ಟ್ವೀಟ್ ಮಾಡಿದ್ದಾರೆ.
|
ದಂಪತಿಗೆ ಶುಭವಾಗಲಿ!
ಯೋಗ ದಿನ ವಿರೋಧಿಸಿದ್ದು ಮತ್ತು ರಾಷ್ಟ್ರಗೀತೆಗೆ ಅಗೌರವ ಸೂಚಿಸಿದ್ದು ಹಮಿದ್ ಅನ್ಸಾರಿ ಅವರ ಹೆಗ್ಗಳಿಕೆಯಾದರೆ, ಅವರ ಪತ್ನಿ ತ್ರಿವಳಿ ತಲಾಕ್ ಅನ್ನು ಬೆಂಬಲಿಸುವ ಮೂಲಕ ಸುದ್ದಿಯಾಗಿದ್ದರು. ಇಬ್ಬರಿಗೂ ಶುಭವಾಗಲಿ! ಎಂದು ವ್ಯಂಗ್ಯವಾಗಿ ಟ್ವೀಟ್ ಮಾಡಿದವರು ಗೀತಿಕಾ ಸ್ವಾಮಿ.
|
ಕೋಮುಗಲಭೆಗೆ ಪ್ರಚೋದನೆ
ಭಾರತದಲ್ಲಿ ಮುಸ್ಲಿಮರು ಅಭದ್ರ ಭಾವದಿಂದ ಬಳಲುತ್ತಿದ್ದಾರೆ ಎಂಬ ಮಾತು ಖಂಡನೀಯ. ಇಂಥ ಹೇಳಿಕೆಗಳೇ ಕೋಮುಗಲಭೆಯನ್ನು ಉಂಟುಮಾಡುತ್ತವೆ ಎಂದು ಅಶ್ವಾನಿ ದುಬೆ ಎನ್ನುವವರು ಟ್ವೀಟ್ ಮಾಡಿದ್ದಾರೆ.
|
ಜಸ್ವಂತ್ ಸಿಂಗ್
ಬಹುಶಃ ನಮ್ಮ ಸೈನಿಕರಿಂದ ಒಬ್ಬೊಬ್ಬರೇ ಭಯೋತ್ಪಾದಕರು ಹತ್ಯೆಯಾಗುತ್ತಿದ್ದಂತೆಯೇ ಅಭದ್ರತೆಯ ಭಾವ ಕೆಲವರನ್ನು ಕಾಡುವುದಕ್ಕೆ ಶುರುಮಾಡಿರಬೇಕು ಎಂದು ಜಸ್ವಂತ್ ಸಿಂಗ್ ಎನ್ನುವವರು ಟ್ವೀಟ್ ಮಾಡಿದ್ದಾರೆ.
-
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು












Click it and Unblock the Notifications