ಭಾರತ ಅಸಹಿಷ್ಣು ರಾಷ್ಟ್ರ: ನಿರ್ಗಮಿಸುವ ಮುನ್ನ ಅನ್ಸಾರಿ ವಿವಾದಾತ್ಮಕ ಹೇಳಿಕೆ!
ನವದೆಹಲಿ, ಆಗಸ್ಟ್ 10: ಭಾರತ ಅಸಹಿಷ್ಣುವಾಗುತ್ತಿದೆ, ಇಲ್ಲಿ ಭಾರತೀಯ ಮೌಲ್ಯಗಳಿಗೆ ಬೆಲೆ ಇಲ್ಲದಂತಾಗಿದೆ ಎಂದು ಇಂದು(ಆಗಸ್ಟ್ 10) ಹುದ್ದೆಯಿಂದ ನಿರ್ಗಮಿಸಲಿರುವ ಭಾರತದ ಉಪರಾಷ್ಟ್ರಪತಿ ಹಮಿದ್ ಅನ್ಸಾರಿ ಹೇಳಿದ್ದಾರೆ. ಖಾಸಗಿ ಚಾನೆಲ್ ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಭಾರತದ ಇಂದಿನ ಸ್ಥಿತಿಯ ಕುರಿತು ಆತಂಕ ವ್ಯಕ್ತಪಡಿಸಿದರು.
ಗೋ ರಕ್ಷಣೆಯ ಹೆಸರಿನಲ್ಲಿ ಹಿಂಸೆ, 'ಭಾರತ್ ಮಾತಾ ಕೀ ಜೈ' ಎನ್ನದವರನ್ನು ಭಾರತ ಬಿಟ್ಟು ಹೋಗಿ ಎನ್ನುವುದು... ಮುಂತಾದ ವಿಷಯಗಳನ್ನು ಅವರು ಉಲ್ಲೇಖಿಸಿದರು.

ದೇಶದಲ್ಲಿ, ಅದರಲ್ಲೂ ಬಹುಮುಖ್ಯವಾಗಿ ಉತ್ತರ ಭಾರತದ ಜನರಲ್ಲಿ ಇಂದು ಅಭದ್ರತೆ, ಕಳವಳ ಹೆಚ್ಚಾಗಿ ಕಂಡುಬರುತ್ತಿದೆ. ಯುವಕ-ಯುವತಿಯರು ಬೀದಿಗಿಳಿದು ಒಂದಲ್ಲ ಎರಡಲ್ಲ, ತಿಂಗಳಾನುಗಟ್ಟಲೆ ಕಲ್ಲುಹೊಡೆಯುತ್ತಿದ್ದರೆ ಅದು ಸುಮ್ಮನೆ ಬಿಟ್ಟುಬಿಡುವ ವಿಷಯವಲ್ಲ. ಏಕೆಂದರೆ ಅವರೆಲ್ಲ ನಮ್ಮ ದೇಶದ ಭವಿಷ್ಯದ ಪ್ರಜೆಗಳು, ದೇಶಕಟ್ಟಬೇಕಾದವರೇ ಅವರು ಎಂದು ಜಮ್ಮು-ಕಾಶ್ಮೀರದಲ್ಲಿ ತಾಂಡವಾಡುತ್ತಿರುವ ಹಿಂಸೆಯನ್ನು ನೆನಪಿಸಿಕೊಂಡರು.
ಹಮಿದ್ ಅನ್ಸಾರಿ ಅವರ ಅಧಿಕಾರಾವಧಿ ಇಂದು ಕೊನೆಗೊಳ್ಳಲಿದ್ದು, ಆಗಸ್ಟ್ 11 ರಂದು ನೂತನ ಉಪರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ಅವರು ಅಧಿಕಾರ ಸ್ವೀಕರಿಸಲಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications