"ಏಕಕಾಲಕ್ಕೆ 4 ಕೊರೊನಾ ಲಸಿಕೆ ಸಿದ್ಧವಾಗುತ್ತಿರುವ ಏಕೈಕ ದೇಶ ಭಾರತ"
ನವದೆಹಲಿ, ಜನವರಿ 02: ಶನಿವಾರದಿಂದ ಭಾರತದ ಎಲ್ಲಾ ರಾಜ್ಯಗಳಲ್ಲಿ ಕೊರೊನಾ ಲಸಿಕೆ ಪೂರ್ವಾಭ್ಯಾಸ ಆರಂಭವಾಗಿದೆ. ಕೊರೊನಾ ಸೋಂಕಿನ ವಿರುದ್ಧ ನಾಲ್ಕು ಲಸಿಕೆಗಳನ್ನು ಏಕಕಾಲಕ್ಕೆ ಅಭಿವೃದ್ಧಿಪಡಿಸುತ್ತಿರುವ ಏಕೈಕ ದೇಶ ಭಾರತ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.
ಬ್ರಿಟನ್ ನಲ್ಲಿ ಈಗಾಗಲೇ ಫೈಜರ್ ಹಾಗೂ ಆಸ್ಟ್ರಾಜೆನೆಕಾ ಲಸಿಕೆಗಳ ತುರ್ತು ಬಳಕೆಗೆ ಅನುಮತಿ ನೀಡಲಾಗಿದೆ. ಅಮೆರಿಕದಲ್ಲಿ ಫೈಜರ್ ಲಸಿಕೆಗೆ ಅನುಮತಿ ನೀಡಲಾಗಿದೆ. ಭಾರತದಲ್ಲಿ ಕೊರೊನಾ ಲಸಿಕೆಯ ತುರ್ತು ಬಳಕೆಗೆ ಅನುಮತಿ ಕೋರಿ ಈಗಾಗಲೇ ಮೂರು ಅರ್ಜಿಗಳು ಬಂದಿವೆ. ಹೀಗಾಗಿ ತುರ್ತು ಬಳಕೆಗೆ ಒಂದಕ್ಕಿಂತ ಹೆಚ್ಚಿನ ಲಸಿಕೆಗಳು ಲಭ್ಯವಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಮುಂದೆ ಓದಿ...

ಪ್ರಾಯೋಗಿಕ ಹಂತದಲ್ಲಿ ನಾಲ್ಕು ಲಸಿಕೆಗಳು
ಪ್ರಸ್ತುತ ಭಾರತದಲ್ಲಿ ಕೋವಿಶೀಲ್ಡ್ ಹಾಗೂ ಕೊವಾಕ್ಸಿನ್ ಒಳಗೊಂಡಂತೆ ಆರು ಕೊರೊನಾ ಲಸಿಕೆಗಳು ವೈದ್ಯಕೀಯ ಪ್ರಯೋಗಗಳನ್ನು ನಡೆಸುತ್ತಿವೆ. ಕೋವಿಶೀಲ್ಡ್ ಆಕ್ಸ್ ಫರ್ಡ್ ಲಸಿಕೆಯನ್ನು ಆಸ್ಟ್ರಾಜೆನೆಕಾ ಹಾಗೂ ಪುಣೆಯ ಸೆರಂ ಇನ್ ಸ್ಟಿಟ್ಯೂಟ್ ಜಂಟಿಯಾಗಿ ತಯಾರಿಸುತ್ತಿದೆ. ಭಾರತ್ ಬಯೋಟಕ್ ಹಾಗೂ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಜಂಟಿಯಾಗಿ ಕೊವಾಕ್ಸಿನ್ ಅಭಿವೃದ್ಧಿಪಡಿಸುತ್ತಿದೆ.

ಅಭಿವೃದ್ಧಿ ಹಂತದಲ್ಲಿ ಇನ್ನೂ ಎರಡು ಲಸಿಕೆಗಳು
ಈ ಎರಡು ಲಸಿಕೆಗಳ ಹೊರತಾಗಿ, ಅಹಮದಾಬಾದ್ ನ ಕಾಡಿಲಾ ಹೆಲ್ತ್ ಕೇರ್ ಲಿಮಿಟೆಡ್ ಬಯೋಟೆಕ್ನಾಲಜಿಯು ಕೇಂದ್ರ ಇಲಾಖೆ ಸಹಯೋಗದೊಂದಿಗೆ ಝೈಕೋವ್-ಡಿ ಲಸಿಕೆ ಸಿದ್ಧಪಡಿಸುತ್ತಿದ್ದು, ಎನ್ ವಿಎಕ್ಸ್-cov2373 ನೋವಾವಾಕ್ಸ್ ನೊಂದಿಗೆ ಸೆರಂ ಇನ್ ಸ್ಟಿಟ್ಯೂಟ್ ಅಭಿವೃದ್ಧಿ ಪಡಿಸುತ್ತಿದೆ.

ರಷ್ಯಾದ ಸ್ಪುಟ್ನಿಕ್ ವಿ ಲಸಿಕೆ ಪ್ರಯೋಗ
ಅಮೆರಿಕದ ಎಂಐಟಿ ಸಹಯೋಗದೊಂದಿಗೆ ಹೈದರಾಬಾದ್ ನ ಬಯೋಲಾಜಿಕಲ್ ಇ ಲಿಮಿಟೆಡ್ ಸಂಸ್ಥೆ ಒಂದು ಲಸಿಕೆಯನ್ನು ತಯಾರಿಸುತ್ತಿದ್ದು, ಪುಣೆ ಮೂಲದ ಜೆನ್ನೊವಾ ಬಯೋ ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ಅಮೆರಿಕದ ಎಚ್ ಡಿಟಿ ಜೊತೆಗೂಡಿ ಅಭಿವೃದ್ಧಿಪಡಿಸುತ್ತಿದೆ.
ಭಾರತ್ ಬಯೋಟೆಕ್ ಇಂಟರ್ ನ್ಯಾಷನಲ್ ಲಿಮಿಟೆಡ್ ಅಮೆರಿಕದ ಥಾಮಸ್ ಜೆಫರ್ಸನ್ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಲಸಿಕೆ ಅಭಿವೃದ್ಧಿಗೊಳಿಸುತ್ತಿದ್ದು, ವೈದ್ಯಕೀಯ ಪ್ರಯೋಗ ನಡೆಯುತ್ತಿದೆ. ಡಾ. ರೆಡ್ಡಿ ಲ್ಯಾಬ್, ರಷ್ಯಾದ ಸ್ಪುಟ್ನಿಕ್ ವಿ ಲಸಿಕೆಯನ್ನೂ ಪ್ರಯೋಗ ಮಾಡುತ್ತಿದೆ.
ತುರ್ತು ಬಳಕೆಗೆ ಅರ್ಜಿ ಸಲ್ಲಿಸಿರುವ ಸಂಸ್ಥೆಗಳು
ಭಾರತ್ ಬಯೋಟೆಕ್, ಸೆರಂ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ಹಾಗೂ ಫೈಜರ್, ಕೇಂದ್ರ ಔಷಧ ನಿಯಂತ್ರಕಕ್ಕೆ ಕೊರೊನಾ ಲಸಿಕೆಗಳ ತುರ್ತು ಬಳಕೆಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಿವೆ. ಶುಕ್ರವಾರ ತಜ್ಞರ ಸಮಿತಿ ಪರಿಶೀಲನೆ ನಡೆಸಿದ್ದು, ಆಕ್ಸ್ಫರ್ಡ್ ವಿಶ್ವವಿದ್ಯಾಲಯ-ಆಸ್ಟ್ರಾಜೆನಿಕಾ ಸಹಯೋಗದಲ್ಲಿ ಪುಣೆಯ ಸೆರಮ್ ಇನ್ಸ್ಟಿಟ್ಯೂಟ್ ತಯಾರಿಸಿದ 'ಕೋವಿಶೀಲ್ಡ್' ಲಸಿಕೆಯ ಷರತ್ತುಬದ್ಧ ತುರ್ತು ಬಳಕೆಗೆ ಪರಿಣತರ ಸಮಿತಿ ಶುಕ್ರವಾರ ಅನುಮೋದನೆ ನೀಡಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications