ಭಾರತದಲ್ಲಿ ವಿಮಾನ ಪ್ರಯಾಣಿಕರ ಸಂಖ್ಯೆ 168860ಕ್ಕೆ ಏರಿಕೆ
ನವದೆಹಲಿ, ಅಕ್ಟೋಬರ್.05: ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆ ವಿಮಾನ ಸಂಚಾರದಲ್ಲಿ ಪ್ರಯಾಣಿಕರ ಸಂಖ್ಯೆಯು ಗಣನೀಯವಾಗಿ ಏರಿಕೆಯಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವ ಹಾರ್ದಿಪ್ ಸಿಂಗ್ ಪುರಿ ತಿಳಿಸಿದ್ದಾರೆ.
ದೇಶದಲ್ಲಿ ಒಂದೇ ದಿನ 168860 ಪ್ರಯಾಣಿಕರು ವಿಮಾನಗಳಲ್ಲಿ ಪ್ರಯಾಣಿಸಿದ್ದಾರೆ ಎಂಬುದರ ಅಂಕಿ-ಅಂಶಗಳ ಬಗ್ಗೆ ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಕೊವಿಡ್-19 ಭೀತಿಗೂ ಮೊದಲು ಒಂದು ದಿನಕ್ಕೆ ಸಂಚರಿಸುತ್ತಿದ್ದ ಪ್ರಯಾಣಿಕರ ಸಂಖ್ಯೆಗೂ ಅಕ್ಟೋಬರ್.04ರಂದು ಪ್ರಯಾಣಿಸಿದ ಪ್ರಯಾಣಿಕರ ಸಂಖ್ಯೆಗೂ ತೀರಾ ಸನ್ನಿಹಿತವಾಗಿದೆ.
ಭಾರತ ಲಾಕ್ ಡೌನ್ ಗೂ ಮೊದಲು 24 ಗಂಟೆಗಳಲ್ಲಿ ಎಷ್ಟು ಪ್ರಯಾಣಿಕರು ಪ್ರಯಾಣಿಸುತ್ತಿದ್ದರೋ ಈಗಲೂ ಅಷ್ಟೇ ಜನರು ವಿಮಾನಗಳಲ್ಲಿ ಸಂಚರಿಸುವುದಕ್ಕೆ ಆರಂಭಿಸಿದ್ದಾರೆ ಎಂದು ಸಚಿವ ಹಾರ್ದಿಪ್ ಸಿಂಗ್ ಪುರಿ ಟ್ವೀಟ್ ಮಾಡಿದ್ದಾರೆ.

ನಾಗರಿಕ ವಿಮಾನಯಾನ ಸಚಿವರ ಟ್ವೀಟ್:
ದೇಶಾದ್ಯಂತ ಕಳೆದ ಅಕ್ಟೋಬರ್.04ರಂದು 1458 ದೇಶೀಯ ವಿಮಾನಗಳಲ್ಲಿ ಒಟ್ಟು 168860 ಪ್ರಯಾಣಿಕರು ಸಂಚರಿಸಿದ್ದಾರೆ. ಭಾರತದಲ್ಲಿ ಭಾನುವಾರ ಒಟ್ಟು 2916 ವಿಮಾನಗಳು ಸಂಚರಿಸಿವೆ ಎಂದು ನಾಗರಿಕ ವಿಮಾನಯಾನ ಸಚಿವ ಹಾರ್ದಿಪ್ ಸಿಂಗ್ ಪುರಿ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.
ಭಾರತದಲ್ಲಿ ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ಹಿನ್ನೆಲೆ ಮಾರ್ಚ್.25ರಂದು ಮೊದಲ ಹಂತದ ಲಾಕ್ ಡೌನ್ ಘೋಷಿಸಲಾಗಿತ್ತು. ಅಲ್ಲಿಂದ ಮುಂದೆ ವಾಣಿಜ್ಯ ವಿಮಾನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಇತ್ತೀಚಿಗಷ್ಟೇ ಅನ್ ಲಾಕ್ 5.0 ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದ ಕೇಂದ್ರ ಗೃಹ ಸಚಿವಾಲಯವು ವಾಣಿಜ್ಯ ವಿಮಾನಗಳ ಹಾರಾಟದ ಮೇಲಿನ ನಿರ್ಬಂಧವನ್ನು ಅಕ್ಚೋಬರ್.31ರವರೆಗೂ ವಿಸ್ತರಿಸಿತ್ತು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications