ಇದು ನಮ್ಮ ಸಂಸ್ಕೃತಿ ಕಣ್ರೀ, ಟ್ರಂಪ್ ಆರೋಪಕ್ಕೆ ಭಾರತದ ತಿರುಗೇಟು
ನವದೆಹಲಿ, ಜೂನ್ 6: ಪ್ಯಾರಿಸ್ ನ ಹವಾಮಾನ ಬದಲಾವಣೆ ಒಪ್ಪಂದಕ್ಕೆ ಭಾರತವು ಒಪ್ಪಿಕೊಂಡಿರುವುದು ದೊಡ್ಡ ಮಟ್ಟದ ಹಣಕಾಸು ನೆರವಿಗಾಗಿ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರೋಪವನ್ನು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿರಾಕರಿಸಿದ್ದಾರೆ. ಟ್ರಂಪ್ ಆರೋಪದಲ್ಲಿ ಸತ್ಯವಿಲ್ಲ ಎಂದು ಹೇಳಿದ್ದಾರೆ.
ಹಣದಾಸೆಗೋಸ್ಕರ ಭಾರತವು ಈ ಒಪ್ಪಂದಕ್ಕೆ ಸೇರಿದ್ದಲ್ಲ. ಟ್ರಂಪ್ ಆರೋಪದಲ್ಲಿ ಸತ್ಯವಿಲ್ಲ. ಈ ಬಗ್ಗೆ ಪ್ರಧಾನಿ ಈಗಾಗಲೇ ಹೇಳಿದ್ದಾರೆ. ಆದರೂ ಇನ್ನೊಮ್ಮೆ ಒತ್ತಿ ಹೇಳುತ್ತಿದ್ದೇನೆ, ನಾವು ಪ್ಯಾರಿಸ್ ಹವಾಮಾನ ಬದಲಾವಣೆ ಒಪ್ಪಂದಕ್ಕೆ ಸಹಿ ಹಾಕಿದ್ದು ಯಾವುದೇ ದೇಶದ ಒತ್ತಡದಿಂದಲ್ಲ ಅಥವಾ ಹಣದಾಸೆಗೂ ಅಲ್ಲ. ಪರಿಸರ ರಕ್ಷಣೆ ಬಗ್ಗೆ ನಮಗಿರುವ ಬದ್ಧತೆಯಿಂದ ಎಂದು ಅವರು ಹೇಳಿದರು.[ಪಾಕಿಸ್ತಾನದ ಮಗುವಿನ ಚಿಕಿತ್ಸೆಗೆ ವೀಸಾ ಕೊಡಿಸಿದ ಸಚಿವೆ ಸುಷ್ಮಾ]

ಅರಣ್ಯ, ನದಿ, ಬೆಟ್ಟಗಳ ಆರಾಧನೆ ಇಂದಿಗೂ ಭಾರತದಲ್ಲಿ ಮುಂದುವರಿದುಕೊಂಡು ಬಂದಿದೆ. ಪ್ಯಾರಿಸ್ ಒಪ್ಪಂದಕ್ಕೆ ಸಹಿ ಹಾಕಿದ ಕ್ರಮ ಕೂಡ ಭಾರತವು ಐದು ಸಾವಿರ ವರ್ಷಗಳಿಂದ ನಂಬಿ, ಆಚರಿಸಿಕೊಂಡು ಬಂದಿರುವ ತತ್ಚದ ಕಾರಣಕ್ಕೆ. ಇದು ಭಾರತದ ಸಂಸ್ಕ್ರತಿ. ಆದ್ದರಿಂದ ಆರೋಪ ನಿರಾಕರಿಸಿ, ಪ್ಯಾರಿಸ್ ಹವಾಮಾನ ಬದಲಾವಣೆ ಒಪ್ಪಂದದಲ್ಲಿ ಮುಂದುವರಿಯಲಿದ್ದೇವೆ ಎಂದು ಹೇಳಿದರು.[ಸುಷ್ಮಾ ಗೆ ಹೈದರಾಬಾದ್ ದಂಪತಿ ಮೊರೆ, ಇದು ಮತ್ತೊಂದು ಉಜ್ಮಾ ಪ್ರಕರಣ]
ಅಮೆರಿಕ ದೇಶವು ಈ ಒಪ್ಪಂದದ ಜತೆಗೆ ಮುಂದುವರಿಯತ್ತದೋ ಬಿಡುತ್ತದೋ, ಆದರೆ ಭಾರತ ಮಾತ್ರ ಮುಂದುವರಿಯುತ್ತದೆ ಎಂದರು.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ












Click it and Unblock the Notifications