ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದ ಆರ್ಥಿಕತೆ ಚೇತರಿಕೆಗೆ ಮತ್ತೊಂದು ಪ್ಯಾಕೇಜ್ ಘೋಷಣೆ ಸಾಧ್ಯತೆ

|
Google Oneindia Kannada News

ನವದೆಹಲಿ, ಆಗಸ್ಟ್‌ 12: ದೇಶದಲ್ಲಿ ಸಾಂಕ್ರಾಮಿಕ ರೋಗದ ಹರಡುವಿಕೆ ಮತ್ತು ಲಾಕ್‌ಡೌನ್‌ದಿಂದಾಗಿ ಆಗಿರುವ ಆರ್ಥಿಕತೆ ಮಂದಗತಿಗೆ ಚೇತರಿಕೆ ನೀಡಲು ಕೇಂದ್ರ ಸರಕಾರ ಶೀಘ್ರದಲ್ಲೇ ಬೃಹತ್ ಯೋಜನೆಯೊಂದನ್ನು ಘೋಷಿಸುವ ಸಾಧ್ಯತೆ ಇದೆ.

ಭಾರತದ ಆರ್ಥಿಕತೆಯ ಮರುನಿರ್ಮಾಣದ ಭಾಗವಾಗಿ ಸ್ಥಳೀಯ ಉದ್ಯಮಗಳನ್ನು ಹೆಚ್ಚು ಸ್ಪರ್ಧಾತ್ಮಕವಾಗಿಸಲು ಕೇಂದ್ರ ಸರಕಾರ ಯೋಜಿಸಿದೆ. ಬೃಹತ್‌ ಮೂಲಸೌಕರ್ಯ ಯೋಜನೆಗಳು ಮತ್ತು ಆರ್ಥಿಕ ನೀತಿಯಲ್ಲಿ ಬದಲಾವಣೆಗಳು ಸೇರಿದಂತೆ ಹೊಸ ಕ್ರಮಗಳನ್ನು ಸರ್ಕಾರ ಶೀಘ್ರದಲ್ಲೇ ಪ್ರಕಟಿಸಲಿದ್ದು ಇದರಲ್ಲಿ ಕೆಲವು ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿಯೇ ಘೋಷಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಭಾರತದ ಜಿಡಿಪಿ ಇತಿಹಾಸದಲ್ಲೇ ಅತ್ಯಂತ ಕಡಿಮೆ ದಾಖಲಾಗಲಿದೆ: ನಾರಾಯಣ ಮೂರ್ತಿಭಾರತದ ಜಿಡಿಪಿ ಇತಿಹಾಸದಲ್ಲೇ ಅತ್ಯಂತ ಕಡಿಮೆ ದಾಖಲಾಗಲಿದೆ: ನಾರಾಯಣ ಮೂರ್ತಿ

ಕೇಂದ್ರದ ಪ್ಯಾಕೇಜ್‌ನಲ್ಲಿ ತೆರಿಗೆ ಆಡಳಿತವನ್ನು ಮರುಹೊಂದಿಸುವ ಉಪಕ್ರಮವನ್ನೂ ಸಹ ಒಳಗೊಂಡಿರಬಹುದು ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಆಗಸ್ಟ್ 13 ರ ಹಿಂದೆಯೇ ಕ್ರಮಗಳನ್ನು ಘೋಷಿಸಬಹುದು ಎಂದು ಅವರು ಹೇಳಿದರು.

Indias Economy: Another Booster Shot Coming Soon

ಆತ್ಮನಿರ್ಭರ್ ಭಾರತ್ ಅಭಿಯಾನ್ ಅಥವಾ ಸ್ವಾವಲಂಬನೆ ಅಭಿಯಾನದ ಭಾಗವಾಗಿ ದೇಶೀಯ ಉದ್ಯಮಗಳನ್ನು ಹೆಚ್ಚು ಸ್ಪರ್ಧಾತ್ಮಕವಾಗಿಸುವ ಕ್ರಮ ಕೈಗೊಳ್ಳಲಾಗುವುದು. ಆರ್ಥಿಕ ಚೇತರಿಕೆಗಾಗಿ ಕೇಂದ್ರ ಸರಕಾರ ಇತ್ತೀಚೆಗೆ ಘೋಷಿಸಿದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ಮತ್ತು ಆತ್ಮನಿರ್ಭಾರ ಭಾರತ್ ಪುನರುಜ್ಜೀವನ ಕಾರ್ಯಕ್ರಮಗಳ ಮುಂದುವರಿದ ಭಾಗ ಆಗಿರಲಿದೆ.

ಉತ್ಪಾದನಾ ಭಾಗದಲ್ಲಿ ಪ್ರಸ್ತಾಪಗಳ ಒತ್ತಡವು ದೇಶೀಯ ಉದ್ಯಮದ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವುದು ಮತ್ತು ವಿದೇಶಿ ತಯಾರಕರು ದೇಶದಲ್ಲಿ ಕಾರ್ಯಾಚರಣೆಗಳನ್ನು ಸ್ಥಾಪಿಸಲು ಸುಲಭ ಮತ್ತು ಹೆಚ್ಚು ಆಕರ್ಷಕವಾಗಿ ಮಾಡುವುದು ಯೋಜನೆಯ ಗುರಿಯಾಗಿದೆ.

English summary
The government is likely to soon announce fresh measures, including big-ticket infrastructure projects and policy changes to rebuild the economy in the wake of the coronavirus pandemic.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X