ಗುಡ್ ನ್ಯೂಸ್: ಕೊರೊನಾ ಕೊಲ್ಲಲು ಬಳಸಿದ ಅಸ್ತ್ರ ಭಾರತದಲ್ಲಿ ಯಶಸ್ವಿ!
ನವದೆಹಲಿ, ಏಪ್ರಿಲ್ 26: ಮಾರಣಾಂತಿಕ ಕೋವಿಡ್-19ಗೆ ತಕ್ಕ ಲಸಿಕೆ ಅಥವಾ ಔಷಧಿ ಇನ್ನೂ ಸಿದ್ಧವಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಕೊರೊನಾ ವೈರಸ್ ಅನ್ನು ಬಗ್ಗುಬಡಿಯಲು ರೋಗ ಗೆದ್ದವರ ರಕ್ತವನ್ನೇ ಮದ್ದಾಗಿ ಬಳಕೆ ಮಾಡಿಕೊಳ್ಳುವ ಪ್ರಕ್ರಿಯೆಗೆ ಭಾರತದಲ್ಲಿ ಚಾಲನೆ ನೀಡಲಾಗಿದೆ.
Recommended Video
ಕೊರೊನಾ ವೈರಸ್ ವಿರುದ್ಧ ಹೋರಾಡಿ, ಸೋಂಕು ಗೆದ್ದು ಬಂದವರ ರಕ್ತದಲ್ಲಿ ಇರುವ ಶಕ್ತಿಯುತ ಪ್ಲಾಸ್ಮಾ ಕಣಗಳನ್ನು ರೋಗಿಗಳಿಗೆ ನೀಡಲಾಗುತ್ತಿದೆ. ಆ ಮೂಲಕ ರೋಗಿಗಳಲ್ಲಿ ರೋಗ ನಿರೋಧಕ ವ್ಯವಸ್ಥೆಯನ್ನು ಬಲಪಡಿಸುವ ಪ್ರಯೋಗಕ್ಕೆ ರಾಷ್ಟ್ರ ರಾಜಧಾನಿ ದೆಹಲಿ ಸಾಕ್ಷಿ ಆಗಿತ್ತು.
ವಿವಿಧ ದೇಶಗಳಲ್ಲಿ ಈ ಪ್ಲಾಸ್ಮಾ ಥೆರಪಿ ಯಶಸ್ವಿಯಾದ ಬಳಿಕ, ದೆಹಲಿಯ 49 ವರ್ಷ ವಯಸ್ಸಿನ ಕೊರೊನಾ ಸೋಂಕಿತ ಮೇಲೆ ಮೊದಲ ಬಾರಿಗೆ ಪ್ರಯೋಗ ಮಾಡಲಾಗಿತ್ತು. ವೆಂಟಿಲೇಟರ್ ನಲ್ಲಿದ್ದ ಆ ವ್ಯಕ್ತಿಯ ದೇಹದೊಳಗೆ ರೋಗ ಗೆದ್ದವರ ಪ್ಲಾಸ್ಮಾ ಕಣಗಳು ಸೇರಿಸಲಾಗಿತ್ತು. ಇದಾದ ಮೇಲೆ ನಡೆದಿದ್ದು ಅಚ್ಚರಿ. ಸಾವಿನ ಮನೆಯ ಬಾಗಿಲು ತಟ್ಟುತ್ತಿದ್ದ ಆ ವ್ಯಕ್ತಿಯ ದೇಹದೊಳಗೆ ಪ್ಲಾಸ್ಮಾ ಕಣಗಳು ಸೇರಿದ್ದೇ ತಡ, ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.

ಆಸ್ಪತ್ರೆಯಿಂದ ಡಿಸ್ಚಾರ್ಜ್
ಭಾರತದಲ್ಲಿ Convalescent ಪ್ಲಾಸ್ಮಾ ಥೆರಪಿಗೆ ಒಳಗಾದ ಮೊಟ್ಟಮೊದಲ ಪೇಷೆಂಟ್ ಸಂಪೂರ್ಣವಾಗಿ ಗುಣಮುಖರಾಗಿ, ಮನೆಗೆ ತೆರಳಿದ್ದಾರೆ. ನಿನ್ನೆ ಭಾನುವಾರ (ಏಪ್ರಿಲ್ 26) ಸಾಕೇತ್ ನ ಮ್ಯಾಕ್ಸ್ ಆಸ್ಪತ್ರೆಯಿಂದ 49 ವರ್ಷ ವ್ಯಕ್ತಿ ಡಿಸ್ಚಾರ್ಜ್ ಆಗಿದ್ದಾರೆ. ಏಪ್ರಿಲ್ 4 ರಂದು ಆ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿತ್ತು.

ಚಿಂತಾಜನಕ ಸ್ಥಿತಿಯಲ್ಲಿದ್ದ ಆ ವ್ಯಕ್ತಿ
ಕೊರೊನಾ ವೈರಸ್ ಸೋಂಕು ತಗುಲಿದ ಬಳಿಕ 49 ವರ್ಷದ ಆ ವ್ಯಕ್ತಿಯಲ್ಲಿ ಉಸಿರಾಟ ಸಮಸ್ಯೆ ಕಂಡು ಬಂದಿತ್ತು. ಮ್ಯಾಕ್ಸ್ ಆಸ್ಪತ್ರೆಗೆ ದಾಖಲಾದ ಆ ವ್ಯಕ್ತಿಯ ಆರೋಗ್ಯ ಸ್ಥಿತಿ ದಿನೇ ದಿನೇ ಕ್ಷೀಣಿಸುತ್ತಿತ್ತು. ನ್ಯೂಮೋನಿಯಾದಿಂದ ಬಳಲಿದ ವ್ಯಕ್ತಿಯನ್ನು ಏಪ್ರಿಲ್ 8 ರಿಂದ ವೆಂಟಿಲೇಟರ್ ನಲ್ಲಿ ಇಡಲಾಗಿತ್ತು. ಚಿಂತಾಜನಕ ಸ್ಥಿತಿಯಲ್ಲಿದ್ದ ಆ ವ್ಯಕ್ತಿಗೆ ಪ್ಲಾಸ್ಮಾ ಥೆರಪಿ ನೆರವೇರಿಸುವಂತೆ ಕುಟುಂಬಸ್ಥರು ಮನವಿ ಮಾಡಿದ್ದರು.

ಪ್ಲಾಸ್ಮಾ ಥೆರಪಿ ಸಕ್ಸಸ್
ಈ ಹಿಂದೆ ಕೋವಿಡ್-19 ನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದವರು ಪ್ಲಾಸ್ಮಾ ದಾನ ಮಾಡಲು ಮುಂದಾದರು. ಬಳಿಕ 49 ವರ್ಷದ ವ್ಯಕ್ತಿ ಮೇಲೆ ಪ್ಲಾಸ್ಮಾ ಥೆರಪಿ ಪ್ರಯೋಗವನ್ನು ಆಸ್ಪತ್ರೆಯ ವೈದ್ಯರು ನೆರವೇರಿಸಿದರು. ಪ್ಲಾಸ್ಮಾ ಥೆರಪಿ ಪ್ರಕ್ರಿಯೆ ಬಳಿಕ ಸೋಂಕಿತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಏಪ್ರಿಲ್ 18 ರಂದು ವೆಂಟಿಲೇಟರ್ ನಿಂದ ಹೊರಗೆ ಬಂದ ಆ ವ್ಯಕ್ತಿ, ನಿನ್ನೆ ಆಸ್ಪತ್ರೆಯಿಂದ ಹೊರ ನಡೆದರು.

ಒಬ್ಬರಿಂದ ಇಬ್ಬರ ಜೀವ ಉಳಿಯುತ್ತದೆ
ಕೋವಿಡ್-19 ರೋಗ ಗೆದ್ದವರು 400ml ಪ್ಲಾಸ್ಮಾ ದಾನ ಮಾಡಬಹುದಾಗಿದ್ದು, ಇದರಿಂದ ಇಬ್ಬರ ಜೀವ ಉಳಿಯಲಿದೆ. ಓರ್ವ ರೋಗಿಯ ಚಿಕಿತ್ಸೆಗೆ 200ml ಪ್ಲಾಸ್ಮಾ ಸಾಕಾಗುತ್ತದೆ ಎಂದು ವೈದ್ಯರು ತಿಳಿಸಿದ್ದರು.
-
Summer Alert: ಬೇಸಿಗೆಯಲ್ಲಿ ಫ್ರಿಜ್ ನೀರು ಕುಡಿಯುತ್ತಿದ್ದೀರಾ? ಮೊದಲು ಈ ವಿಷಯ ತಿಳಿದುಕೊಳ್ಳಿ -
ವಾಸ್ತು ಮಾತ್ರ ಸಾಲದು! ನಿಮ್ಮ ಜಾತಕವೇ ಯಶಸ್ಸನ್ನು ನಿರ್ಧರಿಸುತ್ತದೆ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral












Click it and Unblock the Notifications