ಭಾರತಾದ್ಯಂತ ಎಲ್ಲಾ ತುರ್ತು ಸೇವೆಗೆ '112' ಸಾಮಾನ್ಯ ಸಂಖ್ಯೆ
ನವದೆಹಲಿ,ಮಾರ್ಚ್,29: ಪೊಲೀಸ್, ಆಂಬುಲೆನ್ಸ್, ಅಗ್ನಿ ಶಾಮಕ ದಳ ಹೀಗೆ ಪ್ರತಿಯೊಂದು ಇಲಾಖೆಗಳು ತನ್ನದೇ ಆದ ತುರ್ತು ಸೇವಾ ಸಂಖ್ಯೆ ಇರಿಸಿಕೊಂಡಿವೆ. ಇದೀಗ ಎಲ್ಲಾ ಬಗೆಯ ತುರ್ತು ಸೇವೆಗಳಿಗೆ ಅನ್ವಯವಾಗುವ ಸಾಮಾನ್ಯ ಸಂಖ್ಯೆ ಜಾರಿಗೆ ತರಲು ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಮುಂದಾಗಿದೆ.
ಪೊಲೀಸ್ 100, ಅಗ್ನಿ ಶಾಮಕ ಇಲಾಖೆಗೆ 101, ಆಂಬುಲೆನ್ಸ್ 108 ಇವು ಸಾರ್ವಜನಿಕರಿಗೆ ತುರ್ತು ಸೇವೆ ಒದಗಿಸಲು ಇರುವ ತುರ್ತು ಸೇವಾ ಸಂಖ್ಯೆಗಳು. ಈ ಎಲ್ಲಾ ಇಲಾಖೆಗಳನ್ನು ಒಂದೇ ಸೂರಿನಡಿಯಲ್ಲಿ ತರುವ ಉದ್ದೇಶದಿಂದ 'ಆಲ್ ಇನ್ ಒನ್' ಎಂಬ ಹೆಸರಿನಲ್ಲಿ 112 ಸಂಖ್ಯೆಯನ್ನು ತುರ್ತು ಸೇವಾ ಸಂಖ್ಯೆಯಾಗಿ ಬಳಕೆ ಮಾಡಲು ಟ್ರಾಯ್ ಚಿಂತನೆ ನಡೆಸಿದೆ.[ಗರ್ಭಿಣಿ, ಮಕ್ಕಳ ರಕ್ಷಣೆಗಾಗಿ 'ವಾತ್ಸಲ್ಯವಾಣಿ-104']

ಏನಿದು 112?
ನಾವು ಅಕಸ್ಮಾತ್ ಆರೋಗ್ಯದಲ್ಲಿ ದಿಢೀರ್ ತೊಂದರೆಯಾದಾಗ 108, ಬೆಂಕಿ ಅವಘಡ ಸಂಭವಿಸಿದರೆ 101, ಕಿಡಿಗೇಡಿಗಳಿಂದ ಅಪಾಯವಾದಾಗ 100 ಈ ಸಂಖ್ಯೆಗಳಿಗೆ ಕರೆ ಮಾಡಿದರೆ ಕೆಲವೇ ನಿಮಿಷಗಳಲ್ಲಿ ಸಮಸ್ಯೆ ನಿವಾರಣೆಯಾಗುತ್ತದೆ.
ಇದೀಗ ತುರ್ತು ಸೇವೆಗಳಿಗೆ ಈ ಮೂರು ಇಲಾಖೆಗಳನ್ನು ಸಂಪರ್ಕಿಸಲು ಹೆಣಗಾಡಬೇಕಾಗಿಲ್ಲ. ಯಾವುದೇ ತುರ್ತು ಸಂದರ್ಭದಲ್ಲಿ 112 ಸಂಖ್ಯೆಗೆ ಕರೆ ಮಾಡಿದರೆ ಸಾಕು. ಸಾರ್ವಜನಿಕರಿಂದ ಬಂದ ಕರೆಗಳನ್ನು ಅಲ್ಲಿಂದ ಸಂಬಂಧಪಟ್ಟ ಸೇವೆಗೆ ಕರೆಯನ್ನು ವರ್ಗಾಯಿಸಿ ಸಮಸ್ಯೆಯನ್ನು ನಿವಾರಿಸಲು ಪ್ರಯತ್ನಿಸಲಾಗುವುದು.[ಕುಂದು ಕೊರತೆ ಇದ್ದರೆ ಸಹಾಯವಾಣಿ ಬಳಸಿ]
ಈ ಸಂಬಂಧ ಟೆಲಿಕಾಂ ನಿಯಂತ್ರಣ ಪ್ರಾಧಿಕಾರದ ಶಿಫಾರಸ್ಸಿಗೆ ಟೆಲಿಕಾಂ ಸಮಿತಿ ಸಮ್ಮತಿ ಸೂಚಿಸಿದ್ದು, ಕೇಂದ್ರ ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಅವರ ಒಪ್ಪಿಗೆ ಸಿಗಬೇಕಾಗಿದೆ. ಕೆಲವೇ ತಿಂಗಳಲ್ಲಿ 112 ತುರ್ತು ಸೇವೆ ಆರಂಭವಾಗಲಿದೆ ಎಂದು ಅಧಿಕಾರಿಗಳು ಹೇಳಿದರು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications