ಭಾರತ ಅಮೆರಿಕಾ ನಡುವೆ 2+2 ಚರ್ಚೆ: ವಿಶೇಷವೇನು?
ನವದೆಹಲಿ, ಅಕ್ಟೋಬರ್.27: ಕೊರೊನಾವೈರಸ್ ಆತಂಕ ಮತ್ತು ಗಡಿಯಲ್ಲಿ ಚೀನಾ ತಂಟೆ ನಡುವೆ ಭಾರತದತ್ತ ಜಗತ್ತಿನ ಕಣ್ಣು ನೆಟ್ಟಿದೆ. ರಾಷ್ಟ್ರ ರಾಜಧಾನಿಯಲ್ಲಿ ಭಾರತ ಮತ್ತು ಅಮೆರಿಕಾ ನಡುವೆ 2+2 ಚರ್ಚೆ ನಡೆಯಲಿದೆ.
ಈಗಾಗಲೇ ಅಮೆರಿಕಾದ ವಿದೇಶಾಂಗ ಸಚಿವ ಮೈಕ್ ಪೊಂಪ್ಯು ಮತ್ತು ರಕ್ಷಣಾ ಸಚಿವ ಮಾರ್ಕ್ ಎಸ್ಟರ್ ನವದೆಹಲಿಗೆ ಆಗಮಿಸಿದ್ದಾರೆ. ಮಂಗಳವಾರ ನವದೆಹಲಿಯ ಹೈದ್ರಾಬಾದ್ ಹೌಸ್ ನಲ್ಲಿ ಉಭಯ ರಾಷ್ಟ್ರಗಳ ವಿದೇಶಾಂಗ ಸಚಿವರು ಮತ್ತು ರಕ್ಷಣಾ ಸಚಿವರು ಮಹತ್ವದ ಮಾತುಕತೆ ನಡೆಸಲಿದ್ದಾರೆ.
ಅಮೆರಿಕಾ ವಿದೇಶಾಂಗ ಸಚಿವ ಮೈಕ್ ಪೊಂಪ್ಯು, ರಕ್ಷಣಾ ಸಚಿವ ಮಾರ್ಕ್ ಎಸ್ಟರ್ ಹಾಗೂ ಭಾರತದ ಪರವಾಗಿ ವಿದೇಶಾಂಗ ಸಚಿವ ಜೈಶಂಕರ್ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಪ್ರಾದೇಶಿಕ ಭದ್ರತಾ ಸಹಕಾರ, ರಕ್ಷಣಾ ಮಾಹಿತಿ ವಿನಿಮಯ, ರಕ್ಷಣಾ ಕ್ಷೇತ್ರದಲ್ಲಿನ ಹೂಡಿಕೆ, ಸೇನೆ ನಡುವಿನ ಮಾತುಕತೆ ನಡೆಯಸಲಿದ್ದಾರೆ. ಈ ಹಿಂದೆ ನವದೆಹಲಿಯಲ್ಲೇ 2018ರ ಸಪ್ಟೆಂಬರ್ ನಲ್ಲಿ ಭಾರತ ಮತ್ತು ಅಮೆರಿಕಾ ನಡುವೆ 2+2 ಮಾತುಕತೆ ನಡೆದಿತ್ತು.

ಚೀನಾದ ಗಡಿ ತಂಟೆ ಬಗ್ಗೆ ಚರ್ಚೆ ಸಾಧ್ಯತೆ:
ಕೊರೊನಾವೈರಸ್ ಸೋಂಕು ಹರಡುವಿಕೆಗೆ ಸಂಬಂಧ ಚೀನಾದ ವಿರುದ್ಧ ಅಮೆರಿಕಾ ಈಗಾಗಲೇ ಕೆರಳಿದೆ. ದಕ್ಷಿಣ ಸಮುದ್ರ ಗಡಿಯಲ್ಲಿ ಅಮೆರಿಕಾದ ಜೊತೆಗೆ ಹಾಗೂ ಲಡಾಖ್ ಪೂರ್ವ ಗಡಿಯಲ್ಲಿ ಭಾರತದ ಜೊತೆಗೆ ಚೀನಾ ತಂಟೆ ತೆಗೆಯುತ್ತಿದೆ. ಈ ಬಗ್ಗೆಯು ಮಂಗಳವಾರದ ಸಭೆಯಲ್ಲಿ ಉಭಯ ರಾಷ್ಟ್ರಗಳ ನಾಯಕರು ಚರ್ಚಿಸುವ ಸಾಧ್ಯತೆಯಿದೆ.
ಬಹುಮುಖ್ಯವಾಗಿ ರಕ್ಷಣಾ ವಲಯಕ್ಕೆ ಸಂಬಂಧಿಸಿದಂತೆ ಉಭಯ ರಾಷ್ಟ್ರಗಳ ನಡುವೆ ಸಾಮಾನ್ಯ ಅಂಶಗಳ ವಿನಿಮಯ ಮತ್ತ ಸಹಕಾರಿ ಒಪ್ಪಂದಕ್ಕೆ ಅಂಕಿತ ಹಾಕುವ ನಿರೀಕ್ಷೆಯಿದೆ. ಅಮೆರಿಕಾದ ಸೆಟ್ ಲೈಟ್ ಗಳ ಮೂಲಕ ರಕ್ಷಣಾ ವಿಚಾರಕ್ಕೆ ಸಂಬಂಧಿಸಿದ ನಿಖರ ಮಾಹಿತಿಯನ್ನು ಪಡೆದುಕೊಳ್ಳುವುದಕ್ಕೆ ಭಾರತಕ್ಕೆ ಇದರಿಂದ ಸಹಾಯವಾಗಲಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications