ಡಿಸೆಂಬರ್ ಅಂತ್ಯದೊಳಗೆ ಎಲ್ಲರಿಗೂ ಲಸಿಕೆ ಹಾಕುತ್ತೇವೆ: ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್
ನವದೆಹಲಿ, ಮೇ 28: ಭಾರತದ ಪ್ರತಿಯೊಬ್ಬರಿಯೂ ಈ ವರ್ಷದ ಡಿಸೆಂಬರ್ ಅಂತ್ಯದ ಒಳಗೆ ಲಸಿಕೆಯನ್ನು ಹಾಕಲಾಗುತ್ತದೆ ಎಂದು ಕೇಂದ್ರ ಸಚಿವ ಪ್ರಕಾಶ ಜಾವಡೇಕರ್ ಘೋಷಿಸಿದ್ದಾರೆ. ಭಾರತದಲ್ಲಿ ಲಸಿಕೆ ಅಭಿಯಾನ ನಿಧಾನಗತಿಯಲ್ಲಿ ನಡೆಯುತ್ತಿರುವ ಬಗ್ಗೆ ರಾಹುಲ್ ಗಾಂಧಿ ಟೀಕಿಸಿದ ನಂತರ ಈ ರೀತಿ ತಿರುಗೇಟು ನೀಡಿದ್ದಾರೆ.
ಆರೋಗ್ಯ ಸಚಿವಾಲಯ ರೂಪಿಸಿದ ನೀಲನಕ್ಷೆಯನ್ನು ಉಲ್ಲೇಖಿಸಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ರಾಹುಲ್ ಗಾಂಧಿ ಮಾತಿಗೆ ಪ್ರತ್ಯುತ್ತರವನ್ನು ನೀಡಿದ್ದಾರೆ. ಡಿಸೆಂಬರ್ ವೇಳೆಗೆ ಭಾರತದ 108 ಕೋಟಿ ಜನರಿಗೆ ಲಸಿಕೆಯನ್ನು ನೀಡುವುದನ್ನು ಖಚಿತಪಡಿಸುತ್ತೇವೆ. ವೇಗವಾಗಿ ಲಸಿಕೆ ನೀಡುವುದರಲ್ಲಿ ಭಾರತ ಸ್ಥಾನದಲ್ಲಿದೆ. ಇಲ್ಲಿಯ ವರೆಗೆ 20 ಕೋಟಿ ಡೋಸ್ಗಳನ್ನು ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.
"2021ರ ಅಂತ್ಯದ ಒಳಗೆ ಭಾರತದ ಲಸಿಕಾ ಅಭಿಯಾನ ಅಂತ್ಯವಾಗುತ್ತದೆ. ಇದಕ್ಕೆ ಪೂರಕವಾದ ನೀಲನಕ್ಷೆಯನ್ನು ಆರೋಗ್ಯ ಸಚಿವಾಲಯ ರೂಪಿಸಿದೆ. 108 ಕೋಟಿ ಜನರು, 216 ಕೋಟಿ ಡೋಸ್ಗಳು. ನಾವು ಡಿಸೆಂಬರ್ ಒಳಗೆ ಸಂಪೂರ್ಣವಾಗಿ ಲಸಿಕೆ ಹಾಕಲಾಗುತ್ತದೆ ರಾಹುಲ್ ಅವರೇ" ಎಂದು ಪ್ರಕಾಶ್ ಜಾವಡೇಕರ್ ಉತ್ತರಿಸಿದ್ದಾರೆ.

ಇನ್ನು ಇದೇ ಸಂದರ್ಭದಲ್ಲಿ ಕೇಂದ್ರ ಸಚಿವರು ಲಸಿಕೆಯ ಕೊರತೆಯಿದೆ ಎಂದು ಹೇಳುತ್ತಿರುವ ಕೆಲ ರಾಜ್ಯಗಳ ಮೇಲೆಯೂ ಆರೋಪವನ್ನು ಹೊರಿಸಿದ್ದಾರೆ. ಮೇ 1 ರಿಂದ ನೀಡಲಾಗುತ್ತಿರುವ 18-44 ವರ್ಷದೊಳಗಿನವರ ಲಸಿಕೆಯ ಕೋಟಾವನ್ನು ಕೆಲ ರಾಜ್ಯಗಳು ಪಡೆದುಕೊಳ್ಳುತ್ತಿಲ್ಲ ಎಂದಿದ್ದಾರೆ.
ಇನ್ನು ಇದೇ ಸಂದರ್ಭದಲ್ಲಿ ಭಾರತ್ ಬಯೋಟೆಕ್ ಉತ್ಪಾದಿಸಿದ ಕೊವಾಕ್ಸಿನ್ ಲಸಿಕೆಯ ಸುರಕ್ಷತೆಯ ಬಗ್ಗೆ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಅನುಮಾನವನ್ನು ವ್ಯಕ್ತಪಡಿಸಿದರು ಎಂದು ಟೀಕಿಸಿದ್ದಾರೆ. ಕೊವಾಕ್ಸಿನ್ಗೆ ಜನವರಿಯಲ್ಲಿಯೇ ಒಪ್ಪಿಗೆ ದೊರೆತಿತ್ತು. ಆದರೆ ವೈದ್ಯಕೀಯ ತಜ್ಞರು, ಸಿವಿಲ್ ಸೊಸೈಟಿ ಗ್ರೂಪ್ಗಳು ಮತ್ತು ಕಾಂಗ್ರೆಸ್ನ ನಾಯಕರು ಲಸಿಕೆಯ ಸುರಕ್ಷತೆಯ ಬಗ್ಗೆ ಅನುಮಾನವನ್ನು ವ್ಯಕ್ತಪಡಿಸಿದರು. ಆದರೆ ಮಾರ್ಚ್ ತಿಂಗಳಲ್ಲಿ ಆ ಪ್ರಶ್ನೆಗಳಿಗೆ ಉತ್ತರ ದೊರೆತಿದ್ದು 81 ಪ್ರತಿಶತ ಪರಿಣಾಮಕಾರಿಯಾಗಿದೆ ಎಂದು ಖಚಿತವಾಗಿದೆ ಎಂದಿದ್ದಾರೆ ಪ್ರಕಾಶ್ ಜಾವಡೇಕರ್.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications