ಚೀನಾ ಗಡಿಯಲ್ಲಿ ಶಸ್ತ್ರಾಸ್ತ್ರ ಪತ್ತೆಗೆ 12 ರಡಾರ್ ಖರೀದಿಸಿದ ಭಾರತೀಯ ಸೇನೆ
ನವದೆಹಲಿ ಮೇ 12: ಭಾರತೀಯ ಸೇನೆಯು ಹೊಸದಾಗಿ 12 ಮೇಡ್ ಇನ್ ಇಂಡಿಯಾ ಶಸ್ತ್ರಾಸ್ತ್ರ ಪತ್ತೆ ರಡಾರ್ಗಳನ್ನು ಖರೀದಿಸಲು ತೀರ್ಮಾನಿಸಿದ್ದು, ಇದನ್ನು ಚೀನಾ ಗಡಿಯಲ್ಲಿ ನಿಯೋಜಿಸಲು ಯೋಜಿಸಲಾಗಿದೆ.
'ಸ್ವಾತಿ' ಹೆಸರಿನ ರಾಡಾರ್, ಶತ್ರುಗಳ ಮಾರ್ಟಾರ್ಸ್, ಶೆಲ್ಗಳು, ರಾಕೆಟ್ಗಳು ಸೇರಿದಂತೆ 50 ಮೀಟರ್ ದೂರದಿಂದ ಹಾರಿಸುವ ಶಸ್ತ್ರಾಸ್ತ್ರಗಳ ಸ್ಥಳವನ್ನು ಸ್ವಯಂಚಾಲಿತವಾಗಿ ಪತ್ತೆಹಚ್ಚುವ ಮೂಲಕ ಭಾರತೀಯ ಸೈನಿಕರಿಗೆ ಸಹಕಾರಿಯಾಗಲಿದೆ.
ಈ ವ್ಯವಸ್ಥೆಯು ಏಕಕಾಲದಲ್ಲಿ ಹಲವು ಕಡೆಗಳಿಂದ ಹಾರಿಸಲಾದ ಬಹು ಸ್ಫೋಟಕಗಳನ್ನು ಪತ್ತೆಹಚ್ಚಲು ಸಮರ್ಥವಾಗಿದೆ. ಆರ್ಟಿಲರಿ ಗನ್ಗಳಂತಹ ಶತ್ರುಗಳ ಶಸ್ತ್ರಾಸ್ತ್ರ ಇರುವ ಸ್ಥಳಗಳನ್ನು ತಿಳಿಯುವುದರಿಂದ ಭಾರತೀಯ ಯೋಧರು ಕರಾರುವಾಕ್ಕಾಗಿ ಪ್ರತಿ ದಾಳಿ ನಡೆಸಲು ಸಹಕಾರಿಯಾಗಲಿದೆ.

'ಸ್ವಾತಿ' ರಡಾರ್ಗಳನ್ನು ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಅಭಿವೃದ್ಧಿಪಡಿಸಿದ್ದು, ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಇದನ್ನು ನಿರ್ಮಿಸಿದೆ. ಒಟ್ಟು 12 ರಡಾರ್ಗಳ ಬೆಲೆ 1000 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ರಕ್ಷಣಾ ಇಲಾಖೆಯಿಂದ ಅನುಮೋದನೆ ದೊರೆತ ನಂತರ ಇದು ಭಾರತೀಯ ಸೇನೆಗೆ ಸೇರ್ಪಡೆಯಾಗಲಿದೆ.
ಸದ್ಯ ಭಾರತೀಯ ಸೇನೆಯು ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ತನ್ನ ಕಾರ್ಯಾಚರಣೆಗಾಗಿ ಶಸ್ತ್ರಾಸ್ತ್ರ ಪತ್ತೆ ಹಚ್ಚುವ ರಡಾರ್ಗಳನ್ನು ಬಳಸುತ್ತಿದೆ. ನೂತನವಾಗಿ ಅಭಿವೃದ್ಧಿಪಡಿರುವ 'ಸ್ವಾತಿ' ರಡಾರಗಳನ್ನು2018ರಲ್ಲಿಪರೀಕ್ಷೆಗಾಗಿ ಭಾರತೀಯ ಸೇನೆಗೆ ಹಸ್ತಾಂತರಿಸಲಾಗಿತ್ತು.

ಅತ್ಮನಿರ್ಭರ ಭಾರತ್ ಯೋಜನೆಯ ಅಡಿಯಲ್ಲಿ ಭಾರತೀಯ ನಿರ್ಮಿತ ಶಸ್ತ್ರಾಸ್ತ್ರಗಳನ್ನು ಹೊಂದಲು ಆದ್ಯತೆ ನೀಡಲಾಗಿದೆ. ಅಲ್ಲದೇ ಹೈಟೆಕ್ ಶಸ್ತ್ರಾಸ್ತ್ರಗಳನ್ನು ದೇಶೀಯವಾಗಿ ತಯಾರಿಸುವ ಮೂಲಕ ಆಮದನ್ನು ಕಡಿತಗೊಳಿಸುವ ಪ್ರಯತ್ನದಲ್ಲಿ ಇದ್ದೇವೆ ಎಂದು ರಕ್ಷಣಾ ಇಲಾಖೆ ತಿಳಿಸಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications