ಮಲ್ಯಗೆ ಸಹಾಯ ಮಾಡಿದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ಸಿಂಗ್ ಹೇಳಿದ್ದೇನು?
ನವದೆಹಲಿ, ಜನವರಿ 30:ನಾನು ತೆಗೆದುಕೊಂಡ ಕ್ರಮ ಮನಃಪೂರ್ವಕವಾಗಿ ತೆಗೆದುಕೊಂಡದ್ದು. ಕಾನೂನಿಗೆ ವಿರುದ್ಧವಾಗಿ ಏನನ್ನೂ ಮಾಡಿಲ್ಲ ಎಂದು ಮನ್ ಮೋಹನ್ ಸಿಂಗ್ ಹೇಳಿದ್ದಾರೆ. ಕಾನೂನು ಮೀರಿ ವಿಜಯ್ ಮಲ್ಯ ಅವರಿಗೆ ಸಿಂಗ್ ಸಹಾಯ ಮಾಡಿದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ಅವರು ಹೀಗೆ ಪ್ರತಿಕ್ರಿಯಿಸಿದ್ದಾರೆ.
ಅದೊಂದು ಪತ್ರದ ತುಣುಕು. ಸರಕಾರದಲ್ಲಿ ನನ್ನಂತೆ ಜವಾಬ್ದಾರಿ ಹೊತ್ತವರು ಮಾಡುತ್ತಿದ್ದದ್ದೇ ಹೀಗೆ ಎಂದು ಸೋಮವಾರ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪತ್ರಿಕಾ ಗೋಷ್ಠಿಯಲ್ಲಿ ಸಮರ್ಥನೆ ನೀಡಿದ್ದಾರೆ.
ಭಾರತದ ಆರ್ಥಿಕತೆ ಸ್ಥಿತಿ ಸರಿಯಾದ ರೂಪದಲ್ಲಿಲ್ಲ ಎಂದು ಆರೋಪಿಸಿ, ಬಜೆಟ್ ಗೂ ಮುನ್ನ ವರದಿಯೊಂದನ್ನು ಬಿಡುಗಡೆ ಮಾಡಿ, ಮಾತನಾಡಿದರು.[ಮಲ್ಯಗೆ ಕೋಟ್ಯಂತರ ರು. ಸಾಲ ಕೊಡಿಸಿದ್ದು ಮನಮೋಹನ್ ಸಿಂಗ್ ?]

ಅವರ ಜತೆಗಿದ್ದ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ, ಸಂಶೋಧನೆ-ಅಂಕಿ, ಅಂಶಗಳನ್ನು ಕಲೆ ಹಾಕಿ ದೇಶದ ಆರ್ಥಿಕತೆ ಬಗ್ಗೆ ದಾಖಲೆ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.
ಉದ್ಯೋಗಗಳು ಎಲ್ಲಿ ಸೃಷ್ಟಿಯಾಗಿವೆ? ಹೊಸ ಬಂಡವಾಳ ಹೂಡಿಕೆ ಎಲ್ಲಿಯಾಗಿದೆ? ಕ್ರೆಡಿಟ್ ಗ್ರೋಥ್ ಎಲ್ಲಾಗಿದೆ ಎಂದು ಚಿದಂಬರಂ ಪ್ರಶ್ನಿಸಿದರು. ಉದ್ಯೋಗ ಸೃಷ್ಟಿಯಾಗುತ್ತಿಲ್ಲ. ಬಂಡವಾಳ ಸೃಷ್ಟಿ ಕುಸಿಯುತ್ತಿದೆ. ಕಳೆದ ಹಲವು ದಶಕಗಳಲ್ಲೇ ಕ್ರೆಡಿಟ್ ಗ್ರೋಥ್ ಕನಿಷ್ಠ ಮಟ್ಟದಲ್ಲಿದೆ ಎಂದು ಅವರು ಹೇಳಿದ್ದಾರೆ.[ಕೇಂದ್ರ ಬಜೆಟ್ ನ 7 ಇಂಟರೆಸ್ಟಿಂಗ್ ಸಂಗತಿಗಳು]

ನಾಳೆಯೇನೋ ದೇಶದ ಆರ್ಥಿಕತೆ ಅದ್ಭುತವಾಗಿ ಬಿಡುತ್ತದೆ ಎಂದು ಸರಕಾರ ಹೇಳುತ್ತಿದೆ. ಆದರೆ ದೇಶದ ಜನರಿಗೆ ಅದನ್ನು ಪ್ರಶ್ನಿಸುವ ಹಕ್ಕಿದೆ. ಎಲ್ಲ ಸರಕಾರಗಳು ಆಶಾವಾದಿಯಾಗಿರುತ್ತವೆ. ಆದರೆ ಅದರ ಬೇರು ಸನ್ನಿವೇಶದ ವಾಸ್ತವಾಂಶಗಳ ಮೇಲೆ ಇರಬೇಕು ಎಂದು ಚಿದಂಬರಂ ಹೇಳಿದ್ದಾರೆ.
ಎನ್ ಡಿಎ ಸರಕಾರ ಆರ್ಥಿಕತೆಯ ಉತ್ಪ್ರೇಕ್ಷೆ ಮಾಡುತ್ತಿದೆ. ಇಂದು ನಾವು ಬಿಡುಗಡೆ ಮಾಡುತ್ತಿರುವ ಸಂಶೋಧನೆ ದಾಖಲೆಗಳು ನಾಳೆ ಸರಕಾರ ಹೇಳುವ ವಿಚಾರಕ್ಕಿಂತ ಸತ್ಯಕ್ಕೆ ಹತ್ತಿರವಾಗಿವೆ. ಜಿಡಿಪಿ ದರ ಅಷ್ಟು-ಇಷ್ತು ಎಂದು ಅದರ ಹಿಂದೆ ಬಿಜೆಪಿ ಅವಿತಿಟ್ಟುಕೊಳ್ಳುತ್ತಿದೆ. ಆದರೆ ಜನರು ಉದ್ಯೋಗಗಳ ಬಗ್ಗೆ ಪ್ರಶ್ನಿಸುತ್ತಿದ್ದಾರೆ ಎಂದು ಚಿದಂಬರಂ ಹೇಳಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications