ಸದ್ಯದಲ್ಲೇ 3 ಹೈಸ್ಪೀಡ್ ರೈಲ್ವೆ ಹಳಿ ನಿರ್ಮಾಣ ಆರಂಭ
ನವದೆಹಲಿ, ಸೆಪ್ಟೆಂಬರ್, 25 : ಭಾರತೀಯ ರೈಲ್ವೆ ಇಲಾಖೆಯು 'ವಜ್ರ ಚುತಷ್ಪಥ ಯೋಜನೆ' ಅಡಿ ದೇಶದಲ್ಲಿ ಮೂರು ಹೈಸ್ಪೀಡ್ ರೈಲು ಕಾರಿಡಾರ್ ನಿರ್ಮಾಣಕ್ಕೆ ಮೂರು ರಾಷ್ಟ್ರಗಳ ಕಂಪೆನಿಯನ್ನು ಆಯ್ದುಕೊಳ್ಳಲಾಗಿದ್ದು, ಈ ಕಾರಿಡಾರ್ ಬರೋಬ್ಬರಿ 2ಲಕ್ಷ ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಲಿದೆ.
ಹೈಸ್ಪೀಡ್ ರೈಲ್ವೆ ಹಳಿ ನಿರ್ಮಾಣ ಯೋಜನೆಗೆ ಚೀನಾ, ಫ್ರಾನ್ಸ್, ಸ್ಪೇನ್ ರಾಷ್ಟ್ರಗಳ ಕಂಪನಿಗಳು ಸಮ್ಮತಿ ಸೂಚಿಸಿವೆ. ರೈಲ್ವೆಹಳಿ ದೆಹಲಿ-ಮುಂಬೈ, ಮುಂಬೈ-ಚೆನ್ನೈ ಹಾಗೂ ದೆಹಲಿ-ಕೊಲ್ಕತ್ತಾ ನಡುವೆ ನಿರ್ಮಿತವಾಗಲಿದೆ. ಇದರ ಕುರಿತಾದ ನೀಲನಕ್ಷೆ ತಯಾರಿಕೆಗಾಗಿ 30ಕೋಟಿ ರೂ ತಗುಲಬಹುದೆಂದು ಅಂದಾಜು ಮಾಡಲಾಗಿದೆ.[ಬೆಂಗಳೂರಲ್ಲಿ ರೈಲ್ವೆ ಮುಂಗಡ ಟಿಕೆಟ್ ಬುಕಿಂಗ್ ಗಾಗಿ ಹೊಸ ವ್ಯವಸ್ಥೆ]

ದೆಹಲಿ-ಮುಂಬೈ ಕಾರಿಡಾರ್ ಅಧ್ಯಯನ ನಡೆಸಲು ಚೀನಾದ ಡಿಸೈನ್ ಇನ್ಸ್ ಟಿಟ್ಯೂಟ್ , ಫ್ರಾನ್ಸ್ ನ ಸಿಸ್ಟ್ರಾ ಕಂಪೆನಿ ಮುಂಬೈ-ಚೆನ್ನೈ ಕಾರಿಡಾರ್ ಅಧ್ಯಯನ ಕೈಗೊಳ್ಳಲಿದೆ. ಸ್ಪೇನ್ ನ ಇನ್ ಇಕೋ ಕಂಪೆನಿ ದೆಹಲಿ-ಕೊಲ್ಕತ್ತಾ ಕಾರಿಡಾರ್ ಬಗ್ಗೆ ಅಧ್ಯಯನ ಕೈಗೊಳ್ಳಲಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಹೈಸ್ಪೀಡ್ ರೈಲುಗಳು ಗಂಟೆಗೆ 300ಕಿ.ಮೀ ವೇಗದಲ್ಲಿ ಚಲಿಸುತ್ತದೆ. ಪ್ರಸ್ತುತ ಭಾರತದಲ್ಲಿ ಮುಂಬೈ-ದೆಹಲಿ ನಡುವೆ ಸಂಚರಿಸುತ್ತಿರುವ ರಾಜಧಾನಿ ಎಕ್ಸ್ ಪ್ರೆಸ್ ರೈಲು ದೆಹಲಿಯಿಂದ ಮುಂಬೈಗೆ 16ಗಂಟೆಯಲ್ಲಿ ತಲುಪುತ್ತದೆ.
ಆದರೆ ಈಗ ಚತುಷ್ಪಥ ಯೋಜನೆ ಅಡಿ ರೂಪುಗೊಳ್ಳುತ್ತಿರುವ ಹೈಸ್ಪೀಡ್ ರೈಲು ಯೋಜನೆಯು ಯಶಸ್ವಿಯಾದರೆ ದೆಹಲಿಯಿಂದ ಮುಂಬೈಗೆ ಕೇವಲ 8 ಗಂಟೆಯಲ್ಲಿ ತಲುಪಬಹುದಾಗಿದೆ. ಈಗಾಗಲೇ ಚೀನಾ ಈ ಯೋಜನೆಯ ಅಧ್ಯಯನವನ್ನು ಕೈಗೆತ್ತಿಕೊಂಡಿದ್ದು, ಅತಿಶೀಘ್ರದಲ್ಲಿ ಪೂರ್ಣಗೊಳಿಸುವ ಭರವಸೆ ನೀಡಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications