ಭಾರತದ ಮೊದಲ 'ಬುಲೆಟ್ ಟ್ರೈನ್' 2026ರಿಂದ ಸಂಚರಿಸಲಿದೆ: ಅಶ್ವಿನಿ ವೈಷ್ಣವ್
ನವದೆಹಲಿ, ಅಕ್ಟೋಬರ್ 08: ಭಾರತದಲ್ಲಿ ಬುಲೆಟ್ ಟ್ರೈನ್ ತನ್ನ ಮೊದಲ ಸಂಚಾರ ಆರಂಭಿಸುವುದರ ಕುರಿತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಶುಕ್ರವಾರ ಮಹತ್ವ ಘೋಷಣೆಯೊಂದನ್ನು ಮಾಡಿದ್ದಾರೆ.
ಭಾರತ ದೇಶದ ಮೊದಲ ಅತ್ಯಂತ ವೇಗದ 'ಬುಲೆಟ್ ರೈಲು' 2026 ರಲ್ಲಿ ಓಡಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಘೋಷಣೆ ಮಾಡಿದ್ದಾರೆ. ಈ ಘೋಷಣೆ ಜೊತೆಗೆ ಬುಲೆಟ್ ರೈಲು ಯೋಜನೆಯಲ್ಲಿ ಈವರೆಗೆ ಪೂರ್ಣಗೊಂಡಿರುವ ಕಾಮಗಾರಿಯ ಅಂದಾಜು ವೆಚ್ಚವನ್ನು ಸಾರ್ವಜನಿಕವಾಗಿ ಅವರು ಹಂಚಿಕೊಂಡಿದ್ದಾರೆ.

ಅಹಮದಾಬಾದ್ ಪ್ರವಾಸದಲ್ಲಿರುವ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಈ ಘೋಷಣೆ ಮಾಡಿದ್ದಾರೆ. 2026 ರಲ್ಲಿ ದೇಶದ ಮೊದಲ ಬುಲೆಟ್ ರೈಲು ಓಡಲಿದೆ. ಈ ಬುಲೆಟ್ ರೈಲು ಯೋಜನೆಗಾಗಿ ಪ್ರಸ್ತುತದಲ್ಲಿ 92 ಪಿಲ್ಲರ್ಗಳಲ್ಲಿ ಮಾರ್ಗ ಸಿದ್ಧಪಡಿಸಲಾಗಿದೆ. ಅಲ್ಲದೇ ಅದಕ್ಕಾಗಿ ವಿಶ್ವದರ್ಜೆಯ ರೈಲು ನಿಲ್ದಾಣ ನಿರ್ಮಿಸಲಿದ್ದೇವೆ. ಇದರೊಂದಿಗೆ 199 ನಿಲ್ದಾಣಗಳನ್ನು ವಿಶ್ವ ದರ್ಜೆಗೆ ತರಲು ಮಾಸ್ಟರ್ ಪ್ಲಾನ್ ಒಂದನ್ನು ರೂಪಿಸಿದ್ದೇವೆ ಎಂದು ಅವರು ಹೇಳಿದರು.
ವಿಶ್ವ ದರ್ಜೆಯ ರೈಲು ನಿಲ್ದಾಣ ನಿರ್ಮಾಣ
ಹೊಸ ಮಾಸ್ಟರ್ಪ್ಲಾನ್ ಅಡಿಯಲ್ಲಿ ಅಹಮದಾಬಾದ್ ರೈಲು ನಿಲ್ದಾಣಗಳನ್ನು ವಿಶ್ವದರ್ಜೆಗೆ ಏರಿಸಲಾಗುವುದು. ಬುಲೆಟ್ ರೈಲಿನ ಈ ಘೋಷಣೆಯ ಜೊತೆಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಗುರುವಾರ ಟ್ವೀಟ್ ಮಾಡುವ ಮೂಲಕ ಕೆಲವು ಮಾಹಿತಿ ಹಂಚಿಕೊಂಡಿದ್ದರು. ರೈಲ್ವೆ ಸಚಿವಾಲಯವು ರೈಲ್ವೆಯಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಜನರಿಗೆ ಉಚಿತ, ಸುರಕ್ಷಿತ ಮತ್ತು ಹೆಚ್ಚಿನ ವೇಗದ ವೈಫೈ ಸೌಲಭ್ಯಗಳನ್ನು ಒದಗಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ಈವರೆಗೆ 6,105 ರೈಲು ನಿಲ್ದಾಣಗಳಲ್ಲಿ ಜನರಿಗೆ ವೈಫೈ ಸೌಲಭ್ಯ ಕಲ್ಪಿಸಿ ಕೊಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

508ಕಿ.ಮೀ. ವ್ಯಾಪ್ತಿ ರೈಲು ಯೋಜನೆ
ದೇಶದಲ್ಲಿ ಮೊದಲ ಹೈಸ್ಪೀಡ್ ಬುಲೆಟ್ ರೈಲು ಮುಂಬೈ- ಅಹಮದಾಬಾದ್ ನಡುವೆ ಸಂಚರಿಸಲಿದೆ. ಈ ರೈಲು ಯೋಜನೆಯು 508.17 ಕಿಲೋ ಮೀಟರ್ ದೂರು ಒಳಗೊಂಡಿದೆ. ಇದರ ಒಟ್ಟು ಅಂದಾಜು ವೆಚ್ಚ 1.08 ಟ್ರಿಲಿಯನ್ ರೂ. ಎಂದು ಹೇಳಲಾಗಿದೆ. ಅಂದರೆ ಪ್ರತಿ ಕಿಲೋ ಮೀಟರ್ ಮಾರ್ಗ ನಿರ್ಮಾಣಕ್ಕಾಗಿ 213 ಕೋಟಿ ರೂ. ವ್ಯಯಿಸಲಾಗುತ್ತಿದೆ.
ಈ ಮೊದಲು ಯೋಜನೆಯು ಡಿಸೆಂಬರ್ 2023 ಒಳಗೆ ಕಾರ್ಯಾರಂಭಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ವಿವಿಧ ಕಾರಣಗಳಿಂದಾಗಿ ಬುಲೆಟ್ ರೈಲು ಸಂಚಾರದ ಅವಧಿ ವಿಸ್ತರಣೆಯಾಗಿದೆ. ಬುಲೆ ಟ್ ರೈಲು ಯೋಜನೆ ಮೊದಲ ಹಂತವು 2026ರಲ್ಲಿ ಪೂರ್ಣಗೊಳ್ಳಲಿದ್ದು, ಅಂದು ದೇಶದ ಮೊದಲಬುಲೆಟ್ ಟೈಲು ಸಂಚಾರ ಆರಂಭಿಸಲಿದೆ. ಯೋಜನೆಗೆ ಅಗತ್ಯವಾಗಿದ್ದ 1,396 ಹೆಕ್ಟೇರ್ ಪೈಕಿ ಶೇ. 90ರಿಂದ 95ರಷ್ಟು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವಾಲಯದ ಮೂಲಗಳು ತಿಳಿಸಿವೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications