ಭಾರತದ ಮೊದಲ 'ಬುಲೆಟ್ ಟ್ರೈನ್' 2026ರಿಂದ ಸಂಚರಿಸಲಿದೆ: ಅಶ್ವಿನಿ ವೈಷ್ಣವ್
ನವದೆಹಲಿ, ಅಕ್ಟೋಬರ್ 08: ಭಾರತದಲ್ಲಿ ಬುಲೆಟ್ ಟ್ರೈನ್ ತನ್ನ ಮೊದಲ ಸಂಚಾರ ಆರಂಭಿಸುವುದರ ಕುರಿತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಶುಕ್ರವಾರ ಮಹತ್ವ ಘೋಷಣೆಯೊಂದನ್ನು ಮಾಡಿದ್ದಾರೆ.
ಭಾರತ ದೇಶದ ಮೊದಲ ಅತ್ಯಂತ ವೇಗದ 'ಬುಲೆಟ್ ರೈಲು' 2026 ರಲ್ಲಿ ಓಡಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಘೋಷಣೆ ಮಾಡಿದ್ದಾರೆ. ಈ ಘೋಷಣೆ ಜೊತೆಗೆ ಬುಲೆಟ್ ರೈಲು ಯೋಜನೆಯಲ್ಲಿ ಈವರೆಗೆ ಪೂರ್ಣಗೊಂಡಿರುವ ಕಾಮಗಾರಿಯ ಅಂದಾಜು ವೆಚ್ಚವನ್ನು ಸಾರ್ವಜನಿಕವಾಗಿ ಅವರು ಹಂಚಿಕೊಂಡಿದ್ದಾರೆ.

ಅಹಮದಾಬಾದ್ ಪ್ರವಾಸದಲ್ಲಿರುವ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಈ ಘೋಷಣೆ ಮಾಡಿದ್ದಾರೆ. 2026 ರಲ್ಲಿ ದೇಶದ ಮೊದಲ ಬುಲೆಟ್ ರೈಲು ಓಡಲಿದೆ. ಈ ಬುಲೆಟ್ ರೈಲು ಯೋಜನೆಗಾಗಿ ಪ್ರಸ್ತುತದಲ್ಲಿ 92 ಪಿಲ್ಲರ್ಗಳಲ್ಲಿ ಮಾರ್ಗ ಸಿದ್ಧಪಡಿಸಲಾಗಿದೆ. ಅಲ್ಲದೇ ಅದಕ್ಕಾಗಿ ವಿಶ್ವದರ್ಜೆಯ ರೈಲು ನಿಲ್ದಾಣ ನಿರ್ಮಿಸಲಿದ್ದೇವೆ. ಇದರೊಂದಿಗೆ 199 ನಿಲ್ದಾಣಗಳನ್ನು ವಿಶ್ವ ದರ್ಜೆಗೆ ತರಲು ಮಾಸ್ಟರ್ ಪ್ಲಾನ್ ಒಂದನ್ನು ರೂಪಿಸಿದ್ದೇವೆ ಎಂದು ಅವರು ಹೇಳಿದರು.
ವಿಶ್ವ ದರ್ಜೆಯ ರೈಲು ನಿಲ್ದಾಣ ನಿರ್ಮಾಣ
ಹೊಸ ಮಾಸ್ಟರ್ಪ್ಲಾನ್ ಅಡಿಯಲ್ಲಿ ಅಹಮದಾಬಾದ್ ರೈಲು ನಿಲ್ದಾಣಗಳನ್ನು ವಿಶ್ವದರ್ಜೆಗೆ ಏರಿಸಲಾಗುವುದು. ಬುಲೆಟ್ ರೈಲಿನ ಈ ಘೋಷಣೆಯ ಜೊತೆಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಗುರುವಾರ ಟ್ವೀಟ್ ಮಾಡುವ ಮೂಲಕ ಕೆಲವು ಮಾಹಿತಿ ಹಂಚಿಕೊಂಡಿದ್ದರು. ರೈಲ್ವೆ ಸಚಿವಾಲಯವು ರೈಲ್ವೆಯಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಜನರಿಗೆ ಉಚಿತ, ಸುರಕ್ಷಿತ ಮತ್ತು ಹೆಚ್ಚಿನ ವೇಗದ ವೈಫೈ ಸೌಲಭ್ಯಗಳನ್ನು ಒದಗಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ಈವರೆಗೆ 6,105 ರೈಲು ನಿಲ್ದಾಣಗಳಲ್ಲಿ ಜನರಿಗೆ ವೈಫೈ ಸೌಲಭ್ಯ ಕಲ್ಪಿಸಿ ಕೊಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

508ಕಿ.ಮೀ. ವ್ಯಾಪ್ತಿ ರೈಲು ಯೋಜನೆ
ದೇಶದಲ್ಲಿ ಮೊದಲ ಹೈಸ್ಪೀಡ್ ಬುಲೆಟ್ ರೈಲು ಮುಂಬೈ- ಅಹಮದಾಬಾದ್ ನಡುವೆ ಸಂಚರಿಸಲಿದೆ. ಈ ರೈಲು ಯೋಜನೆಯು 508.17 ಕಿಲೋ ಮೀಟರ್ ದೂರು ಒಳಗೊಂಡಿದೆ. ಇದರ ಒಟ್ಟು ಅಂದಾಜು ವೆಚ್ಚ 1.08 ಟ್ರಿಲಿಯನ್ ರೂ. ಎಂದು ಹೇಳಲಾಗಿದೆ. ಅಂದರೆ ಪ್ರತಿ ಕಿಲೋ ಮೀಟರ್ ಮಾರ್ಗ ನಿರ್ಮಾಣಕ್ಕಾಗಿ 213 ಕೋಟಿ ರೂ. ವ್ಯಯಿಸಲಾಗುತ್ತಿದೆ.
ಈ ಮೊದಲು ಯೋಜನೆಯು ಡಿಸೆಂಬರ್ 2023 ಒಳಗೆ ಕಾರ್ಯಾರಂಭಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ವಿವಿಧ ಕಾರಣಗಳಿಂದಾಗಿ ಬುಲೆಟ್ ರೈಲು ಸಂಚಾರದ ಅವಧಿ ವಿಸ್ತರಣೆಯಾಗಿದೆ. ಬುಲೆ ಟ್ ರೈಲು ಯೋಜನೆ ಮೊದಲ ಹಂತವು 2026ರಲ್ಲಿ ಪೂರ್ಣಗೊಳ್ಳಲಿದ್ದು, ಅಂದು ದೇಶದ ಮೊದಲಬುಲೆಟ್ ಟೈಲು ಸಂಚಾರ ಆರಂಭಿಸಲಿದೆ. ಯೋಜನೆಗೆ ಅಗತ್ಯವಾಗಿದ್ದ 1,396 ಹೆಕ್ಟೇರ್ ಪೈಕಿ ಶೇ. 90ರಿಂದ 95ರಷ್ಟು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವಾಲಯದ ಮೂಲಗಳು ತಿಳಿಸಿವೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications