ಕೊರೊನಾದಿಂದ ಮುಕ್ತಿ ಪಡೆದ ವಿದ್ಯಾರ್ಥಿನಿ; ಇದು ಭಾರತದಲ್ಲಿ ಮೊದಲು!
ನವದೆಹಲಿ, ಫೆಬ್ರವರಿ 14: ಜಗತ್ತಿನಾದ್ಯಂತ ತೀವ್ರ ಆತಂಕ ಸೃಷ್ಠಿಸಿರುವ ಕೊರೊನಾ ವೈರಸ್ ಖಾಯಿಲೆ (ಕೋವಿದ್19) ಗೆ ತುತ್ತಾಗಿ ಚೇತರಿಸಿಕೊಂಡ ಭಾರತದ ಎರಡನೇ ರೋಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ವರದಿಗಳು ಬಂದಿವೆ.
ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ವರದಿ ಬಿಡುಗಡೆ ಮಾಡಿದೆ. ಚೀನಾದ ವುಹಾನ್ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗಕ್ಕೆ ತೆರಳಿದ್ದ ಕೇರಳದ ತ್ರಿಸುರ ಮೂಲದ ವಿದ್ಯಾರ್ಥಿನಿಗೆ ಕೊರೊನಾ ಇರುವುದು ದೃಡಪಟ್ಟಿತ್ತು. ಆಕೆ ಜನೇವರಿ 30 ರಂದು ಭಾರತಕ್ಕೆ ಬಂದಿದ್ದಳು. ಸದ್ಯ ನಾಲ್ಕನೇ ತಪಾಸೆಣೆ ನಂತರ ವಿದ್ಯಾರ್ಥಿನಿಗೆ ಕೊರೊನಾ ಇಲ್ಲದಿರುವುದು ಪತ್ತೆಯಾಗಿದೆ.
ಸದ್ಯ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದ ಇನ್ನೊಂದು ವಾರ ಅವರ ಮೇಲೆ ತೀವ್ರ ನಿಗಾ ವಹಿಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಡಾ ಹರ್ಷವರ್ಧನ್ ಹೇಳಿದ್ದಾರೆ.

2,51,447 ಜನರ ತಪಾಸೆಣೆಗೆ
ಹೊರದೇಶದಿಂದ ಬರುವ ಎಲ್ಲರನ್ನು ವಿಮಾನ ನಿಲ್ದಾಣದಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಇಲ್ಲಿಯವರೆಗೆ 2,51,447 ಜನರನ್ನು ತಪಾಸೆಣೆಗೆ ಒಳಪಡಿಸಲಾಗಿದೆ. 15,991 ಜನರ ಮೇಲೆ ನಿಗಾ ಇಡಲಾಗಿದೆ. ಅವರಲ್ಲಿ 497 ಜನರಲ್ಲಿ ಕೊರೊನಾ ಲಕ್ಷಣಗಳು ಕಂಡು ಬಂದಿವೆ. 47 ಜನರನ್ನು ಆಸ್ಪತ್ರಗೆ ಸೇರಿಸಿ ತೀವ್ರ ನಿಗಾ ವಹಿಸಲಾಗಿದೆ ಎಂದು ಡಾ ಹರ್ಷವರ್ಧನ್ ತಿಳಿಸಿದ್ದಾರೆ.

ಕೊರೊನಾ; ಮತ್ತೊಂದು ಸುತ್ತಿನ ಸಭೆ
ಜಗತ್ತಿನಾದ್ಯಂತ ತೀವ್ರ ಆತಂಕ ಸೃಷ್ಠಿಸಿರುವ ಕೊರೊನಾ ವೈರಸ್ ಖಾಯಿಲೆ ಭಾರತದಲ್ಲಿ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಹರ್ಷವರ್ಧನ್ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಕುರಿತು ಎರಡನೇ ಸುತ್ತಿನ ಉನ್ನತ ಮಟ್ಟದ ಸಭೆಯನ್ನು ನಡೆಸಲಿದ್ದಾರೆ. ದೇಶವಾಸಿಗಳು ಕೊರೊನಾ ಬಗ್ಗೆ ಆತಂಕಗೊಳ್ಳುವ ಅಗತ್ಯ ಇಲ್ಲ ಎಂದು ಅವರು ಹೇಳಿದ್ದಾರೆ.

1400 ಗಡಿ ದಾಟಿದ ಸಾವು
ಚೀನಾದಲ್ಲಿ ತೀವ್ರ ತಲ್ಲಣ ಸೃಷ್ಠಿಸಿರುವ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ ಶುಕ್ರವಾರಕ್ಕೆ 1400 ಗಡಿ ದಾಟಿದೆ. ಸುಮಾರು 49 ಸಾವಿರ ಜನರಲ್ಲಿ ಕೊರೊನಾ ಕಾಣಿಸಿಕೊಂಡಿದೆ. ಕೊರೊನಾ ಹರಡದಂತೆ ತಡೆಯುವಲ್ಲಿ ಚೀನಾ ಸರ್ಕಾರ ಚಿಂತಾಕ್ರಾಂತವಾಗಿದೆ ಎಂದು ಕೆಲ ವರದಿಗಳು ಹೇಳಿವೆ.

ಕೊರೊನಾಕ್ಕೆ ಹೆದರಿ ಆತ್ಮಹತ್ಯೆ
ಇತ್ತೀಚೆಗೆ ಭಾರತದಲ್ಲಿ ತನಗೆ ಕೊರೊನಾ ಸೋಂಕು ತಗುಲಿದೆ ಎಂದು ಆಂಧ್ರಪ್ರದೇಶದ ರೈತನನೊಬ್ಬ ತನ್ನನ್ನೇ ತಾನು ಬಲಿ ಪಡೆದುಕೊಂಡಿದ್ದ ವಿಚಿತ್ರ ಘಟನೆ ಸೋಮವಾರ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದಿತ್ತು. ತಿರುಪತಿ ಬಳಿಯ ತೊಟ್ಟಂಬೇಡು ಗ್ರಾಮದ ಬಾಲಕೃಷ್ಣಯ್ಯ ಎಂಬ 54 ವರ್ಷದ ರೈತ, "ತನಗೆ ಕೊರೊನಾ ಬಂದಿದೆ. ಅದು ಬೇರೆಯವರಿಗೂ ಬರುವುದು ಬೇಡ' ಎಂದು ಹೊಲದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ನಡೆದಿತ್ತು.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications