ಸಂಸದೀಯ ರಾಜಕಾರಣಕ್ಕೆ ವಿದಾಯದ ಸೂಚನೆ ನೀಡಿದ ಸುಷ್ಮಾ, ಸುಮಿತ್ರಾ
ಭಾರತೀಯ ಜನತಾ ಪಕ್ಷದ ಇಬ್ಬರು ಮಹಾನ್ ಮುಖಂಡರಾದ ಸುಷ್ಮಾ ಸ್ವರಾಜ್ ಮತ್ತು ಸುಮಿತ್ರಾ ಮಹಾಜನ್ ಅವರು ಮಾಜಿ-ಸಂಸದರ ಗುರಿತಿನ ಚೀಟಿಗೆ ಅರ್ಜಿ ಹಾಕಿರುವುದು ಅವರ ಸಂಸದೀಯ ರಾಜಕಾರಣಕ್ಕೆ ವಿದಾಯ ಹೇಳುತ್ತಿರುವ ಸೂಚನೆ ಎನ್ನಿಸಿದೆ.
ಅನಾರೋಗ್ಯದ ಕಾರಣ ಲೋಕಸಭೆ ಚುನಾವಣೆಗೆ ಸ್ಪರ್ಧಿಸದಿದ್ದರೂ, ರಾಜ್ಯ ಸಭೆಯಿಂದಾದರೂ ಸುಮಿತ್ರಾ ಮಹಾಜನ್, ಮತ್ತು ಸುಷ್ಮಾ ಸ್ವರಾಜ್ ಅವರು ಸಂಸತ್ ಪ್ರವೇಶಿಸಬಹುದು ಎಂಬ ಊಹೆ ಇನ್ನೂ ಹಲವು ಅಭಿಮಾನಿಗಳಿಗಿತ್ತು. ಆದರೆ ಅವರು ಮಾಜಿ ಸಂಸದರ ಗುರುತಿನ ಚೀಟಿಗೆ ಅರ್ಜಿ ಸಲ್ಲಿಸಿರುವುದು ಅಭಿಮಾನಿಗಳಿಗೆ ಭಾರೀ ನಿರಾಶೆಯನ್ನುಂಟು ಮಾಡಿದೆ.
2019 ರ ಲೋಕಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು 67 ವರ್ಷ ವಯಸ್ಸಿನ ಸುಷ್ಮಾ ಸ್ವರಾಜ್ ಮೊದಲೇ ಘೋಷಿಸಿದ್ದರು. ಆದರೆ ತಾವು ರಾಜಕೀಯದಿಂದ ನಿವೃತ್ತಿ ಪಡೆಯುವುದಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದರು.

ಜೊತೆಗೆ ಇಂಧೋರ್ ಸಂಸದೆ(ಮಾಜಿ)ಯಾಗಿದ್ದ 76 ವರ್ಷ ವಯಸ್ಸಿನ ಮಾಜಿ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಸಹ ತಾವು ಈ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರು. ಮಂಗಳವಾರ ಸುಮಿತ್ರಾ ಮಹಾಜನ್ ಅವರಿಗೆ ಮಾಜಿ ಸಂಸದರ ಗುರುತಿನ ಚೀಟಿಯನ್ನು ನೀಡಲಾಗಿದೆ ಎಂದು ಅವರ ವಕ್ತಾರ ಪಂಕಜ್ ಕ್ಷೀರಸಾಗರ್ ಸ್ಪಷ್ಟಪಡಿಸಿದ್ದಾರೆ.
ಈಗಾಗಲೇ ತಮ್ಮ ವಿದಾಯದ ಸಭೆಯನ್ನು ಮಹಾಜನ್ ನಡೆಸಿದ್ದು, ಟ್ವೀಟ್ ಮಾಡಿ ಪ್ರಧಾನಿ ಮೋದಿ ಅವರಿಗೆ ಕೃತಜ್ಞತೆ ಅರ್ಪಿಸಿದ್ದಾರೆ. "ನೀವು ನನಗೆ ಸ್ಪೀಕರ್ ಆಗುವ ಅವಕಾಶ ಕೊಟ್ಟಿದ್ದೀರಿ. ಧನ್ಯವಾದಗಳಿ ಪ್ರಧಾನಿ ಮೋದಿ" ಎಂದಿದ್ದಾರೆ.
ಆದರೆ ಸುಷ್ಮಾ ಸ್ವರಾಜ್ ಅವರ ಅರ್ಜಿಯನ್ನು ಸ್ವೀಕರಿಸಲಾಗಿದ್ದು, ಅದು ಪ್ರಗತಿಯಲ್ಲಿದೆ ಎಂದು ತಿಳಿದುಂದಿದೆ. ಈ ಬಗ್ಗೆ ಸ್ವರಾಜ್ ಅವರ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಲಭ್ಯವಾಗಿಲ್ಲ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications