ಪತನವಾದ ಇಂಡೋನೇಷ್ಯಾ ವಿಮಾನದ ಪೈಲೆಟ್ ದೆಹಲಿಯವರು!
ಜಕಾರ್ತಾ, ಅಕ್ಟೋಬರ್ 29: ಇಂಡೋನೇಷ್ಯಾದ ಜಕಾರ್ತಾದಿಂದ ಹೊರಟ ಲಯನ್ ಏರ್ ವಿಮಾನ ಪತನವಾಗಿದ್ದು, ವಿಮಾನದಲ್ಲಿದ್ದ 189 ಜನರೂ ಮೃತರಾಗಿದ್ದಾರೆಂದು ಮೂಲಗಳು ತಿಳಿಸಿವೆ.
ಅಚ್ಚರಿಯ ವಿಷಯವೆಂದರೆ ಈ ವಿಮಾನದ ಪೈಲೆಟ್ ಆಗಿದ್ದವರು ಕ್ಯಾ.ಭವ್ಯೆ ಸುನೆಜಾ ಎಂಬ ಭಾರತೀಯ! ದೆಹಲಿ ಮೂಲದ ಭವ್ಯೆ ಅವರು ಸಹ ಈ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡಿದ್ದು, ಅವರ ಆತ್ಮಕ್ಕೆ ಶಾಂತಿ ಕೋರುತ್ತೇವೆ ಎಂದು ಇಂಡೋನೇಷ್ಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.
31 ವರ್ಷ ಯವಸ್ಸಿನ ಸುನೆಜಾ ದೆಹಲಿಯ ಮಯೂರ್ ವಿಹಾರ್ ನವರು. ಇಲ್ಲಿನ ಅಹಾಲ್ಕಾನ್ ಪಬ್ಲಿಕ್ ಶಾಲೆಯಲ್ಲಿ ವಿದ್ಯಾಭ್ಯಾಸ ಮುಗಿಸಿದ ಸುನೆಜಾ ಅವರಿಗೆ ಪೈಲೆಟ್ ಆಗಬೇಕೆಂಬುದು ಎಂದಿನ ಕನಸು.

2009 ರಲ್ಲಿ ಬೆಲ್ ಏರ್ ಇಂಟರ್ನ್ಯಾಶ್ನಲ್ ನಿಂದ ಲೈಸೆನ್ಸ್ ಪಡೆದು ತಮ್ಮಕನಸನ್ನು ಸುನೆಜಾ ನನಸಾಗಿಸಿಕೊಂಡಿದ್ದರು.
ಮೃದುಭಾಷಿ, ಸರಳ ವ್ಯಕ್ತಿತ್ವದ ಸುನೆಜಾ ಎಮಿರೇಟ್ಸ್ ನಲ್ಲಿ ತರಬೇತಿ ಪಡೆದು, ನಂತರ ಲಯನ್ ಏರ್ ಗೆ ಮಾರ್ಚ್ 2011 ರಲ್ಲಿ ಸೇರಿದ್ದರು. ಇಂದು ಬೆಳಿಗ್ಗೆ ಕೋ ಪೈಲೆಟ್ ಹಾರ್ವಿನೋ ಮತ್ತಿತರ ಆರು ಸಿಬ್ಬಂದಿಯೊಡನೆ ಕ್ಯಾ.ಸುನೆಜಾ ವಿಮಾನ ಚಾಲನೆ ಮಾಡುತ್ತಿದ್ದರು. ಆದರೆ ವಿಮಾನ ಟೇಕಾಫ್ ಅದ 13 ನಿಮಿಷಗಳಲ್ಲಿ ರಾಡರ್ ಸಂಪರ್ಕ ಕಳೆದುಕೊಂಡು, ಪತನಗೊಂಡಿತ್ತು.
ಇಂಡೋನೇಷ್ಯಾ ರಾಜಧಾನಿ ಜಕಾರ್ತಾ ವಿಮಾನ ನಿಲ್ದಾಣದಿಂದ ಬೆಳಗ್ಗೆ 6:20 ಕ್ಕೆ ಟೇಕಾಫ್ ಆದ ವಿಮಾನ 6:33 ರ ಸಮಯಕ್ಕೆ ಸಂಪರ್ಕ ಕಳೆದುಕೊಂಡಿತ್ತು. ಟೇಕಾಫ್ ಆದ 13 ನಿಮಿಷದ ನಂತರ ಸಂಪರ್ಕ ಕಳೆದುಕೊಂಡ ವಿಮಾನ ಸಮುದ್ರವೊಂದರಲ್ಲಿ ಬಿದ್ದಿದ್ದು ನಂತರ ತಿಳಿಯಿತು. ವಿಮಾನದಲ್ಲಿದ್ದ 189 ಜನರೂ ಮೃತರಾಗಿದ್ದಾರೆಂದು ಮೂಲಗಳು ತಿಳಿಸಿವೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications