Get Updates
Get notified of breaking news, exclusive insights, and must-see stories!

ರಾಹುಲ್ ನೇತೃತ್ವದಲ್ಲಿ ಸಂಸದ ಅನಂತ್ ವಿರುದ್ಧ ಪ್ರತಿಭಟನೆ

ನವದೆಹಲಿ, ಡಿಸೆಂಬರ್ 28 : ಭಾರತದ ಸಂವಿಧಾನಕ್ಕೆ ಅವಮಾನ ಮಾಡಿರುವ ಬಿಜೆಪಿ ಸಂಸದ ಕೂಡಲೆ ರಾಜೀನಾಮೆ ನೀಡಬೇಕು ಇಲ್ಲವೆ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಸಂಸದರು ರಾಹುಲ್ ಗಾಂಧಿ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸುತ್ತಿದ್ದಾರೆ.

ಭಾರತದ ಸಂವಿಧಾನವನ್ನೇ ಬದಲಿಸುತ್ತೇವೆಂದು ಹೇಳಿಕೆ ನೀಡಿ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಸಂವಿಧಾನಕ್ಕೆ ಅವಮಾನ ಮಾಡಿದ್ದಾರೆ. ಅವರು ಕೂಡಲೆ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಆಗ್ರಹಿಸುತ್ತಿದೆ.

Insult to Constitution : Protest by Congress against Anant Kumar Hegde

ಸಂಸತ್ತಿನ ಮಹಾತ್ಮಾ ಗಾಂಧಿ ಎದಿರು ಜಮಾಯಿಸಿದ್ದ ರಾಹುಲ್ ಗಾಂಧಿ, ಗುಲಾಮ್ ನಭಿ ಆಝಾದ್, ಮಲ್ಲಿಕಾರ್ಜುನ ಖರ್ಗೆ ಅವರು, ಸಂವಿಧಾನವನ್ನು ಕಾಪಾಡಿ ದೇಶವನ್ನು ಉಳಿಸಿ, ಸಂಸತ್ತಿಗೆ ಅವಮಾನ ಮಾಡಿದ ಸಚಿವರನ್ನು ವಜಾ ಮಾಡಿ ಮುಂತಾದ ಫಲಕಗಳನ್ನು ಹಿಡಿದು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು.

ಉತ್ತರ ಕನ್ನಡ ಲೋಕಸಭೆ ಕ್ಷೇತ್ರವನ್ನು ಪ್ರತಿನಿಧಿಸುವ, ಕೇಂದ್ರದ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮ ಸಚಿವರಾಗಿರುವ ಅನಂತ್ ಕುಮಾರ್ ಹೆಗಡೆ ಅವರು ತಮ್ಮ ಒಂದಿಲ್ಲೊಂದು ಹೇಳಿಕೆಯಿಂದ ಪೇಚಿಗೆ ಸಿಲುಕುತ್ತಿದ್ದಾರೆ, ವಿರೋಧಿಗಳನ್ನು ಕೆಣಕುತ್ತಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+