ನವದೆಹಲಿಯಲ್ಲಿ ಮೋದಿ ಉದ್ಘಾಟಿಸಿದ ನೇತಾಜಿ ಪ್ರತಿಮೆ ವಿಶೇಷತೆಗಳೇನು?
ನವದೆಹಲಿ, ಸೆಪ್ಟೆಂಬರ್ 8: ರಾಷ್ಟ್ರರಾಜಧಾನಿಯ ಇಂಡಿಯಾ ಗೇಟ್ನಲ್ಲಿ ಕೇಂದ್ರ ಸರ್ಕಾರದ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ಗುರುವಾರ ಸಂಜೆ 7 ಗಂಟೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಉದ್ಘಾಟಿಸಿದರು.
ಈ ವೇಳೆ ಪುನರಾಭಿವೃದ್ಧಿ ಯೋಜನೆಯ ಭಾಗವಾಗಿ, ನೇತಾಜಿ ಸುಭಾಷ್ ಚಂದ್ರ ಬೋಸ್ 28 ಅಡಿ ಎತ್ತರದ ಪ್ರತಿಮೆಯನ್ನು ಇಂಡಿಯಾ ಗೇಟ್ನಲ್ಲಿ ಮೇಲಾವರಣದ ಅಡಿಯಲ್ಲಿ ಸ್ಥಾಪಿಸಲಾಗಿದ್ದು, ಅದನ್ನು ಪ್ರಧಾನಿ ಅನಾವರಣಗೊಳಿಸಿದರು. 280 ಮೆಟ್ರಿಕ್ ಟನ್ ತೂಕದ ಏಕಶಿಲೆಯ ಗ್ರಾನೈಟ್ ಬ್ಲಾಕ್ನಿಂದ ನೇತಾಜಿ ಸುಭಾಷ್ ಅವರ ಭವ್ಯವಾದ ಪ್ರತಿಮೆಯನ್ನು ಕೆತ್ತಲಾಗಿದೆ.
ಈ ಶಿಲ್ಪಿಗಳ ತಂಡವು 26,000 ಮಾನವ-ಗಂಟೆಗಳ ಸಮಯವನ್ನು ತೆಗೆದುಕೊಂಡು ಅದ್ಭುತ ಕಲಾ ಪ್ರತಿಮೆಯನ್ನು ಕೆತ್ತಿದ್ದಾರೆ. ನವದೆಹಲಿಯ ಇಂಡಿಯಾ ಗೇಟ್ನಲ್ಲಿ ಪ್ರಧಾನಿ ಮೋದಿ ಅನಾವರಣಗೊಳಿಸಿದ ನೇತಾಜಿ ಪ್ರತಿಮೆಯು 65 ಮೆಟ್ರಿಕ್ ಟನ್ ತೂಕವನ್ನು ಹೊಂದಿದೆ. ಅದೇ ಪ್ರತಿಮೆಗೆ ಸಂಬಂಧಿಸಿದ ಕೆಲವು ಆಸಕ್ತಿದಾಯಕ ವಿಷಯಗಳನ್ನು ತಿಳಿದುಕೊಳ್ಳೋಣ.

ಇಂಡಿಯಾ ಗೇಟ್ನಲ್ಲಿರುವ ನೇತಾಜಿ ಪ್ರತಿಮೆ ವಿಶೇಷತೆಗಳೇನು?
* ತೆಲಂಗಾಣದ ಖಮ್ಮಮ್ನಿಂದ ನವದೆಹಲಿಗೆ ದೈತ್ಯ ಗ್ರಾನೈಟ್ ಕಲ್ಲನ್ನು ಸಾಗಿಸುವುದಕ್ಕಾಗಿ 140 ಚಕ್ರಗಳನ್ನು ಹೊಂದಿರುವ 100 ಅಡಿಯ ಟ್ರಕ್ ಅನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾಗಿತ್ತು. ಅದೇ ಟ್ರಕ್ ನಲ್ಲಿ 1665 ಕಿ. ಮೀಟರ್ ದೂರದವರೆಗೆ ಕಲ್ಲನ್ನು ಸಾಗಿಸಲಾಗಿತ್ತು.
* ಈ ಪ್ರತಿಮೆಯನ್ನು ಸಂಪೂರ್ಣ "ಸಾಂಪ್ರದಾಯಿಕ ತಂತ್ರಗಳು ಮತ್ತು ಆಧುನಿಕ ಉಪಕರಣಗಳನ್ನು ಬಳಸಿಕೊಂಡು ಕೈಯಿಂದಲೇ ಕೆತ್ತಲಾಗಿದೆ.
* ಮೈಸೂರು ಮೂಲದ ಅರುಣ್ ಯೋಗಿರಾಜ್ ನೇತೃತ್ವದಲ್ಲಿ ಶಿಲ್ಪಿಗಳ ತಂಡವು ಈ ಪ್ರತಿಮೆಯನ್ನು ಕೆತ್ತಿದೆ.
* ಇದೇ ವರ್ಷದ ಆರಂಭದಲ್ಲಿ ನೇತಾಜಿ ಸುಭಾಷ್ ಚಂದ್ರ ಭೋಸ್ 125ನೇ ಜನ್ಮದಿನದ ಅಂಗವಾಗಿ ಜನವರಿ 23ರ ಪರಾಕ್ರಮ್ ದಿವಸ್ ಅನ್ನು ಆಚರಿಸಲಾಗುತ್ತದೆ. ಅದೇ ದಿನ ಪ್ರಧಾನಿ ಮೋದಿ, ನೇತಾಜಿಯವರ ಹೊಲೊಗ್ರಾಮ್ ಪ್ರತಿಮೆಯನ್ನು ಅನಾವರಣಗೊಳಿಸಿದ ಸ್ಥಳದಲ್ಲಿಯೇ ಪ್ರತಿಮೆಯನ್ನು ಸ್ಥಾಪಿಸಲಾಗುತ್ತದೆ ಎಂದು ಹೇಳಿದರು.
* ನೇತಾಜಿಯ "ಋಣ"ದ ಸಂಕೇತವಾಗಿ ಇಂಡಿಯಾ ಗೇಟ್ನಲ್ಲಿ ಗ್ರಾನೈಟ್ನಿಂದ ಮಾಡಿದ ಭವ್ಯವಾದ ಪ್ರತಿಮೆಯನ್ನು ಸ್ಥಾಪಿಸಲಾಗುವುದು ಎಂದು ಪ್ರಧಾನಿ ಜನವರಿ 21ರಂದು ಭರವಸೆ ನೀಡಿದ್ದರು.
* ನೇತಾಜಿ ಪ್ರತಿಮೆಯ ಅನಾವರಣಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಸಾಂಪ್ರದಾಯಿಕ ಮಣಿಪುರಿ ಶಂಖ್ ವಾದಯಂ ಮತ್ತು ಕೇರಳದ ಸಾಂಪ್ರದಾಯಿಕ ಪಂಚ ವಾದಯಂ ಮತ್ತು ಚಂದದೊಂದಿಗೆ ಸ್ವಾಗತಿಸಲಾಗಿತ್ತು.
* ಈಗ ಅನಾವರಣಗೊಂಡ ನೇತಾಜಿಯವರ ಪ್ರತಿಮೆಯು ಐಎನ್ಎ ಸಾಂಪ್ರದಾಯಿಕ ಗೀತೆಯಾದ ಕದಮ್ ಕದಮ್ ಬಧಯೇಜಾದ ಸದ್ದನ್ನು ಹೊಂದಿರುತ್ತದೆ.
* ನೇತಾಜಿ ಸುಭಾಷ್ ಚಂದ್ರ ಭೋಸ್ ಜೀವನದ ಕುರಿತು ವಿಶೇಷವಾಗಿ ರಚಿಸಲಾಗಿರುವ 10 ನಿಮಿಷಗಳ ಡ್ರೋನ್ ಪ್ರದರ್ಶನವನ್ನು ಇಂಡಿಯಾ ಗೇಟ್ನಲ್ಲಿ ಸೆಪ್ಟೆಂಬರ್ 9, 10 ಮತ್ತು 11ರಂದು ರಾತ್ರಿ 8 ಗಂಟೆಗೆ ಪ್ರದರ್ಶಿಸಲಾಗುತ್ತದೆ. ಇದರ ಜೊತೆಗೆ ಇತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಸಾಂಸ್ಕೃತಿಕ ಉತ್ಸವ ಮತ್ತು ಡ್ರೋನ್ ಪ್ರದರ್ಶನ ಎರಡಕ್ಕೂ ಸಾರ್ವಜನಿಕರಿಗೆ ಉಚಿತ ಪ್ರವೇಶ ಇರುತ್ತದೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications