ಅಂತಾರಾಷ್ಟ್ರೀಯ ಯೋಗ ದಿನ LIVE: ದೇಶಾದ್ಯಂತ ಯೋಗ ಹಬ್ಬದ ಸಂಭ್ರಮ
ನವದೆಹಲಿ, ಜೂನ್ 21: ಐದನೇ ಅಂತಾರಾಷ್ಟ್ರೀಯ ಯೋಗದಿನದ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ದೇಶದಾದ್ಯಂತ ಯೋಗ ಪ್ರದರ್ಶನ ಮಾಡುವ ಮೂಲಕ ಯೋಗದಿನ ಆಚರಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಿದರೆ, ಗೃಹಸಚಿವ ಅಮಿತ್ ಶಾ, ಹರ್ಯಾಣದ ರೋಹ್ಟಕ್ ನಲ್ಲಿ ಯೋಗದಿನದ ಕಾರ್ಯಕ್ರಮದಲ್ಲಿ ಭಾಗಿಯಾದರು.

2014 ರ ಸೆಪ್ಟೆಂಬರ್ 27 ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯೋಗ ದಿನ ಆಚರಿಸುವ ಪ್ರಸ್ತಾಪವನ್ನಿಟ್ಟಿದ್ದರು. ಅದಕ್ಕೆ ಒಪ್ಪಿಗೆ ಸೂಚಿಸಿದ್ದ ವಿಶ್ವಸಂಸ್ಥೆ, ಜೂನ್ 21 ರಂದು ಯೋಗ ದಿನ ಆಚರಿಸಲು ಒಪ್ಪಿಗೆ ಸೂಚಿಸಿತ್ತು. 2015 ರ ಜೂನ್ 21 ರಂದು ಮೊದಲ ಯೋಗ ದಿನವನ್ನು ಆಚರಿಸಲಾಗಿತ್ತು.
ಈ ವರ್ಷದ ಯೋಗ ದಿನದ ಘೋಷವಾಕ್ಯ, 'ಹೃದಯದ ಆರೋಗ್ಯಕ್ಕಾಗಿ ಯೋಗ' ಎಂಬುದು. ಯೋಗದಿನದ ಹಿನ್ನೆಲೆಯಲ್ಲಿ ದೇಶದಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಕರ್ನಾಟಕ

ವಿಶ್ವ ಯೋಗದಿನದ ಅಂಗವಾಗಿ ಬೆಂಗಳೂರಿನ ಬಿಜೆಪಿ ಕಾರ್ಯಾಲಯದಲ್ಲಿ ಯೋಗಾಭ್ಯಾಸ ಮಾಡಲಾಯ್ತು. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಗಣ್ಯರು ಯೋಗಾಭ್ಯಾಸ ನಡೆಸಿದರು.
ಕೇರಳ
ಕೇರಳದ ತಿರುವನಂತಪುರಂನಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರು ಯೋಗ ದಿನಾಚರಣೆ ಆಚರಿಸಿದರು.

ದ್ವಾರಕೆಯಲ್ಲಿ ಅಂತಾರಾಷ್ಟ್ರೀಯ ಯೋಗದಿನದ ನೇತೃತ್ವದ ವಹಿಸಿದ್ದ ಕೇಂದ್ರ ಹಿಳಾ ಮತ್ತು ಮಕ್ಕಳ ಖಾತೆ ಸಚಿವೆ ಸ್ಮೃತಿ ಇರಾನಿ(ಚಿತ್ರ ಕೃಪೆ: ಎಎನ್ ಐ)

ಯೋಗಜ್ಞಾನ ಜಗತ್ತಿನ ಕಲ್ಯಾಣಕ್ಕಾಗಿ. ಯೋಗಕ್ಕೆ ಜಾಗತಿಕ ಘನತೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ನಾನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ- ಅಮಿತ್ ಶಾ, ಗೃಹ ಸಚಿವ
ಹರ್ಯಾಣದ ರೋಹ್ಟಕ್ ನಲ್ಲಿ ಗೃಹ ಸಚಿವ ಅಮಿತ್ ಶಾ ಯೋಗ ದಿನಾಚರಣೆಯ ನೇತೃತ್ವ ವಹಿಸಿ ಮಾತನಾಡಿದರು.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಯೋಗ ದಿನ ಆಚರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, "ಯೋಗ ಎಂಬುದು ಕೇವಲ ಒಂದು ಕಾರ್ಯಕ್ರಮವಲ್ಲ, ಅದು ನಮ್ಮ ಬದುಕಿನ ಅವಿಭಾಜ್ಯ ಅಂಗ" ಎಂದರು.
ದೆಹಲಿಯ ರಾಜಪಥದಲ್ಲಿ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ಪ್ರಕಾಶ್ ಜಾವಡೇಕರ್ ಯೋಗ ಪ್ರದರ್ಶಿಸಿದರು.
ಮಹಾರಾಷ್ಟ್ರದ ನಾಗ್ಪುರದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅಂತಾರಾಷ್ಟ್ರೀಯ ಯೋಗ ದಿನದ ನೇತೃತ್ವ ವಹಿಸಿದ್ದರು.
ವಿಶ್ವಸಂಸ್ಥೆಯ ಭಾರತೀಯ ರಾಯಭಾರಿಯಾಗಿರುವ ಎಸ್ ಅಕ್ಬರುದ್ದಿನ್ ನ್ಯೂಯಾರ್ಕ್ ನಲ್ಲಿ ಯೋಗಾಭ್ಯಾಸ ನಡೆಸಿ, ಅಂತಾರಾಷ್ಟ್ರೀಯ ಯೋಗ ದಿನದ ಶುಭಾಶಯ ಕೋರಿದರು.
ಯೋಗದಿನಕ್ಕೆ ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದಗಳು. ಜಗತ್ತಿನ ವಿವಿಧ ಭಾಗಗಳಲ್ಲಿ ಇಂದು ಜನರು ಯೋಗಾಚರಣೆಗಾಗಿ ಸೇರಿದ್ದಾರೆ. ಅದು ಹೆಮ್ಮೆಯ ವಿಷಯ- ನರೇಂದ್ರ ಮೋದಿ
"ಯೋಗ ನಮ್ಮೆಲ್ಲರ ಆರೋಗ್ಯಕ್ಕೆ ಅಗತ್ಯ ಎಂಬುದನ್ನು ನಾವು ಬಲ್ಲೆವು. ಅದು ನಮ್ಮ ಸಂಸ್ಕೃತಿಯ ಭಾಗವಾಗಿದೆ. ಆದರೆ ಇದೀಗ ಅದನ್ನು ಮುಂದಿನ ಹಂತಕ್ಕೆ ಕೊಂಡೊಯ್ಯುವ ಜವಾಬ್ದಾರಿ ನಮ್ಮ ಮೇಲಿದೆ" - ನರೇಂದ್ರ ಮೋದಿ
ಅರುಣಾಚಲ ಪ್ರದೇಶ
ಅರುಣಾಚಲ ಪ್ರದೇಶದಲ್ಲಿ ಇಂಡೋ- ಟಿಬೇಟಿಯನ್ ಬಾರ್ಡರ್ ಪೊಲೀಸ್ ನ 9 ನೇ ಬೆಟಾಲಿಯನ್ ಸಿಬ್ಬಂದಿ ದಿಗುರು ನದಿಯಲ್ಲಿ ಯೋಗ ಆಚರಿಸಿದರು.
ಈ ಬಾರಿ ಯೋಗದ ಉದ್ದೇಶ ಶಾಂತಿ, ಸದ್ಭಾವ ಮತ್ತು ಸಮೃದ್ಧಿಗಾಗಿ ಆಗಿರಲಿ. ಯೋಗ ಪ್ರತಿಯೊಬ್ಬರ ಬದುಕಿನ ಜೀವನ ವಿಧಾನವಾಗಲಿ- ನರೇಂದ್ರ ಮೋದಿ
ಮಹಾರಾಷ್ಟ್ರ
ಮಹಾರಾಷ್ಟ್ರದ ನಂದೇಡ್ ನಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಯೋಗಗುರು ಬಾಬಾ ರಾಮದೇವ್ ಅವರು ಯೋಗ ಪ್ರದರ್ಶನ ಮಾಡಿದರು.
ನೇಪಾಳ
ನೇಪಾಳದ ಜಾನಕಪುರದ ಜಾನಕಿ ದೇವಾಲಯದ ಆವರಣದಲ್ಲಿ ಭಾರತೀಯ ರಾಯಭಾರ ಕಚೇರಿ ಆಯೋಜಿಸಿದ್ದ ಯೋಗ ದಿನದಲ್ಲಿ ನೂರಾರು ಜನ ಪಾಲ್ಗೊಂಡು ಯೋಗ ಪ್ರದರ್ಶನ ಮಾಡಿದರು.
ಸಿಕ್ಕಿಂ
ಸಿಕ್ಕಿಂ ನಲ್ಲಿ ಐಟಿಬಿಪಿ ಸಿಬ್ಬಂದಿ ಒಬಿ ದೊರ್ಜಿಲಾ ಬಳಿ 19000 ಅಡಿ ಎತ್ತರದಲ್ಲಿ, -15 ಡಿಗ್ರಿ ಸೆಲ್ಷಿಯಸ್ ತಾಪಮಾನದಲ್ಲಿ ಯೋಗ ಪ್ರದರ್ಶನ ಮಾಡಿದರು.
ಜಾರ್ಖಂಡ್

ಆಧುನಿಕ ಯೋಗದ ಪಯಣವನ್ನು ನಗರದಿಂದ ಹಳ್ಳಿಗೆ, ಬುಡಕಟ್ಟು ಪ್ರದೇಶಕ್ಕೆ ತೆಗೆದುಕೊಂಡು ಹೋಗಬೇಕಿದೆ. ಯೋಗವನ್ನು ಬಡವರು ಮತ್ತು ಬುಡಕಟ್ಟು ಜನರ ಬದುಕಿನ ಅವಿಭಾಜ್ಯ ಅಂಗವನ್ನಾಗಿ ಮಾಡಬೇಕಿದೆ. ಏಕೆಂದರೆ ಅನಾರೋಗ್ಯದಿಂದ ಹೆಚ್ಚು ಬಳಲುವವರು ಬಡವರು- ನರೇಂದ್ರ ಮೋದಿ
ಜಾರ್ಖಂಡ್
ಯೋಗಕ್ಕೆ ಜಾತಿ, ಮತ, ಬಣ್ಣ, ಲಿಂಗ, ಬಡವ-ಬಲ್ಲಿದ ಎಂಬ ಯಾವ ಬೇಧವಿಲ್ಲ. ಅದು ಎಲ್ಲ ಸರಹದ್ದುಗಳನ್ನು ಮೀರಿದ್ದು- ನರೇಂದ್ರ ಮೋದಿ
Illness(ಅನಾರೋಗ್ಯ) ನಿಂದ wellness(ಆರೋಗ್ಯ) ನೆಡೆಗೆ ನಮ್ಮನ್ನು ಒಯ್ಯಲು ಯೋಗ ಸಹಾಯ ಮಾಡುತ್ತದೆ- ನರೇಂದ್ರ ಮೋದಿ
ಜಾರ್ಖಂಡ್
ಎಲ್ಲರಿಗೂ ಯೋಗದಿನದ ಶುಭಾಶಯಗಳು. ಯೋಗವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯಗೊಳಿಸಲು ನಮ್ಮ ಮಾಧ್ಯಮ ಮಿತ್ರರು, ಸಾಮಾಜಿಕ ಮಾಧ್ಯಮದ ಮಿತ್ರರು ವಹಿಸಿರುವ ಪಾತ್ರ ಅತ್ಯಂತ ಮಹತ್ವದ್ದು. ಅವರಿಗೆ ನನ್ನ ಕೃತಜ್ಞತೆಗಳು-ನರೇಂದ್ರ ಮೋದಿ, ಪ್ರಧಾನಿ
More From
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್













Click it and Unblock the Notifications