ಪಿ ಚಿದಂಬರಂ ವಶಕ್ಕೆ ಪಡೆಯಲು 'ಇಡಿ' ಅನುಮತಿ ಕೊಟ್ಟ ಕೋರ್ಟ್
ನವದೆಹಲಿ, ಅಕ್ಟೋಬರ್ 15: ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ತಿಹಾರ್ ಜೈಲಿನಲ್ಲಿರುವ ಕೇಂದ್ರದ ಮಾಜಿ ಸಚಿವ ಪಿ ಚಿದಂಬರಂ ಅವರಿಗೆ ದೆಹಲಿ ವಿಶೇಷ ನ್ಯಾಯಾಲಯದಿಂದ ಮಂಗಳವಾರದದು ಕಹಿ ಸುದ್ದಿ ಸಿಕ್ಕಿದೆ.
ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸಿಬಿಐ ಕಸ್ಟಡಿಯಲ್ಲಿರುವ ಕೇಂದ್ರದ ಮಾಜಿ ವಿತ್ತ ಸಚಿವ 74 ವರ್ಷ ವಯಸ್ಸಿನ ಪಿ ಚಿದಂಬರಂ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಲು ಜಾರಿ ನಿರ್ದೇಶನಾಲಯವು ಅರ್ಜಿ ಹಾಕಿತ್ತು. ಇಡಿ ಅರ್ಜಿಗೆ ದೆಹಲಿ ಕೋರ್ಟ್ ಅಸ್ತು ಎಂದಿದೆ.
ಹೀಗಾಗಿ, ಪಿ ಚಿದಂಬರಂ ಅವರನ್ನು ಬುಧವಾರ(ಅಕ್ಟೋಬರ್ 16) ರಂದು ಬೆಳಗ್ಗೆ ಬಂಧಿಸಿ, ಕೋರ್ಟ್ ಮುಂದೆ ಹಾಜರುಪಡಿಸಿ,ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲು ಜಾರಿನಿರ್ದೇಶನಾಲಯವು ಮುಂದಾಗಿದೆ.

ಇದಕ್ಕೂ ಮುನ್ನ ಈ ಹಿಂದಿನ ವಾದ ಪ್ರತಿವಾದ ವೇಳೆ, ತಿಹಾರ್ ಜೈಲು, ಚಿದಂಬರಂ ಇರುವ ಸೆಲ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ, ಚಿದಂಬರಂ ಪರ ವಕೀಲ ಅಭಿಶೇಕ್ ಮನು ಸಿಂಘ್ವಿ ಅವರು ವಾದ ಮಂಡಿಸಿದರು. ಚಿದಂಬರಂ ಅವರಿರುವ ಸೆಲ್ ನಲ್ಲಿ ಕೂರಲು ಚೇರಿಲ್ಲ. ತಲೆಗೆ ದಿಂಬಿಲ್ಲ ನನ್ನ ಕಕ್ಷಿದಾರರಿಗೆ 74 ವರ್ಷ ವಯಸ್ಸಾಗಿದೆ ಎಂದು ವಾದಿಸಿದ್ದರು.
ಆಗಸ್ಟ್ 21ರಂದು ದೆಹಲಿ ನಿವಾಸದಲ್ಲಿದ್ದ ಚಿದಂಬರಂರನ್ನು ಸಿಬಿಐ ಅಧಿಕಾರಿಗಳು ತಮ್ಮ ವಶಕ್ಕೆ ತೆಗೆದುಕೊಂಡಿದ್ದು, 11 ದಿನಗಳ ಕಾಲ ಕಸ್ಟಡಿಯಲ್ಲಿಟ್ಟುಕೊಂಡು ವಿಚಾರಣೆ ನಡೆಸಿದ್ದಾರೆ. ಅವರಿಗೆ ಭದ್ರತೆ ಬೇಕಿದೆ, ತಿಹಾರ್ ಜೈಲಿಗೆ ಕಳಿಸದಿದ್ದರೆ ಗೃಹಬಂಧನ ವಿಧಿಸಿ' ಎಂದು ಕಪಿಲ್ ಸಿಬಾಲ್ ಈ ಮುಂಚೆ ವಾದಿಸಿದ್ದರು. "ಆದರೆ ಗೃಹ ಬಂಧನವನ್ನು ರಾಜಕೀಯ ಕೈದಿಗಳಿಗೆ ಬಳಸುವ ವಿಧಾನವಾಗಿದೆ, ಇದು ಭ್ರಷ್ಟಾಚಾರ ಪ್ರಕರಣವಾಗಿದ್ದು, ಚಿದಂಬರಂ ಜಾಮೀನಿಗಾಗಿ ಅರ್ಜಿ ಸಲ್ಲಿಸಬಹುದು' ಎಂದು ಸುಪ್ರೀಂಕೋರ್ಟ್ ಸೂಚಿಸಿತ್ತು. ಅದರಂತೆ, ಚಿದಂಬರಂ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆದು, ಅರ್ಜಿ ತಿರಸ್ಕಾರಗೊಂಡಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications