ತಿಹಾರ್ ಜೈಲಿನಲ್ಲಿದ್ದ ಪಿ ಚಿದಂಬರಂ ಬಂಧಿಸಿದ ಜಾರಿ ನಿರ್ದೇಶನಾಲಯ
ನವದೆಹಲಿ, ಅಕ್ಟೋಬರ್ 16: ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ತಿಹಾರ್ ಜೈಲಿನಲ್ಲಿರುವ ಕೇಂದ್ರದ ಮಾಜಿ ಸಚಿವ ಪಿ ಚಿದಂಬರಂ ಅವರನ್ನು ವಿಚಾರಣೆ ಬಳಿಕ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.
ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸಿಬಿಐ ಕಸ್ಟಡಿಯಲ್ಲಿರುವ ಕೇಂದ್ರದ ಮಾಜಿ ವಿತ್ತ ಸಚಿವ 74 ವರ್ಷ ವಯಸ್ಸಿನ ಪಿ ಚಿದಂಬರಂ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಲು ಜಾರಿ ನಿರ್ದೇಶನಾಲಯಕ್ಕೆ ದೆಹಲಿ ಕೋರ್ಟ್ ಮಂಗಳವಾರ(ಅಕ್ಟೋಬರ್ 15) ದಂದು ಅನುಮತಿ ನೀಡಿತ್ತು.
ಹೀಗಾಗಿ, ಪಿ ಚಿದಂಬರಂ ಅವರನ್ನು ಬುಧವಾರ(ಅಕ್ಟೋಬರ್ 16) ರಂದು ಬೆಳಗ್ಗೆ ಬಂಧಿಸಿ, ಕೋರ್ಟ್ ಮುಂದೆ ಹಾಜರುಪಡಿಸಿ ,ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲು ಜಾರಿನಿರ್ದೇಶನಾಲಯವು ಮುಂದಾಗುವ ಪ್ರಕ್ರಿಯೆ ನಿರೀಕ್ಷಿತವಾಗಿದೆ. ಇಂದು ಬೆಳಗ್ಗೆ ಪಿ ಚಿದಂಬರಂರನ್ನು ಜೈಲಿನಲ್ಲಿ ಭೇಟಿ ಹೊರ ಬಂದ ಅವರ ಪುತ್ರ ಕಾರ್ತಿ ಸುದ್ದಿಗಾರರೊಂದಿಗೆ ಮಾತನಾಡಿ, ಇದೆಲ್ಲ ಬೋಗಸ್ ತನಿಖೆ, ಬಂಧನ, ವಿಚಾರಣೆ ಎಲ್ಲವೂ ಅನವಶ್ಯಕ ಎಂದಿದ್ದಾರೆ.

ಇದಕ್ಕೂ ಮುನ್ನ ಈ ಹಿಂದಿನ ವಾದ ಪ್ರತಿವಾದ ವೇಳೆ, ತಿಹಾರ್ ಜೈಲು, ಚಿದಂಬರಂ ಇರುವ ಸೆಲ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ, ಚಿದಂಬರಂ ಪರ ವಕೀಲ ಅಭಿಶೇಕ್ ಮನು ಸಿಂಘ್ವಿ ಅವರು ವಾದ ಮಂಡಿಸಿದರು. ಚಿದಂಬರಂ ಅವರಿರುವ ಸೆಲ್ ನಲ್ಲಿ ಕೂರಲು ಚೇರಿಲ್ಲ. ತಲೆಗೆ ದಿಂಬಿಲ್ಲ ನನ್ನ ಕಕ್ಷಿದಾರರಿಗೆ 74 ವರ್ಷ ವಯಸ್ಸಾಗಿದೆ ಎಂದು ವಾದಿಸಿದ್ದರು.
Karti Chidambaram after meeting his father P Chidambaram at Delhi's Tihar Jail: I came to meet my father. He is in good spirits. Whatever these procedural games are being played are for political theatrics. This is a bogus investigation. pic.twitter.com/2iq5sFklKB
— ANI (@ANI) October 16, 2019
ಆಗಸ್ಟ್ 21ರಂದು ದೆಹಲಿ ನಿವಾಸದಲ್ಲಿದ್ದ ಚಿದಂಬರಂರನ್ನು ಸಿಬಿಐ ಅಧಿಕಾರಿಗಳು ತಮ್ಮ ವಶಕ್ಕೆ ತೆಗೆದುಕೊಂಡಿದ್ದು, 11 ದಿನಗಳ ಕಾಲ ಕಸ್ಟಡಿಯಲ್ಲಿಟ್ಟುಕೊಂಡು ವಿಚಾರಣೆ ನಡೆಸಿದ್ದಾರೆ. ಅವರಿಗೆ ಭದ್ರತೆ ಬೇಕಿದೆ, ತಿಹಾರ್ ಜೈಲಿಗೆ ಕಳಿಸದಿದ್ದರೆ ಗೃಹಬಂಧನ ವಿಧಿಸಿ' ಎಂದು ಕಪಿಲ್ ಸಿಬಾಲ್ ಈ ಮುಂಚೆ ವಾದಿಸಿದ್ದರು. "ಆದರೆ ಗೃಹ ಬಂಧನವನ್ನು ರಾಜಕೀಯ ಕೈದಿಗಳಿಗೆ ಬಳಸುವ ವಿಧಾನವಾಗಿದೆ, ಇದು ಭ್ರಷ್ಟಾಚಾರ ಪ್ರಕರಣವಾಗಿದ್ದು, ಚಿದಂಬರಂ ಜಾಮೀನಿಗಾಗಿ ಅರ್ಜಿ ಸಲ್ಲಿಸಬಹುದು' ಎಂದು ಸುಪ್ರೀಂಕೋರ್ಟ್ ಸೂಚಿಸಿತ್ತು. ಅದರಂತೆ, ಚಿದಂಬರಂ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆದು, ಅರ್ಜಿ ತಿರಸ್ಕಾರಗೊಂಡಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications