ಐಎನ್ಎಕ್ಸ್ ಮೀಡಿಯಾ ಲಂಚ ಹಗರಣ : ಇಡಿ ಮುಂದೆ ಪಿ ಚಿದಂಬರಂ ಹಾಜರು
ನವದೆಹಲಿ, ಡಿಸೆಂಬರ್ 19 : ಐಎನ್ಎಕ್ಸ್ ಮೀಡಿಯಾ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ವಿತ್ತ ಸಚಿವ, ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರಿಗೆ ಹಾಜರಾಗಲು ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.
ಈಗಾಗಲೆ ಅವರು ಜಾರಿ ನಿರ್ದೇಶನಾಲಯದ ಕೇಂದ್ರ ಕಚೇರಿಗೆ ಆಗಮಿಸಿದ್ದು, ಈ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಎದುರಿಸಲಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿ ಚಿದಂಬರಂ ಅವರ ಮಗ ಕಾರ್ತಿ ಚಿದಂಬರಂ ಅವರನ್ನು ಫೆಬ್ರವರಿಯಲ್ಲಿ ಚೆನ್ನೈ ಏರ್ಪೋರ್ಟ್ ನಲ್ಲಿ ಸಿಬಿಐ ಬಂಧಿಸಿತ್ತು.

ಐಎನ್ಎಕ್ಸ್ ಮೀಡಿಯಾ ಮಾಲಿಕರಾದ, ಈಗ ಜೈಲಿನಲ್ಲಿರುವ ಪೀಟರ್ ಮತ್ತು ಇಂದ್ರಾಣಿಯವರಿಂದ 10 ಲಕ್ಷ ರುಪಾಯಿ ಲಂಚ ಪಡೆದ ಆರೋಪ ಕಾರ್ತಿ ಮೇಲಿದೆ. ಕೋಟ್ಯಂತರ ರುಪಾಯಿ ತೆರಿಗೆ ವಂಚನೆ ಮಾಡಿದ ಪ್ರಕರಣದಿಂದ ತಮ್ಮ ಪ್ರಭಾವ ಬಳಸಿ ಪಾರು ಮಾಡಲು ಪೀಟರ್ ಮತ್ತು ಇಂದ್ರಾಣಿ ಅವರು ಕಾರ್ತಿ ಚಿದಂಬರಂ ಅವರನ್ನು ಬಳಸಿಕೊಂಡಿದ್ದರು ಎಂಬ ಆರೋಪವೂ ಇದೆ.
2007ರಲ್ಲಿ ವಿದೇಶಿ ಹೂಡಿಕೆ ಉತ್ತೇಜನಾ ಮಂಡಳಿ (Foreign Investment Promotion Board)ಯಿಂದ 4.62 ಕೋಟಿ ರುಪಾಯಿ ಹೂಡಿಕೆ ಮಾಡಲು ಅನುಮೋದನೆ ಸಿಕ್ಕಿತ್ತು. ಆದರೆ ಮಾರಿಷಸ್ ನ ಎರಡು ಕಂಪನಿಗಳಿಂದ ಪೀಟರ್ ಮತ್ತು ಇಂದ್ರಾಣಿ ಒಡೆತನದ ಕಂಪನಿ ಐಎನ್ಎಕ್ಸ್ ಮೀಡಿಯಾ ಪಡೆದದ್ದು 305 ಕೋಟಿ ರುಪಾಯಿಗಳು.
ಇದರ ವಿರುದ್ಧ ಕಂದಾಯ ಇಲಾಖೆ ವಿಚಾರಣೆಗೆ ಆದೇಶಿಸಿತ್ತು. ಈ ವಿಚಾರಣೆಯನ್ನು ತಪ್ಪಿಸಲು ಕಾರ್ತಿ ಅವರು ತಮ್ಮ ಕಂಪನಿಯ ಮೂಲಕ ಐಎನ್ಎಕ್ಸ್ ಮೀಡಿಯಾ ಕಂಪನಿಯಿಂದ 10 ಲಕ್ಷ ರುಪಾಯಿ ಕಮಿಷನ್ ಪಡೆದಿದ್ದರು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications