106 ದಿನದ ಬಳಿಕ ತಿಹಾರ್ ಜೈಲಿನಿಂದ ಹೊರಬಂದ ಚಿದಂಬರಂ
ನವದೆಹಲಿ, ಡಿಸೆಂಬರ್ 4: ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ 106 ದಿನ ತಿಹಾರ್ ಜೈಲಿನಲ್ಲಿ ಕಳೆದ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ, ಬುಧವಾರ ಸಂಜೆ ಬಿಡುಗಡೆಯಾದರು.
'106 ದಿನ ಜೈಲಿನಲ್ಲಿ ಕಳೆದ ಬಳಿಕವೂ ಒಂದೇ ಒಂದು ಆರೋಪವನ್ನೂ ನನ್ನ ಮೇಲೆ ನಿಗದಿ ಮಾಡಲು ಸಾಧ್ಯವಾಗಿಲ್ಲ' ಎಂದು ಜೈಲಿನಿಂದ ಹೊರಬಂದ ಬಳಿಕ ಚಿದಂಬರಂ ಹೇಳಿದರು.
ಆದರೆ ಅವರು ಪ್ರಕರಣದ ಕುರಿತು ಯಾವುದೇ ಹೇಳಿಕೆ ನೀಡಲು ನಿರಾಕರಿಸಿದರು. ಚಿದಂಬರಂ ಅವರಿಗೆ ಜಾಮೀನು ನೀಡುವ ವೇಳೆ ಸುಪ್ರೀಂಕೋರ್ಟ್, ಪ್ರಕರಣದ ಬಗ್ಗೆ ಯಾವುದೇ ಪತ್ರಿಕಾ ಸಂದರ್ಶನ ಅಥವಾ ಸಾರ್ವಜನಿಕ ಹೇಳಿಕೆ ನೀಡಬಾರದು ಎಂದು ಷರತ್ತು ವಿಧಿಸಿದೆ.
'ಈ ಪ್ರಕರಣದ ಕುರಿತು ನಾನು ಮಾತನಾಡುವಂತಿಲ್ಲ. ನಾನು ನ್ಯಾಯಾಲಯದ ಆದೇಶವನ್ನು ಪಾಲಿಸುತ್ತೇನೆ. ಆದರೆ 106 ದಿನಗಳ ಕಾಲ ಜೈಲಿನಲ್ಲಿ ಇರಿಸಿದರೂ ನನ್ನ ವಿರುದ್ಧ ಒಂದೇ ಒಂದು ಆರೋಪ ನಿಗದಿಯಾಗಿಲ್ಲ' ಎಂದರು.

'ನಾಳೆ ಸುದ್ದಿಗೋಷ್ಠಿ ನಡೆಸಿ ಮಾತನಾಡಲಿದ್ದೇನೆ. 106 ದಿನಗಳ ಬಳಿಕ ಹೊರಬಂದು ಸ್ವಾತಂತ್ರ್ಯದ ಉಸಿರಾಡುತ್ತಿರುವುದಕ್ಕೆ ಖುಷಿಯಾಗುತ್ತಿದೆ' ಎಂದು ಹೇಳಿದರು.
ಜೈಲಿನಿಂದ ಹೊರಬಂದ ಚಿದಂಬರಂ ಅವರನ್ನು ಸ್ವಾಗತಿಸಲು ನೂರಾರು ಕಾಂಗ್ರೆಸ್ ಕಾರ್ಯಕರ್ತರು ತಿಹಾರ್ ಜೈಲಿನ ಹೊರಭಾಗದಲ್ಲಿ ಸೇರಿದ್ದರು. ಇದರಿಂದ ಜೈಲಿನ ಸುತ್ತಮುತ್ತ ಭಾರಿ ಸಂಚಾರ ದಟ್ಟಣೆ ಉಂಟಾಗಿತ್ತು.
ಅಪ್ಪನನ್ನು ಸ್ವಾಗತಿಸಲು ಹಾಜರಿದ್ದ ಸಂಸದ ಕಾರ್ತಿ ಚಿದಂಬರಂ, ಜತೆಗೆ ಚಿದಂಬರಂ ಅವರು ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಅವರ ನಿವಾಸಕ್ಕೆ ತೆರಳಿದರು.
ಜಸ್ಟೀಸ್ ಆರ್ ಬಾನುಮತಿ, ಎಎಸ್ ಬೋಪಣ್ಣ ಹಾಗೂ ಹೃತಿಕ್ ರಾಯ್ ಅವರಿದ್ದ ನ್ಯಾಯಪೀಠ, ಜಾರಿ ನಿರ್ದೇಶನಾಲಯವು ಚಿದಂಬರಂ ವಿರುದ್ಧ ದಾಖಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೆಲವು ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದೆ.
ಜಾರಿನಿರ್ದೇಶನಾಲಯವು ನಡೆಸುತ್ತಿರುವ ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು. ತನಿಖೆ ವಿಚಾರಣೆಗೆ ಕರೆದಾಗ ತಪ್ಪದೇ ಹಾಜರಾಗಬೇಕು. ತನಿಖೆ, ವಿಚಾರಣೆ, ಪ್ರಕರಣದ ಬಗ್ಗೆ ಮಾಧ್ಯಮಗಳಲ್ಲಿ ಹೇಳಿಕೆ ನೀಡುವಂತಿಲ್ಲ. ವಿದೇಶಕ್ಕೆ ಹಾರುವಂತಿಲ್ಲ. ಪಾಸ್ ಪೋರ್ಟ್ ನ್ಯಾಯಾಲಯದ ವಶಕ್ಕೆ ನೀಡಬೇಕು. ಸಾಕ್ಷ್ಯ ನಾಶ ಮಾಡುವಂತಿಲ್ಲ. ಸಾಕ್ಷಿಗಳ ಮೇಲೆ ಪ್ರಭಾವ ಬೀರುವಂತಿಲ್ಲ. 2 ಲಕ್ಷ ರು ವೈಯಕ್ತಿಕ ಬಾಂಡ್ ಶ್ಯೂರಿಟಿ ಸಲ್ಲಿಸಬೇಕು ಎಂದು ಸೂಚಿಸಿದೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications