ಮಧ್ಯಾಹ್ನ 2 ಗಂಟೆಗೆ ಕೋರ್ಟ್ಗೆ ಚಿದಂಬರಂ ಹಾಜರು
ನವದೆಹಲಿ, ಆಗಸ್ಟ್ 22: ಐಎನ್ಎಕ್ಸ್ ಮೀಡಿಯಾ ಹಗರಣದ ಆರೋಪದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ಪಿ. ಚಿದಂಬರಂ ಅವರನ್ನು ಸಿಬಿಐ ಅಧಿಕಾರಿಗಳು ಗುರುವಾರ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಲಿದೆ.
ಬುಧವಾರ ರಾತ್ರಿಯಿಡೀ ಸಿಬಿಐ ಕೇಂದ್ರ ಕಚೇರಿಯಲ್ಲಿ ಕಳೆದ ಚಿದಂಬರಂ ಅವರನ್ನು ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ಜತೆಗೆ ಅವರ ವೈದ್ಯಕೀಯ ತಪಾಸಣೆ ನಡೆಸಲಾಗಿತ್ತು.
ಮಧ್ಯಾಹ್ನ 2 ಗಂಟೆ ಸುಮಾರಿಗೆ ಚಿದಂಬರಂ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸಲು ಅನುವು ಮಾಡಿಕೊಡಿವಂತೆ ಅವರನ್ನು ತಮ್ಮ ವಶಕ್ಕೆ ನೀಡಲು ಸಿಬಿಐ ಅಧಿಕಾರಿಗಳು ಕೋರಲಿದ್ದಾರೆ.

ಚಿದಂಬರಂ ಅವರನ್ನು ವಿಚಾರಣೆ ನಡೆಸಲು ಕನಿಷ್ಠ ಮೂರು ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಸಿಬಿಐ ಕೋರಲಿದೆ. ಶುಕ್ರವಾರ ಸುಪ್ರೀಂಕೋರ್ಟ್ನಲ್ಲಿ ಚಿದಂಬರಂ ಅವರ ವಕೀಲರು ಅವರ ಜಾಮೀನು ಅರ್ಜಿಗಾಗಿ ವಾದ ಮಂಡಿಸಲಿದ್ದಾರೆ. ಒಂದು ವೇಳೆ ಸುಪ್ರೀಂಕೋರ್ಟ್ ಚಿದಂಬರಂ ಅವರ ಪರವಾಗಿ ಒಲವು ತೋರಿ ಅವರಿಗೆ ಜಾಮೀನು ಮಂಜೂರು ಮಾಡಿದರೆ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಲಿದ್ದಾರೆ.
ಆದರೆ, ಸಿಬಿಐ ನ್ಯಾಯಾಲಯವು ಅವರ ವಶವನ್ನು ವಿಸ್ತರಿಸಲು ಒಪ್ಪಿಕೊಂಡರೆ ಚಿದಂಬರಂ ಅವರು ಸಿಬಿಐ ಲಾಕಪ್ನಲ್ಲಿಯೇ ಮುಂದುವರಿಯಬೇಕಾಗುತ್ತದೆ ಎಂದು ಸಿಬಿಐನ ಮೂಲಗಳು ತಿಳಿಸಿವೆ.
ಸಾಮಾನ್ಯವಾಗಿ ತನಿಖಾ ಸಂಸ್ಥೆಗಳಿಗೆ ತಮ್ಮ ವಶದಲ್ಲಿಟ್ಟುಕೊಂಡು ವಿಚಾರಣೆ ನಡೆಸಲು ಗರಿಷ್ಠ 10 ದಿನಗಳ ಅವಕಾಶ ನೀಡಲಾಗುತ್ತದೆ. 10 ದಿನಗಳ ವಿಚಾರಣಾ ಅವಧಿ ಪೂರ್ಣಗೊಂಡ ಬಳಿಕ ಕೆಲವೊಂದು ಸಂದರ್ಭಗಳಲ್ಲಿ ಸಂಸ್ಥೆಗಳು 14 ದಿನಗಳ ಹೆಚ್ಚಿನ ನ್ಯಾಯಾಂಗ ಬಂಧನಕ್ಕೆ ಕೋರಬಹುದು.
ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸಹ ಆರೋಪಿಯಾಗಿರುವ ಚಿದಂಬರಂ ಅವರ ಮಗ ಕಾರ್ತಿ ಚಿದಂಬರಂ ಅವರು ಕಳೆದ ವರ್ಷದ ಏಪ್ರಿಲ್ನಲ್ಲಿ 23 ದಿನ ಸಿಬಿಐ ಮತ್ತು ನ್ಯಾಯಾಂಗ ಬಂಧನದಲ್ಲಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications