ಪಿ. ಚಿದಂಬರಂಗೆ ಗಾಯದ ಮೇಲೆ ಬರೆ: ಮತ್ತೆ ಸಿಬಿಐ ವಶಕ್ಕೆ
ನವದೆಹಲಿ, ಆಗಸ್ಟ್ 26: ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಮಾಜಿ ಸಚಿವ ಪಿ. ಚಿದಂಬರಂ ಅವರ ಸಂಕಷ್ಟ ಮುಂದುವರಿದಿದೆ. ಸುಪ್ರೀಂಕೋರ್ಟ್ನಿಂದ ಜಾಮೀನು ದೊರೆತು ಬಂಧನದಿಂದ ಹೊರಬರಬಹುದು ಎಂಬ ನಿರೀಕ್ಷೆಯಲ್ಲಿದ್ದ ಅವರಿಗೆ ಆಘಾತ ಎದುರಾಗಿದೆ. ಅತ್ತ ಸಿಬಿಐ ವಿಶೇಷ ನ್ಯಾಯಾಲಯವು ಅವರನ್ನು ಮತ್ತೆ ನಾಲ್ಕು ದಿನ ಸಿಬಿಐ ವಶಕ್ಕೆ ಒಪ್ಪಿಸಿದೆ. ಇದರಿಂದ ಅವರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಸಿಬಿಐ ವಿಶೇಷ ನ್ಯಾಯಾಲಯವು ಚಿದಂಬರಂ ಅವರ ಸಿಬಿಐ ವಶದ ಅವಧಿಯನ್ನು ಆಗಸ್ಟ್ 30ರವರೆಗೂ ವಿಸ್ತರಿಸಿದೆ.
ಸುಪ್ರೀಂಕೋರ್ಟ್ ಮುಂದೆ ಚಿದಂಬರಂ ಅವರ ಮೂರು ಅರ್ಜಿಗಳು ವಿಚಾರಣೆಗೆ ಬಂದಿದ್ದವು. ಅವುಗಳಲ್ಲಿ ಒಂದೂ ಅವರ ಸಹಾಯಕ್ಕೆ ಬರಲಿಲ್ಲ. ಜಾರಿ ನಿರ್ದೇಶನಾಲಯವು ತಮ್ಮನ್ನು ಬಂಧಿಸದಂತೆ ತಡೆಯಾಜ್ಞೆ ನೀಡುವಂತೆ ಕೋರಿದ್ದ ಅರ್ಜಿಯನ್ನು ಮಾತ್ರ ಸುಪ್ರೀಂಕೋರ್ಟ್ ಪುರಸ್ಕರಿಸಿದೆ. ಆದರೆ, ಮಂಗಳವಾರದವರೆಗೆ ಮಾತ್ರ ಈ ರಕ್ಷಣೆ ನೀಡಲಾಗಿದೆ. ಈಗಾಗಲೇ ಸಿಬಿಐ ವಶದಲ್ಲಿರುವುದರಿಂದ ಅವರಿಗೆ ಇದರಿಂದ ಪ್ರಯೋಜನವಾಗುವುದಿಲ್ಲ.

ಜಾರಿ ನಿರ್ದೇಶನಾಲಯವು ದಾಖಲಿಸಿರುವ ಐಎನ್ಎಕ್ಸ್ ಮೀಡಿಯಾ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಅವರನ್ನು ಬಂಧಿಸಲು ಉದ್ದೇಶಿಸಿದೆ. ಹಣ ವರ್ಗಾವಣೆ ಪ್ರಕರಣದಲ್ಲಿ ಚಿದಂಬರಂ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸುವ ದೆಹಲಿ ಹೈಕೋರ್ಟ್ನ ಆದೇಶದ ವಿರುದ್ಧದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಮಂಗಳವಾರ ಮುಂದುವರಿಸುವುದಾಗಿ ನ್ಯಾಯಮೂರ್ತಿಗಳಾದ ಆರ್. ಭಾನುಮತಿ ಮತ್ತು ಎಎಸ್ ಬೋಪಣ್ಣ ಅವರನ್ನು ಒಳಗೊಂಡ ನ್ಯಾಯಪೀಠ ತಿಳಿಸಿದೆ.
ಇದೇ ಪ್ರಕರಣದಲ್ಲಿ ತನ್ನ ವಶದಲ್ಲಿರುವ ಚಿದಂಬರಂ ಅವರು ವಿಚಾರಣೆಗೆ ಸಹಕರಿಸುತ್ತಿಲ್ಲ. ಹೀಗಾಗಿ ಅವರನ್ನು ಮತ್ತಷ್ಟು ದಿನ ವಶಕ್ಕೆ ನೀಡಬೇಕು ಎಂದು ಸಿಬಿಐ ಕೋರಿತ್ತು. ಅದನ್ನು ವಿಶೇಷ ನ್ಯಾಯಾಧೀಶ ಅಜಯ್ ಕುಮಾರ್ ಮಾನ್ಯಮಾಡಿದರು. ಸಿಬಿಐ ಸಲ್ಲಿಸಿರುವ ಮನವಿ ನ್ಯಾಯುಯುತವಾಗಿದೆ ಎಂದು ಅವರು ಹೇಳಿದರು.
ಸಿಬಿಐ ವಶದಲ್ಲಿರುವ ಚಿದಂಬರಂ ಅವರನ್ನು ಅವರ ಪರ ವಕೀಲರು ಮತ್ತು ಕುಟುಂಬದವರು ಪ್ರತಿದಿನ ಅರ್ಧಗಂಟೆ ಭೇಟಿ ಮಾಡಲು ಅವಕಾಶ ನೀಡಲಾಗಿದೆ.
ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ತಮ್ಮನ್ನು ಕಿಂಗ್ಪಿನ್ ಎಂದಿರುವುದಲ್ಲದೆ, ಏರ್ಸೆಲ್ ಮ್ಯಾಕ್ಸಿಸ್ ಪ್ರಕರಣದಲ್ಲಿ ಕೂಡ ಭಾಗಿಯಾಗಿದ್ದೇನೆ ಎಂದು ಹೇಳುವ ಮೂಲಕ ದೆಹಲಿ ಹೈಕೋರ್ಟ್ ತಮ್ಮ ಪ್ರತಿಷ್ಠೆಗೆ ಧಕ್ಕೆ ತಂದಿದೆ ಎಂದು ಚಿದಂಬರಂ ಸುಪ್ರೀಂಕೋರ್ಟ್ನಲ್ಲಿ ಅರೋಪಿಸಿದರು. 'ಪ್ರತಿದಿನ ನನ್ನ ವರ್ಚಸ್ಸಿಗೆ ಧಕ್ಕೆ ತರಲಾಗುತ್ತಿದೆ. ನನಗೆ ಹೇಗೆ ರಕ್ಷಣೆ ಸಿಗುತ್ತದೆ?' ಎಂದು ಚಿದಂಬರಂ ಪರ ವಕೀಲರು ಹೇಳಿದರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications