ಚಿದಂಬರಂ ತಿಹಾರ್ ಜೈಲು ವಾಸ ಇನ್ನೂ 14 ದಿನ ವಿಸ್ತರಣೆ
ನವದೆಹಲಿ, ಸೆಪ್ಟೆಂಬರ್ 19: ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ತಿಹಾರ್ ಜೈಲಿನಲ್ಲಿರುವ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಅವರ ನ್ಯಾಯಾಂಗ ಬಂಧನದ ಅವಧಿ ಇನ್ನೂ 14 ದಿನ ವಿಸ್ತರಣೆಯಾಗಿದೆ.
ಸೆ. 5ರಿಂದ ತಿಹಾರ್ ಜೈಲಿನಲ್ಲಿರುವ ಪಿ. ಚಿದಂಬರಂ ಅವರ ನ್ಯಾಯಾಂಗ ಬಂಧನ ಅವಧಿಯು ಸೆ. 19ರಂದು ಮುಕ್ತಾಯಗೊಂಡಿತ್ತು. ಅವರನ್ನು ದೆಹಲಿಯಲ್ಲಿರುವ ವಿಶೇಷ ನ್ಯಾಯಾಲಯದ ಮುಂದೆ ಗುರುವಾರ ಹಾಜರುಪಡಿಸಲಾಗಿತ್ತು.
ಮೋದಿ ಕೆಣಕಿ, ಅಪ್ಪನಿಗೆ ವಿಶ್ ಮಾಡಿದ ಪತ್ರ ಬರೆದ ಕಾರ್ತಿ ಚಿದಂಬರಂ
ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ, ಚಿದಂಬರಂ ಅವರ ನ್ಯಾಯಾಂಗ ಬಂಧನ ವಿಸ್ತರಣೆಗೆ ಮನವಿ ಮಾಡಿತ್ತು. ಇದಕ್ಕೆ ಚಿದಂಬರಂ ಪರ ವಕೀಲ ಕಪಿಲ್ ಸಿಬಲ್ ತೀವ್ರ ವಿರೋಧ ವ್ಯಕ್ತಪಡಿಸಿದರು.
ವಿವಿಧ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಚಿದಂಬರಂ ಅವರು ತಿಹಾರ ಜೈಲಿನಲ್ಲಿದ್ದ ಅವಧಿಯಲ್ಲಿ ತೂಕ ಕಳೆದುಕೊಂಡಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದ ಅವರು, ನ್ಯಾಯಾಂಗ ಬಂಧನದ ಅವಧಿಯಲ್ಲಿ ನಿರಂತರ ವೈದ್ಯಕೀಯ ತಪಾಸಣೆ ಮತ್ತು ಸೂಕ್ತ ಆಹಾರಗಳ ಪೂರೈಕೆಯನ್ನು ಮಾಡುವಂತೆ ಕೋರಿ ಅರ್ಜಿ ಸಲ್ಲಿಸಿದರು.
ಚಿದು ಅರ್ಜಿ ವಜಾ, ತಿಹಾರ್ ಜೈಲಿನಲ್ಲೇ ಪಿ ಚಿದಂಬರಂ ಹುಟ್ಟುಹಬ್ಬ
ಎರಡೂ ಕಡೆದ ವಾದ ಆಲಿಸಿದ ವಿಶೇಷ ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್ ಅವರು ಚಿದಂಬರಂ ಅವರನ್ನು ಅಕ್ಟೋಬರ್ 3ರವರೆಗೂ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ನೀಡಿದರು. ಜತೆಗೆ ಚಿದಂಬರಂ ಅವರ ವೈದ್ಯಕೀಯ ತಪಾಸಣೆಗೆ ಅವಕಾಶ ನೀಡಿದರು.
ವಿಮಾನ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಚಿದಂಬರಂಗೆ ಸಂಕಷ್ಟ?
ಚಿದಂಬರಂ ಅವರ ಜಾಮೀನು ಅರ್ಜಿ ದೆಹಲಿ ಹೈಕೋರ್ಟ್ನಲ್ಲಿ ಬಾಕಿ ಉಳಿದಿದ್ದು, ಸೆ. 23ರಂದು ವಿಚಾರಣೆಗೆ ಬರಲಿದೆ.