Get Updates
Get notified of breaking news, exclusive insights, and must-see stories!

ಸೊಹ್ರಾಬುದ್ದಿನ್ ಎನ್ ಕೌಂಟರ್ ತನಿಖೆ ನಡೆಸುತ್ತಿದ್ದ ಐಪಿಎಸ್ ಅಮಾನತು

ನವದೆಹಲಿ, ಡಿಸೆಂಬರ್ 21: ಸೊಹ್ರಾಬುದ್ದಿನ್ ಮತ್ತು ತುಳಸಿರಾಮ್ ಪ್ರಜಾಪತಿ ಎನ್ ಕೌಂಟರ್ ಪ್ರಕರಣದ ತನಿಖೆ ನಡೆಸುತ್ತಿದ್ದ ಐಪಿಎಸ್ ಅಧಿಕಾರಿಯನ್ನು ಗೃಹಸಚಿವಾಲಯ ಅಮಾನತುಗೊಳಿಸಿದೆ.

ಗುಜರಾತ್ ಕೆಡರ್ ನ 1992 ರ ಬ್ಯಾಚಿನ ಐಪಿಎಸ್ ಅಧಿಕಾರಿ ರಜನೀಶ್ ರೈ ಸಿಐಎಟಿ(Counter Insurgency and Anti-Terrorism) ಮತ್ತು ಸಿಆರ್ ಪಿಎಫ್(Central Reserve Police Force) ನ ಮುಖ್ಯಾಧಿಕಾರಿಯಾಗಿ ಆಂಧ್ರಪ್ರದೇಶದ ಚಿತ್ತೂರ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.

ಕಳೆದ ಆಗಸ್ಟ್ ನಲ್ಲಿ ಸ್ವಯಂ ನಿವೃತ್ತಿ(ವಿಆರ್ ಎಸ್)ಗೆ ಅರ್ಜಿ ಹಾಕಿದ್ದ ರಜನೀಶ್ ತಮಗೆ ವಿಆರ್ ಎಸ್ ಗೆ ಅನುಮತಿ ದೊರೆಯದಿದ್ದರೂ ಕಚೇರಿಗೆ ಹಲವು ತಿಂಗಳಿನಿಂದ ಗೈರಾಗಿದ್ದರು. ಆದ್ದರಿಂದ ಅವರನ್ನು ಅಮಾನತು ಮಾಡಲಾಗಿದೆ ಎಂದು ಗೃಹಸಚಿವಾಲಯ ಹೇಳಿದೆ.

IPS officer who probed Sohrabuddin Sheik encounter case suspended

ರಾಜಸ್ಥಾನ ಮತ್ತು ಗುಜರಾತ್ ನ ಜಂಟಿ ಪೊಲೀಸ್ ತಂಡ ಸೊಹ್ರಾಬುದ್ದಿನ್ ನನ್ನು 2005ರಲ್ಲಿ ಮತ್ತು ಆತನ ಹತ್ತಿರದ ಸಹಚರ ತುಳಸಿರಾಮ್ ಪ್ರಜಾಪತಿಯನ್ನು 2006ರಲ್ಲಿ ಎನ್ಕೌಂಟರ್ ಮಾಡಿ ಸಾಯಿಸಿತ್ತು. ಈವೆರಡೂ ಎನ್ಕೌಂಟರ್ ಗಳು ನಕಲಿ ಎಂದು ಆರೋಪಿಸಲಾಗಿತ್ತು.

ಈ ಪ್ರಕರಣದ ತೀರ್ಪನ್ನು ಇಂದು ಸಿಬಿಐ ವಿಶೇಷ ನ್ಯಾಯಾಲಯ ಪ್ರಕಟಿಸಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+