ಸಿಬಿಐ ನಿರ್ದೇಶಕರಾಗಿ ಸುಬೋಧ್ ಕುಮಾರ್ ಜೈಸ್ವಾಲ್ ನೇಮಕ
ನವದೆಹಲಿ, ಮೇ 25: ಮಹಾರಾಷ್ಟ್ರದ ಮಾಜಿ ಪೊಲೀಸ್ ಮುಖ್ಯಸ್ಥರು ಹಾಗೂ ಐಪಿಎಸ್ ಅಧಿಕಾರಿ ಸುಬೋಧ್ ಕುಮಾರ್ ಜೈಸ್ವಾಲ್ ರನ್ನು ಕೇಂದ್ರ ತನಿಖಾ ತಂಡದ ನಿರ್ದೇಶಕರಾಗಿ ನೇಮಕಗೊಳಿಸಿದ ಆದೇಶಿಸಲಾಗಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ, ಪ್ರತಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಮತ್ತು ಮುಖ್ಯ ನ್ಯಾಯಮೂರ್ತಿಗಳು ನಡೆಸಿದ ಮಹತ್ವದ ಸಭೆಯ ಬಳಿಕ ಕೇಂದ್ರ ತನಿಖಾ ತಂಡಕ್ಕೆ ಹೊಸ ನಿರ್ದೇಶಕರನ್ನು ನೇಮಿಸಿ ಕೇಂದ್ರ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಯಿತು.
ಸುಬೋಧ್ ಕುಮಾರ್ ಜೈಸ್ವಾಲ್ 1985ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿದ್ದು ಮಹಾರಾಷ್ಟ್ರದಲ್ಲಿ ಪೊಲೀಸ್ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಅವರು ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಮುಂದಿನ ಎರಡು ವರ್ಷಗಳ ಅವಧಿಗೆ ನೇಮಕ:
ಐಪಿಎಸ್ ಅಧಿಕಾರಿ ಸುಬೋಧ್ ಕುಮಾರ್ ಜೈಸ್ವಾಲ್ ರನ್ನು ಕೇಂದ್ರ ತನಿಖಾ ತಂಡದ ನೂತನ ನಿರ್ದೇಶಕರನ್ನಾಗಿ ನೇಮಿಸಲಾಗಿದೆ. ಮುಂದಿನ ಎರಡು ವರ್ಷಗಳ ಅವಧಿಗೆ ಕೇಂದ್ರ ಸರ್ಕಾರದಿಂದ ಈ ಅಧಿಸೂಚನೆಯನ್ನು ಹೊರಡಿಸಲಾಗಿದೆ.