ಐಆರ್ ಸಿಟಿಸಿ ಹಗರಣ: ಲಾಲೂ, ಪತ್ನಿ, ಪುತ್ರಗೆ ಜಾಮೀನು
ನವದೆಹಲಿ, ಜನವರಿ 28: ಐಆರ್ ಸಿಟಿಸಿ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾಗಿದ್ದ, ಆರ್ ಜೆಡಿ ಮುಖಂಡರಾದ ಲಾಲೂ ಪ್ರಸಾದ್, ರಾಬ್ರಿದೇವಿ ಮತ್ತು ಅವರ ಪುತ್ರ ತೇಜಸ್ವಿ ಯಾದವ್ ಅವರಿಗೆ ದೆಹಲಿಯ ಪಟಿಯಾಲಾ ಹೌಸ್ ನ್ಯಾಯಾಲಯ ಜಾಮೀನು ನೀಡಿದೆ.
ಕಳೆದ ಡಿಸೆಂಬರ್ ನಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ಜಾಮೀನು ನೀಡಿದ್ದ ಪಟಿಯಾಲಾ ಹೌಸ್ ನ್ಯಾಯಾಲಯ, ಇದೀಗ ಜಾಮೀನು ನೀಡಿದೆ.
IRCTC ಹಗರಣ : ಲಾಲೂ ಪ್ರಸಾದ್ ಯಾದವ್ ಗೆ ಮಧ್ಯಂತರ ಜಾಮೀನು
2006 ರಲ್ಲಿ ಇಂಡಿಯನ್ ರೈಲ್ವೇ ಕೇಟರಿಂಗ್ ಅಂಡ್ ಟೂರಿಸಮ್ ಕಾರ್ಪೋರೇಶನ್ ಹೊಟೇಲ್ ಗಳಿಗೆ ಟೆಂಡರ್ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಅವ್ಯವಹಾರ ನಡೆದಿತ್ತು.
ರೈಲ್ವೆ ಟೆಂಡರ್ ಪ್ರಕರಣ: ಲಾಲೂ ಹಾಗೂ ಕುಟುಂಬ ವಿರುದ್ಧ ಚಾರ್ಜ್ ಶೀಟ್
ಈ ಪ್ರಕರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿದೇವಿ, ಅವರ ಪುತ್ರ ತೇಜಸ್ವಿ ಯಾದವ್ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ, ರಾಬ್ರಿ ದೇವಿ ಅವರ ಪತಿ ಲಾಲೂ ಪ್ರಸಾದ್ ಅವರ ಹೆಸರೂ ಕೇಳಿಬಂದಿತ್ತು.
ರೈಲ್ವೆ ಹೋಟೆಲ್ ಹಗರಣ: ಲಾಲೂ ಕುಟುಂಬಕ್ಕೆ ಸಮನ್ಸ್
2004-2009 ರ ವರ ಅವಧಿಯಲ್ಲಿ, ಲಾಲೂ ಪ್ರಸಾದ್ ಯಾದವ್ ರೈಲ್ವೇ ಸಚಿವರಾಗಿದ್ದಾಗ ರಾಂಚಿ ಮತ್ತು ಪುರಿಯಲ್ಲಿ ಐಆರ್ ಸಿಟಿಸಿ ಹೊಟೇಲ್ ನಿರ್ವಹಣೆಯ ಹೊಣೆಯನ್ನು ಖಾಸಗಿಕಂಪನಿಗಳಿಗೆ ನೀಡಲಾಗಿತ್ತು. ಈ ಸಂದರ್ಭದಲ್ಲಿ ಬಹುಕೋಟಿ ಅವ್ಯವಹಾರ ನಡೆದಿತ್ತು.