ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

IRCTC ಹಗರಣ: ರಾಬ್ರಿ, ತೇಜಸ್ವಿ ಯಾದವ್ ಗೆ ಜಾಮೀನು

|
Google Oneindia Kannada News

ನವದೆಹಲಿ, ಆಗಸ್ಟ್ 31: ಐಆರ್ ಸಿಟಿಸಿ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾಗಿದ್ದ ಆರ್ ಜೆಡಿ ಮುಖಂಡರಾದ ರಾಬ್ರಿದೇವಿ ಮತ್ತು ಅವರ ಪುತ್ರ ತೇಜಸ್ವಿ ಯಾದವ್ ಅವರಿಗೆ ದೆಹಲಿ ನ್ಯಾಯಾಲಯವೊಂದು ಜಾಮೀನು ನೀಡಿದೆ.

2006 ರಲ್ಲಿ ಇಂಡಿಯನ್ ರೈಲ್ವೇ ಕೇಟರಿಂಗ್ ಅಂಡ್ ಟೂರಿಸಮ್ ಕಾರ್ಪೋರೇಶನ್ ಹೊಟೇಲ್ ಗಳಿಗೆ ಟೆಂಡರ್ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಅವ್ಯವಹಾರ ನಡೆದಿತ್ತು.

ರೈಲ್ವೆ ಟೆಂಡರ್ ಪ್ರಕರಣ: ಲಾಲೂ ಹಾಗೂ ಕುಟುಂಬ ವಿರುದ್ಧ ಚಾರ್ಜ್ ಶೀಟ್ ರೈಲ್ವೆ ಟೆಂಡರ್ ಪ್ರಕರಣ: ಲಾಲೂ ಹಾಗೂ ಕುಟುಂಬ ವಿರುದ್ಧ ಚಾರ್ಜ್ ಶೀಟ್

ಈ ಪ್ರಕರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿದೇವಿ, ಅವರ ಪುತ್ರ ತೇಜಸ್ವಿ ಯಾದವ್ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ, ರಾಬ್ರಿ ದೇವಿ ಅವರ ಪತಿ ಲಾಲೂ ಪ್ರಸಾದ್ ಅವರ ಹೆಸರೂ ಕೇಳಿಬಂದಿತ್ತು.

ರೈಲ್ವೆ ಹೋಟೆಲ್ ಹಗರಣ: ಲಾಲೂ ಕುಟುಂಬಕ್ಕೆ ಸಮನ್ಸ್ ರೈಲ್ವೆ ಹೋಟೆಲ್ ಹಗರಣ: ಲಾಲೂ ಕುಟುಂಬಕ್ಕೆ ಸಮನ್ಸ್

IRCTC Scam: Rabri Devi and Tejaswi Yadav granted bail

2004-2009 ರ ವರ ಅವಧಿಯಲ್ಲಿ, ಲಾಲೂ ಪ್ರಸಾದ್ ಯಾದವ್ ರೈಲ್ವೇ ಸಚಿವರಾಗಿದ್ದಾಗ ರಾಂಚಿ ಮತ್ತು ಪುರಿಯಲ್ಲಿ ಐಆರ್ ಸಿಟಿಸಿ ಹೊಟೇಲ್ ನಿರ್ವಹಣೆಯ ಹೊಣೆಯನ್ನು ಖಾಸಗಿಕಂಪನಿಗಳಿಗೆ ನೀಡಲಾಗಿತ್ತು. ಈ ಸಂದರ್ಭದಲ್ಲಿ ಬಹುಕೋಟಿ ಅವ್ಯವಹಾರ ನಡೆದಿತ್ತು.

ತಾತ್ಕಾಲಿಕ ಜಾಮೀನಿನ ಅವಧಿ ಅಂತ್ಯ: ಲಾಲೂ ಮತ್ತೆ ಜೈಲಿಗೆತಾತ್ಕಾಲಿಕ ಜಾಮೀನಿನ ಅವಧಿ ಅಂತ್ಯ: ಲಾಲೂ ಮತ್ತೆ ಜೈಲಿಗೆ

ಮೇವು ಹಗರಣದ ಆರೋಪಿಯಾಗಿರುವ ಲಾಲೂ ಪ್ರಸಾದ್ ಯಾದವ್ ಅವರು ಈ ಪ್ರಕರಣದ ಆರೋಪಿಯಾಗಿದ್ದು, ಅವರಿಗೂ ಜಾಮೀನು ದೊರೆತಿದೆ. ಆದರೆ ಮೇವು ಹಗರಣದಲ್ಲಿ ದೋಷಿಯಾಗಿರುವ ಅವರು ರಾಂಚಿಯ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ.

English summary
A Delhi court on Friday granted bail to all accused, including former Bihar chief minister Rabri Devi and her son Tejashwi Yadav in a money laundering case related to the 2006 Indian Railway Catering and Tourism Corporation (IRCTC) hotels tender scam. IRCTC
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X