ಐಸಿಸ್ ಗೆ ಭಾರತದಲ್ಲಿ ಠೇವಣಿ ಸಿಕ್ಕಿಲ್ಲ! ರಾಜನಾಥ್ ಸಿಂಗ್
ನವದೆಹಲಿ, ಜೂನ್ 3: ಐಸಿಸ್ ಭಯೋತ್ಪಾದಕ ಭಯೋತ್ಪಾದಕ ಸಂಘಟನೆಗೆ ಭಾರತದಲ್ಲಿ ತನ್ನ ಸಾಮ್ರಾಜ್ಯವನ್ನು ವಿಸ್ತರಿಸಲು ಯಾವುದೇ ಅವಕಾಶ ಸಿಕ್ಕಿಲ್ಲ ಎಂದು ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಹೇಳಿದರು.
ಭಾರತದಲ್ಲಿ ತನ್ನ ಸಾಮ್ರಾಜ್ಯವನ್ನು ಸ್ಥಾಪಿಸಲು ಐಸಿಸ್ ಬಹಳವೇ ಪ್ರಯತ್ನಿಸುತ್ತಿದೆ. ಆದರೆ ಭಾರತದ ಆಂತರಿಕ ಭದ್ರತೆಯ ವಿಷಯದಲ್ಲಿ ಗಣನೀಯವಾಗಿ ಸುಧಾರಿಸಿರುವುದರಿಂದ ಇಲ್ಲಿ ತನ್ನ ಆಧಿಪತ್ಯ ಸ್ಥಾಪಿಸಲು ಅದಕ್ಕೆ ಸಾಧ್ಯವಾಗುತ್ತಿಲ್ಲ, ಎಂದು ಭಾರತೀಯ ಭದ್ರತಾ ವ್ಯವಸ್ಥೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.[ಜಿಡಿಪಿ ಕುಸಿತವು ಹಿಂದಿನ ಸರಕಾರಗಳ ಪಾಪದ ಫಲ: ಜೇಟ್ಲಿ]
ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸುಭದ್ರ ದೇಶವನ್ನು ಕಟ್ಟುವಲ್ಲಿ ಸಮರ್ಥವಾಗಿದೆ ಎಂದ ಅವರು, ಕಾಶ್ಮೀರದಲ್ಲೂ ಸದ್ಯಕ್ಕೆ ಪರಿಸ್ಥಿತಿ ಶಾಂತವಾಗಿದೆ ಎಂದರು.
ಕಾಶ್ಮೀರದ ಸಮಸ್ಯೆಯನ್ನು ಬಗೆಹರಿಸುವುದಕ್ಕೆ ಕೇವಲ ಸೇನೆ ಮತ್ತು ರಾಜಕೀಯ ಇದ್ದರೆ ಸಾಲದು, ಈ ಕುರಿತು ಸಮಗ್ರ ಮತ್ತು ವಿಸ್ತಾರವಾದ ಚರ್ಚೆ ನಡೆಯಬೇಕು. ಕಾಶ್ಮೀರದಲ್ಲಿರುವ ಯುವಕರು ಭಾರತದ ಭವಿಷ್ಯ ಎಂದು ಸಹ ಇದೇ ಸಂದರ್ಭದಲ್ಲಿ ಸಿಂಗ್ ಹೇಳಿದರು.[ಪ್ರಧಾನಿ ಮೋದಿಗೆ ಬೇಕಂತೆ ನಿಮ್ಮ ಮೂರು ಪೀಳಿಗೆಯ ಸೆಲ್ಫಿ!]
ನಾವು ಕಾಶ್ಮೀರದ ಸಮಸ್ಯೆಗೆ ಒಂದು ಶಾಶ್ವತ ಅಂತ್ಯವನ್ನು ಹುಡುಕುತ್ತೇವೆ ಎನ್ನುವುದಕ್ಕೆ ಅವರು ಮರೆಯಲಿಲ್ಲ.

ಶಾಂತಿಕದಡುವುದಕ್ಕೆ ಬಿಡೆವು

ಕಶ್ಮೀರವೂ ಸುಧಾರಿಸಿದೆ

ತಟಸ್ಥವಾಗಿದ್ದಾರೆ ಭಯೋತ್ಪಾದಕರು
ಜಮ್ಮು ಕಾಶ್ಮೀರದಲ್ಲಿ ಶಾಂತಿ ಕದಡುತ್ತಿದ್ದ 368 ಕ್ಕೂ ಹೆಚ್ಚು ಭಯೋತ್ಪಾದಕರನ್ನು 2014 ರಲ್ಲಿ ಮೋದಿ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ಇಲ್ಲಿಯವರೆಗೆ ತಟಸ್ಥಗೊಳಿಸಲಾಗಿದೆ. ಯಾವುದೇ ಭಯೋತ್ಪಾದಕ ಚಟುವಟಿಕೆಗಳನ್ನು ಅವರು ನಡೆಸಲಾಗದಂತೆ ದಿಗ್ಬಂಧನ ಹೇರಲಾಗಿದೆ ಎಂದರು.

ಸರ್ಜಿಕಲ್ ಸ್ಟ್ರೈಕ್ ನಂತರ ಭಯೋತ್ಪಾದಕರಲ್ಲಿ ನಡುಕ
ಸರ್ಜಿಕಲ್ ಸ್ಟ್ರೈಕ್ ನಂತರ ಪಾಕಿಸ್ಥಾನದಿಂದ ಜಮ್ಮು ಕಾಶ್ಮೀರದ ಮೂಲಕ ಭಾರತಕ್ಕೆ ನುಸುಳುತ್ತಿದ್ ನುಸುಳುಕೋರರ ಸಂಖ್ಯೆಯೂ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದೆ ಎಂಬುದನ್ನು ಇದೇ ಸಂದರ್ಭದಲ್ಲಿ ಅವರು ತಿಳಿಸಿದರು.

ಐಸಿಸ್ ಗೆ ಸೂಕ್ತ ಪ್ರತ್ಯುತ್ತರ
ಐಸಿಸ್ ಪ್ರತಿಬಾರಿ ಭಾರತದ ಮೇಲೆ ಧಾಳಿ ನಡೆಸಲು, ಭಾರತದ ಶಾಂತಿ ಕಡಡಲು ಪ್ರಯತ್ನಿಸಿದಾಗಲೂ ನಾವು ಸೂಕ್ತ ಪ್ರತ್ಯುತ್ತರ ನೀಡಿದ್ದೇವೆ ಎಂದು ಕೇಂದ್ರ ಸರ್ಕಾರದ ಆಡಳಿತ ಕ್ರಮವನ್ನು ಶ್ಲಾಘಿಸಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications