ಉಗ್ರನಿಗೆ ಝಾಕಿರ್ ನಾಯ್ಕ್ ಸಂಸ್ಥೆಯಿಂದ ರೂ. 80ಲಕ್ಷ ಸ್ಕಾಲರ್ ಶಿಪ್!
ನಿಷೇಧಿತ ಇಸ್ಲಾಮಿಕ್ ರಿಸರ್ಚ್ ಸಂಘಟನೆಯಿಂದ ಶಂಕಿತ ಉಗ್ರನಿಗೆ ವಿದ್ಯಾರ್ಥಿ ವೇತನ ಮಂಜೂರಾಗಿದೆ ಎಂಬ ಮಾಹಿತಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಸಿಬ್ಬಂದಿ ಪತ್ತೆ ಹಚ್ಚಿದ್ದಾರೆ.
ನವದೆಹಲಿ, ನವೆಂಬರ್, 22: ಇಸ್ಲಾಂ ಧರ್ಮಗುರು ಝಾಕಿರ್ ನಾಯ್ಕ್ ಅವರ ನಿಷೇಧಿತ ಇಸ್ಲಾಮಿಕ್ ರಿಸರ್ಚ್ ಸಂಘಟನೆಯು ಐಸ್ ಉಗ್ರನೆಂದು ತನಿಖೆ ಎದುರಿಸುತ್ತಿರುವ ಅಬು ಅನಾಸ್ ಗೆ 80ಲಕ್ಷ ವಿದ್ಯಾರ್ಥಿ ವೇತನವನ್ನು ಮಂಜೂರು ಮಾಡಿತ್ತು ಎಂಬುದನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಪತ್ತೆ ಮಾಡಿದೆ.
ಅಕ್ಟೋಬರ್ 2015ರಲ್ಲಿ ಭಾರತದಲ್ಲಿ ಐಸ್ ಉಗ್ರ ಚಟುವಟಿಕೆಗಳನ್ನು ನಡೆಸುವುದಕ್ಕಾಗಿ ಐಸ್ ಉಗ್ರ ಸಂಘಟನೆಯಿಂದ ವಿದ್ಯಾರ್ಥಿ ವೇತನವನ್ನು ಪಡೆದಿರುವ ಆರೋಪ ಅಬು ಅನಾಸ್ ಮೇಲಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ ಈ ಕುರಿತು ಅಬು ಅನಾಸ್ ನನ್ನು ವಿಚಾರಣೆ ನಡೆಸುತ್ತಿದೆ.[ಝಾಕಿರ್ ನಾಯಕ್ ಬೆಂಬಲಿಸಿ ಮಂಗಳೂರಿನಲ್ಲಿ ಪ್ರತಿಭಟನೆ]

ಸಿರಿಯಾದಲ್ಲಿ ಪ್ರಬಲವಾಗಿರುವ ಐಸ್ ಉಗ್ರ ಸಂಘಟನೆ ಸೇರಲು ಪ್ರಯತ್ನಿಸುತ್ತಿದ್ದ ಎಂಬ ಆರೋಪದ ಮೇಲೆ ಅನಾಸ್ ನನ್ನು 2016ರ ಜನವರಿಯಲ್ಲಿ ಪೊಲೀಸರು ಬಂಧಿಸಿದ್ದರು.
ರಾಷ್ಟ್ರೀಯ ತನಿಖಾ ಸಂಸ್ಥೆ ಸಿಬ್ಬಂದಿ ಝಾಕಿರ್ ನಾಯ್ಕ್ ನಡೆಸುತ್ತಿರುವ ಸ್ವಯಂ ಸೇವಾ ಸಂಸ್ಥೆಗೆ ಸಂಬಂಧಿಸಿದಂತೆ 20 ವಿವಿಧ ಸ್ಥಳಗಳಲ್ಲಿ ತನಿಖೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಹಲವು ಮಹತ್ವದ ದಾಖಲೆಗಳುನ್ನು ವಶಪಡಿಸಿಕೊಂಡಿದ್ದಾರೆ.
ಹಾರ್ಮನಿ ಮಾಧ್ಯಮ ಸಂಸ್ಥೆ, ಲಾಂಗ್ ಲಾಸ್ಟ್ ಕನ್ಷ್ಟ್ರಕ್ಷನ್, ರೈಟ್ ಪ್ರಾಪರ್ಟಿ ಸಲ್ಯೂಷನ್, ಮೆಜೆಸ್ಟಿಕ್ ಪರ್ಫ್ಯೂಮ್ಸ್ ನಂತಹ ಹಲವು ಖಾಸಗಿ ಸಂಸ್ಥೆಗಳೊಂದಿಗೆ ಝಾಕಿರ್ ನಾಯ್ಕ್ ಇಸ್ಲಾಮಿಕ್ ರಿಸರ್ಚ್ ಸಂಘಟನೆ ವ್ಯವಹಾರ ನಡೆಸಿರುವ ಬಗ್ಗೆ ದಾಖಲೆಗಳಲ್ಲಿ ಮಾಹಿತಿ ಇದೆ ಎಂದು ತನಿಖಾ ಸಂಸ್ಥೆ ತಿಳಿಸಿದೆ.
ಸಂಸ್ಥೆಗೆ ಹಣ ಎಲ್ಲಿಂದ ಬರುತ್ತಿತ್ತು ಮತ್ತು ಹೇಗೆ ಖರ್ಚಾಗುತ್ತಿತ್ತು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications