ದಿ ಕ್ವಿಂಟ್ ಮಾಲೀಕ ರಾಘವ್ ಮನೆ ಮೇಲೆ ಐಟಿ ದಾಳಿ
ನವದೆಹಲಿ, ಅಕ್ಟೋಬರ್ 11 : ಮಾಧ್ಯಮ ಸಂಸ್ಥೆಗಳ ಮುಖ್ಯಸ್ಥ ರಾಘವ್ ಬಾಲ್ ಮನೆ, ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆದಿದೆ. ರಾಘವ್ ಬಾಲ್ ಅವರು ಮುಂಬೈನಲ್ಲಿದ್ದು, ದೆಹಲಿಗೆ ವಾಪಸ್ ಆಗುತ್ತಿದ್ದಾರೆ.
ಗುರುವಾರ ಬೆಳಗ್ಗೆ ನೋಯ್ಡಾದಲ್ಲಿರುವ The Quint ಕಚೇರಿ ಮತ್ತು ರಾಘವ್ ಬಾಲ್ ಅವರ ನಿವಾಸದ ಮೇಲೆ 12ಕ್ಕೂ ಅಧಿಕ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಎಡಿಟರ್ ಗೈಡ್ಗೆ ರಾಘವ್ ಬಾಲ್ ಅವರು ಹೇಳಿಕೆ ನೀಡಿದ್ದು, 'ನಾನು ಮುಂಬೈನಲ್ಲಿದ್ದೇನೆ. ಡಜನ್ಗೂ ಅಧಿಕ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಾನು ದೆಹಲಿಗೆ ವಾಪಸ್ ಆಗುತ್ತಿದ್ದೇನೆ' ಎಂದು ಹೇಳಿದ್ದಾರೆ.

'ನಾವು ಯಾವುದೇ ತರಿಗೆ ವಂಚನೆ ಮಾಡಿಲ್ಲ. ಸರಿಯಾಗಿ ಆದಾಯ ತೆರಿಗೆಯನ್ನು ಪಾವತಿ ಮಾಡುತ್ತಿದ್ದೇವೆ. ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ನೀಡುತ್ತೇನೆ' ಎಂದು ತಿಳಿಸಿದ್ದಾರೆ.
'ದಿ ಕ್ವಿಂಟ್ ಕಚೇರಿಯಲ್ಲಿರುವ ಯಾವುದೇ ದಾಖಲೆ, ಈ ಮೇಲ್ಗಳನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪರಿಶೀಲಿಸದಂತೆ ತಡೆಯಬೇಕು ಎಂದು ಅವರು ಕಚೇರಿಯಲ್ಲಿನ ಸಿಬ್ಬಂದಿಗೆ ಸೂಚಿಸಿದ್ದಾರೆ. ಯಾವುದೇ ದಾಖಲಾತಿಗಳ ಫೋಟೋಗಳನ್ನು ತೆಗೆಯದಂತೆ ನೋಡಿಕೊಳ್ಳಿ' ಎಂದು ಹೇಳಿದ್ದಾರೆ.
ಪಿಟಿಐ ಸುದ್ದಿ ಸಂಸ್ಥೆ ಐಟಿ ದಾಳಿ ಬಗ್ಗೆ ಮಾಹಿತಿ ನೀಡಿದ್ದು, ನೋಯ್ಡಾ ಸೇರಿದಂತೆ ವಿವಿಧ ಪ್ರದೇಶದಲ್ಲಿ ದಾಳಿ ನಡೆದಿದೆ. ರಾಘವ್ ಬಾಲ್ ಮಾಧ್ಯಮ ಕ್ಷೇತ್ರದಲ್ಲಿ ಬಹುದೊಡ್ಡ ಹೆಸರು. ದಿ ಕ್ವಿಂಟ್ ಮತ್ತು ನೆಟ್ವರ್ಕ್ 18 ಗ್ರೂಪ್ನ ಸಂಸ್ಥಾಪಕರು ಅವರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications