13 ಕಡೆ ಐಟಿ ದಾಳಿ, 200 ಕೋಟಿ ರೂ. ಅಕ್ರಮ ವಿದೇಶ ಆಸ್ತಿ ಪತ್ತೆ
ನವದೆಹಲಿ, ಜುಲೈ 29: ದೇಶದ ಮೂರು ರಾಜ್ಯಗಳ 13 ಕಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಬಹಿರಂಗಪಡಿಸದ 200 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ವಿದೇಶ ಆಸ್ತಿಯನ್ನು ಪತ್ತೆಹಚ್ಚಿದ್ದಾರೆ.
ದೆಹಲಿ, ಹರಿಯಾಣ ಮತ್ತು ಹಿಮಾಚಲ ಪ್ರದೇಶಗಳಲ್ಲಿನ 13 ಕಡೆಗಳಲ್ಲಿ ದಾಳಿಗಳನ್ನು ನಡೆಸಿದ್ದು, ಜವಾಬ್ದಾರಿಯುತ ರಾಜಕೀಯ ಸ್ಥಾನಗಳನ್ನು ಹೊಂದಿರುವ ವ್ಯಕ್ತಿಗಳು ಭಾಗಿಯಾಗಿರುವ ಸಮೂಹವೊಂದು ಕನಿಷ್ಠ 30 ಕೋಟಿ ರೂಪಾಯಿ ತೆರಿಗೆ ವಂಚನೆ ಮಾಡಿರುವುದನ್ನು ಕೂಡ ಕಂಡುಹಿಡಿದಿದ್ದಾರೆ.
'ದಶಕಗಳಿಂದ ನೆರೆಯ ರಾಜ್ಯದಲ್ಲಿ ಮಹತ್ವದ ರಾಜಕೀಯ ಅಸ್ತಿತ್ವ ಹೊಂದಿರುವ ವ್ಯಕ್ತಿಗಳಿಂದ ನಿಯಂತ್ರಣಕ್ಕೆ ಒಳಪಟ್ಟಿರುವ ಮತ್ತು ಜವಾಬ್ದಾರಿಯುತ ರಾಜಕೀಯ ಸ್ಥಾನವನ್ನು ಹೊಂದಿರುವ ವ್ಯಕ್ತಿಗಳು ಹಲವು ದಶಕಗಳಿಂದ ಭಾರಿ ಮೊತ್ತದ ಬಹಿರಂಗಪಡಿಸದ ಆದಾಯವನ್ನು ಸೃಷ್ಟಿಸುತ್ತಿದ್ದಾರೆ' ಎಂದು ಕೇಂದ್ರ ನೇರ ತೆರಿಗೆಗಳ ಮಂಡಳಿ ಭಾನುವಾರ ಹೇಳಿಕೆಯಲ್ಲಿ ತಿಳಿಸಿದೆ. ಆದರೆ, ಅದು ಆ ರಾಜಕಾರಣಗಳ ಹೆಸರನ್ನು ಬಹಿರಂಗಪಡಿಸಿಲ್ಲ.

ಜುಲೈ 23ರಂದು 'ಸಮೂಹವೊಂದರ' ಮೇಲೆ ದಾಳಿಗಳು ನಡೆದಿದ್ದು, ಚರ ಅಸ್ತಿ ವರ್ಗಾವಣೆ ಮತ್ತು ನಿರ್ಮಾಣದ ವಿಚಾರದಲ್ಲಿ ಭಾರಿ ಮೊತ್ತದ ಬಹಿರಂಗಪಡಿಸದ ಹಣದ ವ್ಯವಹಾರ ನಡೆದಿರುವುದಕ್ಕೆ ಪುರಾವೆಗಳು ಸಿಕ್ಕಿದೆ. ತೆರಿಗೆದಾರರ ಸ್ವರ್ಗವಾಗಿರುವ ವಿದೇಶಗಳಲ್ಲಿನ ವಿದೇಶಿ ಟ್ರಸ್ಟ್/ಕಂಪೆನಿಗಳ ಹೆಸರಿನಲ್ಲಿ ಇರುವ ಭಾರಿ ಆಸ್ತಿಗಳ ಮೂಲಕ ವಿವಿಧ ಮಾರ್ಗಗಳಲ್ಲಿ ಭಾರತದಲ್ಲಿ ಕಪ್ಪುಹಣವನ್ನು ಸೃಷ್ಟಿಸಲಾಗುತ್ತಿತ್ತು' ಎಂದು ಹೇಳಲಾಗಿದೆ.
ಈ ಪ್ರಮುಖ ವ್ಯಕ್ತಿಗಳು ಬ್ರಿಟಿಷ್ ವರ್ಜಿನ್ ಐಲ್ಯಾಂಡ್ಸ್, ಪನಾಮಾ, ಯುನೈಟೆಡ್ ಕಿಂಗ್ಡಮ್ ಮತ್ತು ಯುಎನ್ಎ ಸೇರಿದಂತೆ ವಿಭಿನ್ನ ದೇಶಗಳಲ್ಲಿ ಅನೇಕ ದಶಕಗಳಿಂದ ನಾನಾ ಹಂತದ ವ್ಯವಸ್ಥೆಯಲ್ಲಿ ವ್ಯವಹಾರ ನಡೆಸುವ ಮೂಲಕ ತಮ್ಮ ಪಾಲ್ಗೊಳ್ಳುವಿಕೆಯನ್ನು ಗುಟ್ಟಾಗಿ ಇರಿಸಿದ್ದರು.
ವಿವಿಧ ಖಂಡಗಳಲ್ಲಿ ಎಲ್ಲಡೆ ವಿವಿಧ ವ್ಯಕ್ತಿಗಳು ಮತ್ತು ಸಂಸ್ಥೆಗಳ ಮೂಲಕ ಈ ಕಂಪೆನಿಗಳು ಕೆಲಸ ಮಾಡುತ್ತಿದ್ದವು. ಈ ವ್ಯಕ್ತಿಗಳ ಪೈಕಿ ಒಬ್ಬಾತ ಕೆರೆಬಿಯನ್ ಐಲ್ಯಾಂಡ್ನ ಪೌರತ್ವ ಪಡೆದುಕೊಳ್ಳಲು ಪ್ರಯತ್ನಿಸಿರುವುದು ತಿಳಿದುಬಂದಿದೆ ಎಂದು ಹೇಳಿಕೆ ತಿಳಿಸಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications