ಸಿಎಎ ವಿರೋಧಿ ಹೋರಾಟ: ಜಾಮಿಯಾ ವಿವಿ ಹಿಂಸಾಚಾರಕ್ಕೆ ಈತನೇ ಕಾರಣ?
ನವದೆಹಲಿ, ಫೆಬ್ರವರಿ.18: ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿನ ಹಿಂಸಾಚಾರಕ್ಕೆ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಶಾರ್ಜಿಲ್ ಇಮಾಮ್ ಪ್ರಚೋದನಕಾರಿ ಭಾಷಣವೇ ಮುಖ್ಯ ಕಾರಣ ಎಂದು ದೆಹಲಿ ಪೊಲೀಸರು ಆರೋಪಿಸಿದ್ದಾರೆ.
ಕಳೆದ ಡಿಸೆಂಬರ್.15ರಂದು ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ವಿರುದ್ಧ ಜಾಮಿಯಿ ವಿವಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆಯು ಹಿಂಸಾತ್ಮಕ ರೂಪಕ್ಕೆ ತಿರುಗಿತ್ತು. ಇದಕ್ಕೆ ಸಂಬಂಧಿಸಿದಂತೆ ಕಳೆದ ಫೆಬ್ರವರಿ.13ರಂದು ದೆಹಲಿ ಪೊಲೀಸರು ಚಾರ್ಜ್ ಶೀಟ್ ದಾಖಲಿಸಿದ್ದರು.
ಮಂಗಳವಾರ ದೆಹಲಿ ಪೊಲೀಸರು ದಾಖಲಿಸಿಕೊಂಡಿರುವ ಚಾರ್ಜ್ ಶೀಟ್ ನಲ್ಲಿ ಜೆಎನ್ ಯು ವಿದ್ಯಾರ್ಥಿ ಶಾರ್ಜಿಲ್ ಇಮಾಮ್ ಹೆಸರನ್ನು ಸೇರಿಸಲಾಗಿದೆ. ಅಲ್ಲದೇ, ಈ ವಿದ್ಯಾರ್ಥಿಯ ಪ್ರಚೋದನೆಯೇ ಹಿಂಸಾಚಾರಕ್ಕೆ ಪ್ರಮುಖ ಕಾರಣ ಎಂದು ಪೊಲೀಸರು ಆರೋಪಪಟ್ಟಿಯಲ್ಲಿ ದೂರಿದ್ದಾರೆ.

ಆರೋಪಿಗಳ ವಿರುದ್ಧ 8 ಕಾಯ್ದೆಗಳ ಅಡಿ ಚಾರ್ಜ್ ಶೀಟ್
ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಚಾರ್ಜ್ ಶೀಟ್ ದಾಖಲಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ 8 ಕಾಯ್ದೆಗಳ ಅಡಿಯಲ್ಲಿ ಆರೋಪ ಪಟ್ಟಿ ಸಿದ್ಧಪಡಿಸಲಾಗಿದೆ. ಆರೋಪಿಗಳ ವಿರುದ್ಧ ದಾಖಲಿಸಿಕೊಂಡಿರುವ ಆರೋಪಪಟ್ಟಿ ಇಲ್ಲಿದೆ.
| ಐಪಿಸಿ ಸೆಕ್ಷನ್ | ಕಾಯ್ದೆ ಹೇಳುವುದೇನು? |
| 307 | ಕೊಲೆ ಯತ್ನ ಆರೋಪ |
| 147 | ಹಿಂಸಾಚಾರಕ್ಕೆ ಶಿಕ್ಷೆ |
| 148 | ಮಾರಕಾಸ್ತ್ರ ಮತ್ತು ಆಯುಧಗಳನ್ನು ಹಿಡಿದು ಹಿಂಸಾಚಾರ |
| 149 | ಕಾನೂನು ಬಾಹಿರ ಚಟುವಟಿಕೆ |
| 186 | ಸಾರ್ವಜನಿಕ ಸೇವೆಗೆ ಅಡ್ಡಿ |
| 353 | ಸರ್ಕಾರಿ ನೌಕರರ ಮೇಲೆ ಹಲ್ಲೆ |
| 332 | ಸರ್ಕಾರಿ ನೌಕರರಿಗೆ ನೋವುಂಟು ಮಾಡುವುದು |
| 427 | ಸಾರ್ವಜನಿಕ ಆಸ್ತಿಗೆ ಹಾನಿ ಉಂಟು ಮಾಡುವುದು |

ದೆಹಲಿ ಪೊಲೀಸರಿಂದ ಸಾಕ್ಷ್ಯ ಸಂಗ್ರಹ ಕಾರ್ಯಾಚರಣೆ
ಕಳೆದ ಡಿಸೆಂಬರ್.15ರಂದು ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಜಾಮಿಯಾ ಸಮನ್ವಯ ಸಮಿತಿಯು ವಿಡಿಯೋ ತುಣುಕನ್ನು ಬಿಡುಗಡೆ ಮಾಡಿತ್ತು. ಇದರಲ್ಲಿ ಪೊಲೀಸರೇ ವಿವಿಯ ಲೈಬ್ರರಿಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿದೆ. ಈ ಕುರಿತು ತನಿಖೆ ನಡೆಸುತ್ತಿರುವ ಪೊಲೀಸರು ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುತ್ತಿದ್ದಾರೆ.

ವಿವಿ ಲೈಬ್ರರಿಯಲ್ಲಿ ಕುಳಿತವರು ವಿದ್ಯಾರ್ಥಿಗಳಲ್ಲ ಎಂದ ಬಿಜೆಪಿ
ಇನ್ನು, ದೆಹಲಿ ಪೊಲೀಸರನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ ಪ್ರತಿಕ್ರಿಯೆ ನೀಡಿದ್ದ ಬಿಜೆಪಿ ಜಾಮಿಯಾ ವಿವಿಯ ಗ್ರಂಥಾಲಯದಲ್ಲಿ ಕುಳಿತಿದ್ದವರು ವಿದ್ಯಾರ್ಥಿಗಳೇ ಅಲ್ಲ. ಹಿಂಸಾಚಾರದಲ್ಲಿ ಕಲ್ಲು ತೂರಾಟ ನಡೆಸಿದವರು, ಪೊಲೀಸ್ ಲಾಠಿ ಬೀಸುತ್ತಿದ್ದಂತೆ ಲೈಬ್ರರಿಗೆ ತೆರಳಿ ಬಾಗಿಲು ಹಾಕಿಕೊಂಡು ಕುಳಿತಿದ್ದರು ಎಂದು ಬಿಜೆಪಿ ಆರೋಪಿಸಿತ್ತು.

17 ಆರೋಪಿಗಳನ್ನು ಬಂಧಿಸಿರುವ ದೆಹಲಿ ಪೊಲೀಸರು
ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇದುವರೆಗೂ 17 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಎಲ್ಲ ಆರೋಪಿಗಳನ್ನು ದೆಹಲಿ ಪೊಲೀಸರು ವಿಚಾರಣೆಗೆ ಒಳಪಿಡಿಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications